ಫಲ ನೀಡಿದ “ರಾತ್ರಿ ತರಗತಿ’ ಪ್ರಯೋಗ


Team Udayavani, May 14, 2018, 6:15 AM IST

1105kdpp1.jpg

ಉಪ್ಪುಂದ: ಎಸೆಸೆಲ್ಸಿ ವಿದ್ಯಾರ್ಥಿಗಳ ಶೇ. 100 ಫಲಿತಾಂಶಕ್ಕಾಗಿ ವಿವಿಧ ರೀತಿಯ ತರಬೇತಿ, ಹೆಚ್ಚುವರಿ ತರಗತಿಗಳನ್ನು ಮಾಡುವುದು ಸಾಮಾನ್ಯ. ಬಿಜೂರಿನ ಸರಕಾರಿ ಪ್ರೌಢಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ರಾತ್ರಿ ಶಾಲೆ ನಡೆಸಿರುವುದು ಫ‌ಲಕೊಟ್ಟಿದೆ.  

ನಗರಗಳಂತೆ ಇಲ್ಲಿನ ಶಿಕ್ಷಕರು ರಾತ್ರಿ ತರಗತಿ ಆರಂಭಿಸುವ ಹೊಸ ಪ್ರಯೋಗಕ್ಕೆ ಮುಂದಾಗಿದ್ದರು. ವಿದ್ಯಾರ್ಥಿಗಳ ಕಲಿಕೆಗೆ ಸಹಾಯಕವಾಗಿ ಸಂಜೆ ಹಾಗೂ ರಾತ್ರಿ ಸಮಯವನ್ನು ಓದಲು, ಬರೆಯಲು ಅವಕಾಶ ಕಲ್ಪಿಸಿ ಪರೀಕ್ಷೆಯಲ್ಲಿ ಹೆಚ್ಚಿನ ಸಾಧನೆ ಮಾಡಲು ಯೋಜನೆ ರೂಪಿಸಿದ್ದರು.  

ಎಲ್ಲ ವಿದ್ಯಾರ್ಥಿಗಳು ಪಾಸ್‌ 
ಕಳೆದ ನವೆಂಬರ್‌ ತಿಂಗಳಿನಿಂದ ರಾತ್ರಿ ತರಗತಿಯನ್ನು ಆರಂಭಿಸಲಾಗಿತ್ತು. ಒಟ್ಟು 19 ವಿದ್ಯಾರ್ಥಿಗಳಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. 

ಜಯಶ್ರೀ ಎಸ್‌.589 ಅಂಕ ಗಳಿಸಿ ಪ್ರಥಮ ಸ್ಥಾನಿಯಾದರೆ, ದ್ವಿತೀಯ ಮನೋಜ 574, ತೃತೀಯ ಸುಷ್ಮ 570 ಅಂಕ ಪಡೆದಿದ್ದಾರೆ. 
 
ಕಲಿಕೆಯಲ್ಲಿ ಹಿಂದುಳಿದವರಿಗೆ ಆದ್ಯತೆ 
ಈ ವಿಶೇಷ ತರಗತಿಯಲ್ಲಿ ಕಲಿಕೆಯಲ್ಲಿ ತೀರಾ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರಾಧಾನ್ಯತೆ ನೀಡಲಾಗಿತ್ತು.  
ವಿದ್ಯಾರ್ಥಿಗಳಿಗೆ ನೈತಿಕ ಪ್ರೋತ್ಸಾಹ, ಮಾನಸಿಕ ಧೈರ್ಯ ತುಂಬುವುದರೊಂದಿಗೆ ಅವರ ಕಲಿಕೆ ಬಗ್ಗೆ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಪ್ರೇರೆಪಿಸುವ ಜತೆಗೆ ಪ್ರತಿ ವಿದ್ಯಾರ್ಥಿಯ ಕಲಿಕೆ ಮೇಲೆ ನಿಗಾ ವಹಿಸುವುದೂ ಶಿಕ್ಷಕರ ಉದ್ದೇಶವಾಗಿತ್ತು. 

ಈ ಶಾಲೆ ವಿಶಾಲ ಮೈದಾನ, ಉತ್ತಮ ಪರಿಸರ, ಸ್ಮಾರ್ಟ್‌ ಕ್ಲಾಸ್‌ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒಳಗೊಂಡಿದೆ. 

ಆಟದೊಂದಿಗೆ ಪಾಠ
ವಿದ್ಯಾರ್ಥಿಗಳಿಗೆ ಸಂಜೆ ಆಟವಾಡಲು ಅವಕಾಶ ನೀಡಲಾಗಿತ್ತು. ಬಳಿಕ ಸಂಜೆ 5ರಿಂದ 9ರವರೆಗೆ ವೇಳಾಪಟ್ಟಿ ಪ್ರಕಾರ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲು ಯೋಜನೆ ರೂಪಿಸಲಾಗಿತ್ತು.

ಪ್ರಯತ್ನಕ್ಕೆ ಸಿಕ್ಕ ಫಲ
ಎಲ್ಲ ಶಿಕ್ಷಕರ, ವಿದ್ಯಾರ್ಥಿಗಳ ಶ್ರಮದ ಜತೆ ಹೆತ್ತವರ ಪ್ರೋತ್ಸಾಹದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ನಿರೀಕ್ಷೆಗಿಂತ ಹೆಚ್ಚು ಅಂಕ ಪಡೆದಿರುವುದು ನಮ್ಮ ಶ್ರಮದ ಸಾರ್ಥಕತೆ ಎನ್ನಿಸಿದೆ. ಈ ಪ್ರಯೋಗ ಮುಂದುವರಿಸುತ್ತೇವೆ.  
-ಸುಬ್ರಹ್ಮಣ್ಯ ಮಧ್ದೋಡಿ,ಪ್ರಭಾರ ಮುಖ್ಯ ಶಿಕ್ಷಕ

ರಾತ್ರಿ ತರಗತಿ ಸಹಕಾರಿ
ರಾತ್ರಿ ತರಗತಿಯಿಂದಾಗಿ ಸಮಯವನ್ನು ಸದುಪಯೋಗಿಸಿಕೊಳ್ಳಲು ಸಹಾಯಕವಾಯಿತು. ಶಿಕ್ಷಕರ ನಿರಂತರ ಪ್ರೋತ್ಸಾಹವೇ ನಮಗೆ ಹೆಚ್ಚು ಅಂಕ ಪಡೆಯಲು ಸಾಧ್ಯವಾಯಿತು. ಎಲ್ಲ ಸ್ನೇಹಿತರ ಪರವಾಗಿ ಶಿಕ್ಷಕರಿಗೆ ಕೃತಜ್ಞತೆ ತಿಳಿಸುತ್ತೇವೆ.
– ಮನೋಜ,10ನೇ ತರಗತಿ ವಿದ್ಯಾರ್ಥಿ

ಉತ್ತಮ ಸಾಧನೆ
ಶಿಕ್ಷಕರ ಹೊಸ ಪ್ರಯತ್ನದಿಂದ  ಈ ಸಾಧನೆ ಸಾಧ್ಯವಾಗಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಪಾಸ್‌ ಆಗಿರುವುದು ಉತ್ತಮ ಬೆಳವಣಿಗೆ ಶಿಕ್ಷಕರಿಗೆ ನಮ್ಮ ಸಹಕಾರ ಸದಾ ಇರುತ್ತದೆ.
– ಸುಬ್ರಹ್ಮಣ್ಯ ಖಾರ್ವಿ,ಹೆತ್ತವರು

– ಕೃಷ್ಣ ಬಿಜೂರು

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.