ಹೆಬ್ರಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಬಂಧನ
Team Udayavani, Sep 7, 2017, 8:39 AM IST
ಹೆಬ್ರಿ: ಬಿಜೆಪಿ ವತಿಯಿಂದ ಗುರುವಾರ ನಡೆಯುವ ಮಂಗಳೂರು ಚಲೋ ಪೂರ್ವಭಾವಿಯಾಗಿ ಹೆಬ್ರಿ ಶಕ್ತಿಕೇಂದ್ರದ ವತಿಯಿಂದ ಬುಧವಾರ ಹೆಬ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಲಾಯಿತು. ಸುನಿಲ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಅನಂತರ ಅವ್ಯಾಹತ ವಾಗಿ ಹಿಂದೂ ಯುವಕರ, ಪರಿವಾರ ಸಂಘಟನೆಯ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ ಎಂದರು.
ಪ್ರತಿಭಟನೆ ನಡೆಸಿಯೇ ಸಿದ್ಧ
ಶಿವಮೊಗ್ಗ ಜಿಲ್ಲೆಯಿಂದ ಸುಮಾರು 1,500ಕ್ಕೂ ಹೆಚ್ಚಿನ ಬೈಕ್ಗಳಲ್ಲಿ ಬಿ.ಜೆ.ಪಿ. ಕಾರ್ಯಕರ್ತರು ಹೆಬ್ರಿಗೆ ಬರುವುದನ್ನು ಸರಕಾರ ಪೊಲೀಸರ ಮುಖಾಂತರ ತಡೆದಿದೆ. ಎಷ್ಟೇ ತಡೆದರೂ 25,000ಕ್ಕೂ ಮಿಕ್ಕಿದ ಕಾರ್ಯಕರ್ತರು ಸೇರಿ ಮಂಗಳೂರಿನಲ್ಲಿ ಪ್ರತಿಭಟನೆ ಯನ್ನು ಮಾಡಿಯೇ ಸಿದ್ಧ ಎಂದರು.
ಕಾರ್ಯಕರ್ತರ ಬಂಧನ
ಹೆಬ್ರಿ ಬಸ್ ತಂಗುದಾಣದಲ್ಲಿ ನಡೆದ ಪ್ರತಿಭಟನೆಯ ಬಳಿಕ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಹೊರಟ ಬೈಕ್ ರ್ಯಾಲಿಯನ್ನು ಡಿವೈಎಸ್ಪಿ ಕುಮಾರಸ್ವಾಮಿ ನೇತೃತ್ವದ ಪೊಲೀಸ್ ತಂಡ ತಡೆಯಿತು. ಸುಮಾರು 150 ಮಂದಿಯನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಸಮೃದ್ಧಿ ಪ್ರಕಾಶ್ ಶೆಟ್ಟಿ, ಮುಟ್ಲಪಾಡಿ ಸತೀಶ್ ಶೆಟ್ಟಿ, ಜ್ಯೋತಿ ಹರೀಶ್, ಪ್ರಮೀಳಾ ಹರೀಶ್, ಸುಕೇಶ್ ಹೆಗ್ಡೆ, ಸಮಿತ್ ಶೆಟ್ಟಿ,ಸುಧಾಕರ ಹೆಗ್ಡೆ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ