ಸಿದ್ದಾಪುರ ಮಗು ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಗುವಿನ ಶವ ಪತ್ತೆ
ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ತಾಯಿ, ಅಪಹರಣ ಕಟ್ಟುಕಥೆ
Team Udayavani, Jul 12, 2019, 3:14 PM IST
ಸಿದ್ದಾಪುರ: ಯಡಮೊಗೆ ಗ್ರಾಮದ ಕುಮ್ಟಿಬೇರು ಗ್ರಾಮದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗುವಿನ ಶವ ಪತ್ತೆಯಾಗಿದೆ. ಮನೆಯಿಂದ ಎರಡು ಕಿ.ಮೀ ದೂರದಲ್ಲಿ ಕುಬ್ಜಾ ನದಿಯಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಈಗ ಮಗು ಅಪಹರಣ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಏನಿದು ಘಟನೆ
ಯಡಮೊಗೆ ಗ್ರಾಮದ ಕುಮ್ಟಿ ಬೇರು ನಿವಾಸಿಗಳಾದ ಸಂತೋಷ್ ನಾಯ್ಕ ಮತ್ತು ರೇಖಾ ದಂಪತಿಯ ಕಿರಿಯ ಮಗು ಸಾನ್ವಿಕಾ ಗುರುವಾರ ಮುಂಜಾನೆ ನಾಪತ್ತೆಯಾಗಿತ್ತು. ಬೆಳಗಿನ ಜಾವ ಮುಸುಕುಧಾರಿಯೊಬ್ಬ ಮನೆಯೊಳಗೆ ಮಲಗಿದ್ದ ಮಗುವನ್ನು ಅಹರಿಸಿದ್ದಾನೆ. ಕುಬ್ಜಾ ನದಿ ದಾಟಿ ಮಗುವನ್ನು ಎತ್ತಿಕೊಂಡು ಹೊಗಿದ್ದಾನೆ. ನಾನು ಮತ್ತು ಆರು ವರ್ಷದ ಮಗ ಕಾಪಾಡಲು ಹೋದರೂ ನದಿ ದಾಟಲು ಸಾಧ್ಯವಾಗಲಿಲ್ಲ ಎಂದು ಮಗುವಿನ ತಾಯಿ ರೇಖಾ ತಿಳಿಸಿದ್ದರು. ಈ ಘಟನೆಯಿಂದ ಪರಿಸರದ ಜನತೆ ಬೆಚ್ಚಿ ಬಿದ್ದಿದ್ದರು. ಅಗ್ನಿ ಶಾಮಕ ದಳ, ಸ್ಥಳೀಯರು ಸೇರಿ ಹುಡುಕಿದರೂ ಗುರುವಾರ ಮಗು ಪತ್ತೆಯಾಗಿರಲಿಲ್ಲ.
ನಿಜಕ್ಕೂ ಆಗಿದ್ದೇನು?
ಅಪಹೃತ ಮಗುವಿನ ತಾಯಿ ಮತ್ತು ಸೋದರನ ಹೇಳಿಕೆಗಳ ವ್ಯತ್ಯಾಸದಿಂದ ಘಟನೆಯ ಬಗ್ಗೆ ಸಂಶಯಗೊಂಡ ಪೊಲೀಸರು ತಾಯಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅಸಲೀ ವಿಚಾರ ಹೊರ ಬಂದಿತ್ತು. ಅಸಲಿಗೆ ಮಗು ಅಪರಹರಣ ತಾಯಿ ಹೆಣೆದಿದ್ದ ಕಥೆಯಾಗಿತ್ತು.
ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ತಾಯಿ ರೇಖಾ ಅವರು ಇಬ್ಬರು ಮಕ್ಕಳೊಂದಿಗೆ ಗುರುವಾರ ಮುಂಜಾನೆ ಹತ್ತಿರದ ಕುಬ್ಜಾ ನದಿಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಈ ವೇಳೆಗೆ ಕಿರಿಯ ಮಗು ಕೈ ಜಾರಿ ಹರಿಯುವ ನದಿಗೆ ಬಿದ್ದಿತ್ತು. ಇದರಿಂದ ಭಯಗೊಂಡ ರೇಖಾ ಅವರು ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಮಗು ‘ಅಪಹರಣದ ಕಥೆ’ ಕಟ್ಟಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಮನೆಯಿಂದ ಎರಡು ಕಿ.ಮೀ ದೂರದಲ್ಲಿ ಕುಬ್ಜಾ ನದಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೇಖಾ ಅವರಿಗೆ ಕೌನ್ಸಲಿಂಗ್ ಮಾಡಲಾಗಿದೆ.
ಸ್ಥಳಕ್ಕೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ ಪಿ ದಿನೇಶ್ ಕುಮಾರ್, ಶಂಕರನಾರಾಯಣ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ