ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

 ಗ್ರಾ.ಪಂ.ಗಳಲ್ಲಿ ವಿತರಿಸಲು ಸರಕಾರ ಆದೇಶಿಸಿದ್ದರೂ ಸಿಗುತ್ತಿಲ್ಲ

Team Udayavani, May 21, 2022, 7:20 AM IST

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಕಾರ್ಕಳ: ನಾಗರಿಕರಿಗೆ ಗ್ರಾ.ಪಂ. ಕಚೇರಿಗಳಲ್ಲೇ ಜನನ -ಮರಣ ಪ್ರಮಾಣಪತ್ರ ಸಿಗುವಂತೆ ಮಾಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನವಾಗದ ಪರಿಣಾಮ ಈ ದಾಖಲೆಗಾಗಿ ಜನರು ಕಚೇರಿಗಳಿಗೆ ಅಲೆದಾಡುವ ಸ್ಥಿತಿ ಮುಂದುವರಿದಿದೆ.

ರಾಜ್ಯ ಸರಕಾರ ಜನನ, ಮರಣ ಪ್ರಮಾಣಪತ್ರವನ್ನು ಪಿಡಿಒಗಳ ಮೂಲಕ ಗ್ರಾ.ಪಂ. ಮಟ್ಟದಲ್ಲಿ ವಿತರಿಸಲು ಆದೇಶಿಸಿತ್ತು. ಆದೇಶವಾಗಿ ವರ್ಷ ಸಮೀಪಿಸಿದ್ದರೂ ಗ್ರಾ.ಪಂ.ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಇವು ಗಳ ವಿತರಣೆ ಸಾಧ್ಯವಾಗಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆಯು ಗ್ರಾಮೀಣ ಭಾಗದಲ್ಲಿ ನಾಗರಿಕ ನೋಂದಣಿ ಯನ್ನು ಬಲಪಡಿಸಿ, ಶತ ಪ್ರತಿಶತ ಮರಣ, ಜನನ ನೋಂದಣಿಯನ್ನು ದಾಖಲಿಸಲು ಅನುವಾಗುವಂತೆ
ನೋಂದಣಾಧಿಕಾರಿಯಾಗಿ ಪಿಡಿಒ ಗಳನ್ನು ನೇಮಿಸಿತ್ತು.

ಆದೇಶ ಬದಲಾವಣೆ
ಇಲಾಖೆಯ ಪ್ರಾರಂಭದ ಆದೇಶ ಪ್ರಕಾರ ಪ್ರಮಾಣಪತ್ರ ವಿತರಿಸಲು ಪಿಡಿಒಗಳನ್ನು ಮಾತ್ರ ನೇಮಿಸ ಲಾಗಿತ್ತು. ಆದರೆ ಗ್ರಾಮ ಲೆಕ್ಕಿಗರು ಈ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕಿದ್ದರಿಂದ ಸರಕಾರ 2022ರ ಜ. 7 ಮತ್ತು ಫೆ. 22ರಂದು ಮರು ಆದೇಶ ಹೊರಡಿಸಿದೆ.

ಅದರಲ್ಲಿ ನೋಂದಣಿ ಅಧಿಕಾರಿಯಾಗಿ ಪಿಡಿಒ ಮತ್ತು ಉಪ ನೋಂದಣಿ ಅಧಿಕಾರಿಯಾಗಿ ಗ್ರಾಮಲೆಕ್ಕಿಗರಿಗೆ ಜವಾಬ್ದಾರಿ ಹಂಚಿಕೆ ಮಾಡಿರುವುದನ್ನು ಉಲ್ಲೇಖಿಸಲಾಗಿದೆ. ಆದರೂ ಪಿಡಿಒಗಳು ಜನನ-ಮರಣ ನೋಂದಣಾಧಿಕಾರಿಯಾಗಿ ಕಾರ್ಯಾ ಚರಿಸುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ.

ಈಗ ಸಚಿವರೂ ಇಲ್ಲ!
ಗ್ರಾ. ಮತ್ತು ಪಂ. ರಾಜ್‌ ಖಾತೆ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರ ರಾಜೀನಾಮೆಯ ಬಳಿಕ ಈ ಖಾತೆಗೆ ಹೊಸ ಸಚಿವರ ನೇಮಕವಾಗಿಲ್ಲ. ಖಾತೆ ಸದ್ಯ ಮುಖ್ಯಮಂತ್ರಿಗಳ ನಿರ್ವಹಣೆಯಲ್ಲಿದೆ. ಜನನ -ಮರಣ ಪ್ರಮಾಣ ಪತ್ರವನ್ನು ಗ್ರಾ.ಪಂ.ಗಳಲ್ಲಿ ವಿತರಿಸುವ ಸಂಬಂಧ ಮುಖ್ಯಮಂತ್ರಿಗಳೇ ಗಮನಹರಿಸಿ ಪರಿಹಾರ ಕಂಡು ಕೊಳ್ಳಬೇಕಿದೆ.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗಳಿಗೆ ಜನನ ಮತ್ತು ಮರಣ ನೋಂದಣಿ ಪತ್ರ ವಿತರಿಸುವ ಕುರಿತು ಈ ವರೆಗೂ ತರಬೇತಿ ಸಿಕ್ಕಿಲ್ಲ. ಪ್ರಮಾಣಪತ್ರ ವಿತರಿಸಲು ಯಾವುದೇ ಅಭ್ಯಂತರವಿಲ್ಲ. ಕಾರ್ಯಾದೇಶ ದೊರೆತಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದು ರಾಜ್ಯ ಪಿಡಿಒ ಸಂಘದ ಅಧ್ಯಕ್ಷ ಬೋರಯ್ಯ ಅವರು ಹೇಳಿದ್ದಾರೆ.

ಏನು ಕಾರಣ?
ಸರಕಾರ ಹೊರಡಿಸಿದ ಆದೇಶ ಪೂರ್ಣಪ್ರಮಾಣದಲ್ಲಿ ಕಾರ್ಯಗತವಾಗದೆ ಇರುವುದು ಇದಕ್ಕೆ ಕಾರಣ. ಜನನ-ಮರಣ ಪತ್ರ ವಿತರಣೆಗೆ ಸಂಬಂಧಿಸಿದ ಸಾಫ್ಟ್ ವೇರ್‌ನ ತಾಂತ್ರಿಕ ತೊಂದರೆ ಗಳೂ ಕಾರಣ ಎಂದು ಪಿಡಿಒಗಳು ಹೇಳುತ್ತಾರೆ. ಈ ಬಗ್ಗೆ ಪಿಡಿಒಗಳಿಗೆ ತರಬೇತಿಯನ್ನೂ ನೀಡಲಾಗಿಲ್ಲ. ಜನನ-ಮರಣ ಪ್ರಮಾಣ ಪತ್ರವನ್ನು ಆಯಾ ಆಸ್ಪತ್ರೆ, ಪಾಲಿಕೆ, ನಗರ ಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ಮಾತ್ರವೇ ನೀಡಲಾಗುತ್ತಿತ್ತು. ಅನಂತರ ಗ್ರಾ.ಪಂ.ಗಳಲ್ಲಿ ಪಿಡಿಒ ಅವರನ್ನು ಜನನ- ಮರಣ ಪ್ರಮಾಣ ಪತ್ರ ವಿತರಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಇ-ತಂತ್ರಾಂಶದಲ್ಲಿ ಪಿಡಿಒ ಅವರ ಡಿಜಿಟಲ್‌ ಸಹಿಯ ಮೂಲಕ ಈ ದಾಖಲೆ ವಿತರಿಸುವಂತೆ ಆದೇಶ ಇದೆ.

ಗ್ರಾ.ಪಂ. ಕಚೇರಿಯಲ್ಲಿ ಪ್ರಮಾಣಪತ್ರ ವಿತರಣೆಗೆಸಾಫ್ಟ್ವೇರ್‌ ಅಪ್‌ಡೇಟ್‌ಗೊಳಿಸುವ ತಾಂತ್ರಿಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರ ಅದು ಸರಿ ಹೋಗಲಿದೆ.
-ಡಾ| ಕುಮಾರ್‌
ಸಿಇಒ ದ. ಕನ್ನಡ ಜಿ.ಪಂ.

ಪಿಡಿಒಗಳಿಗೆ ಬಳಕೆ ಐಡಿ,ಪಾಸ್‌ವರ್ಡ್‌ ನೀಡಿಲ್ಲ. ಅವರಿಗೆ ತರಬೇತಿಯೂ ಆಗಿಲ್ಲ. ಇದಕ್ಕೆ 2-3 ತಿಂಗಳು ಬೇಕು. ಬಳಿಕ ಗ್ರಾ.ಪಂ.ಗಳಲ್ಲೇ ಜನನ- ಮರಣ ಪ್ರಮಾಣಪತ್ರ ವಿತರಣೆ ಆಗಲಿದೆ.
-ಎಚ್‌.ಕೆ. ಪ್ರಸನ್ನ,
ಸಿಇಒ, ಉಡುಪಿ ಜಿ.ಪಂ

- ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.