ಸಿದ್ದಾಪುರ ಜಿ.ಪಂ. ಉಪ ಚುನಾವಣೆ: ಬಿಜೆಪಿ ಜಯಭೇರಿ


Team Udayavani, Jun 18, 2018, 2:10 AM IST

rohit-kumar-shetty-17-6.jpg

ಕುಂದಾಪುರ/ಸಿದ್ದಾಪುರ: ಸಿದ್ದಾಪುರ ಜಿಲ್ಲಾ ಪಂಚಾಯತ್‌ ಕ್ಷೇತ್ರದ ತೆರವಾದ ಸದಸ್ಯ ಸ್ಥಾನಕ್ಕೆ ಜೂ. 14 ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ರೋಹಿತ್‌ ಕುಮಾರ್‌ ಶೆಟ್ಟಿಯವರು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಕುಮಾರ್‌ ಶೆಟ್ಟಿ ವಿರುದ್ಧ 3,360 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಾಲಾಡಿ ತಾರಾನಾಥ ಶೆಟ್ಟಿಯವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆದ ಈ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ರೋಹಿತ್‌ ಕುಮಾರ್‌ ಶೆಟ್ಟಿ 11,926 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪ್ರಸನ್ನ ಕುಮಾರ್‌ 8,566 ಮತಗಳು ಸಿಕ್ಕರೆ, ಜೆಡಿಎಸ್‌ ಅಭ್ಯರ್ಥಿ ಅರುಣ ಶೆಟ್ಟಿ 276 ಮತಗಳನ್ನು ಪಡೆದಿದ್ದಾರೆ.

ನೋಟಾಕ್ಕೆ 280 ಮತಗಳು
ವಿಶೇಷವೆಂದರೆ ಈ ಬಾರಿ 280 ಮತಗಳು ನೋಟಾಕ್ಕೆ ಬಿದ್ದಿದೆ. ಜೆಡಿಎಸ್‌ ಅಭ್ಯರ್ಥಿ ಪಡೆದ ಮತಗಳಿಗಿಂತ 4 ಹೆಚ್ಚಿನ ಮತಗಳು ನೋಟಾಕ್ಕೆ ಸಿಕ್ಕಂತಾಗಿದೆ. ಕ್ಷೇತ್ರದ ಒಟ್ಟು 33,188 ಮತದಾರರ ಪೈಕಿ 21,048 ಮತಗಳು ಚಲಾವಣೆಯಾಗಿದೆ. ಕುಂದಾಪುರದ ಮಿನಿವಿಧಾನಸೌಧದಲ್ಲಿ ರವಿವಾರ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಿಜಯಿ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದರು.

ಸಿದ್ದಾಪುರದಲ್ಲಿ ಬಿಜೆಪಿ ವಿಜಯೋತ್ಸವ 
ಉಪಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ರೋಹಿತ್‌ ಕುಮಾರ್‌ ಶೆಟ್ಟಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿಯ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಸಿದ್ದಾಪುರ ಪೇಟೆ, ಉಳ್ಳೂರು, ಹೊಸಂಗಡಿ, ಆಜ್ರಿ, ಯಡಮೊಗೆ, ಕೆರಾಡಿ ಸೇರಿದಂತೆ ವಿವಿಧೆಡೆ ವಿಜಯೋತ್ಸವ ಆಚರಿಸಿದರು. ಹಲವೆಡೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಮುಖಂಡರಾದ ದೀಪಕ್‌ ಕುಮಾರ್‌ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬಾಲಚಂದ್ರ ಭಟ್‌, ಮೂರ್ತಿ ಶೆಟ್ಟಿ, ರವಿ ಗಾಣಿಗ ಮಲ್ಲಾರಿ, ಗೋಪಾಲ್‌ ಕಾಂಚನ್‌, ತಾಲೂಕು ಪಂಚಾಯತ್‌ ಸದಸ್ಯ ಉಮೇಶ್‌ ಶೆಟ್ಟಿ ಕಲ್ಗದ್ದೆ ಸೇರಿದಂತೆ ಅನೇಕ ಮಂದಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಾನ ಉಳಿಸಿಕೊಂಡ ಬಿಜೆಪಿ
ಕಳೆದ ಜಿ..ಪಂ. ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಹಾಲಾಡಿ ತಾರನಾಥ ಶೆಟ್ಟಿ ಗೆದ್ದಿದ್ದು, ಈ ಬಾರಿ ರೋಹಿತ್‌ ಕುಮಾರ್‌ ಅವರ ಗೆಲುವಿನೊಂದಿಗೆ ಮತ್ತೆ ಈ ಸದಸ್ಯ ಸ್ಥಾನವನ್ನು ಬಿಜೆಪಿ ತನ್ನಲ್ಲಿಯೇ ಉಳಿಸಿಕೊಂಡಂತಾಗಿದೆ. ಅದಕ್ಕೂ ಹಿಂದೆ ಕೂಡ ಬಿಜೆಪಿ ಬೆಂಬಲಿತ ಮಮತಾ ಆರ್‌. ಶೆಟ್ಟಿ ಗೆದ್ದಿದ್ದರು. ಅವರಿಗಿಂತ ಮುನ್ನ ಕಾಂಗ್ರೆಸ್‌ನ ಸುಧಾಕರ ಕುಲಾಲ್‌ ಗೆಲುವು ಸಾಧಿಸಿದ್ದರು.

ಸಾಣೂರು ಗ್ರಾ.ಪಂ. ಉಪ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿ ರವೀಂದ್ರ ಶಾಂತಿ ಗೆಲುವು

ಕಾರ್ಕಳ:
ತಾಲೂಕಿನ ಸಾಣೂರು ಗ್ರಾ.ಪಂ.ನ ಮೂರನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಕೆ. ರವೀಂದ್ರ ಶಾಂತಿ 32 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸಾಣೂರು ಗ್ರಾ.ಪಂ. ಮೂರನೇ ವಾರ್ಡ್‌ ವ್ಯಾಪ್ತಿಯಲ್ಲಿ 1005 ಮತದಾರರಿದ್ದು, 738 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಕೆ. ರವೀಂದ್ರ 385 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ನಾಗೇಂದ್ರ 353 ಮತಗಳನ್ನು ಪಡೆದುಕೊಂಡಿದ್ದಾರೆ.

ಕೆ. ರವೀಂದ್ರ ಶಾಂತಿ ಮೂರನೇ ವಾರ್ಡ್‌ನ ಕಾಂಗ್ರೆಸ್‌ ಅಧ್ಯಕ್ಷರೂ ಆಗಿದ್ದಾರೆ. ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಕಳ ನಗರದಲ್ಲಿ ರೋಡ್‌ ಶೋ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಾಣೂರು ಗ್ರಾ.ಪಂ.ನ ಮೂರನೇ ವಾರ್ಡ್‌ ಇಂದಿರಾನಗರದ  ಸದಸ್ಯರಾಗಿದ್ದ ಖುರ್ಷಿದ್‌ ಅವರು ಕಳೆದ 7 ತಿಂಗಳ ಹಿಂದೆ ಅನಾರೋಗ್ಯದಿಂದ ಸಾವೀಗೀಡಾದ ಹಿನ್ನೆಲೆಯಲ್ಲಿ ಆ ವಾರ್ಡ್‌ಗೆ ಜೂ. 14ರಂದು ಚುನಾವಣೆ ನಡೆದಿತ್ತು.

ಕಾರ್ಯಕರ್ತರ ಶ್ರಮ, ನಾಯಕರ ಬೆಂಬಲ ಪಕ್ಷದ ನಾಯಕರ ಬೆಂಬಲ ಹಾಗೂ ಬಿಜೆಪಿಯ ಕಾರ್ಯಕರ್ತರ ಅಪಾರವಾದ ಪರಿಶ್ರಮ ಹಾಗೂ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರ ಸಹಕಾರದಿಂದ ಗೆಲುವು ಸಿಕ್ಕಿದೆ. ಇಲ್ಲಿ ಬೇಸಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಅದಕ್ಕೆ ಆದ್ಯತೆ ಕೊಟ್ಟು ಕಾರ್ಯನಿರ್ವಹಿಸುತ್ತೇನೆ. ಸಾಮಾನ್ಯ ಹಾಗೂ ಬಡ ವರ್ಗದ ಜನರ ಸೇವೆಗೆ ಸದಾ ಶ್ರಮಿಸುತ್ತೇನೆ. 
– ರೋಹಿತ್‌ ಕುಮಾರ್‌ ಶೆಟ್ಟಿ, ವಿಜಯಿ ಅಭ್ಯರ್ಥಿ

ನನ್ನ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ವಾರ್ಡ್‌ನ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನಿಂದಾಗುವಷ್ಟು ಜನಸೇವೆ ಮಾಡುತ್ತೇನೆ.
– ಕೆ. ರವೀಂದ್ರ ಶಾಂತಿ, ಗೆಲುವು ಸಾಧಿಸಿದ ಅಭ್ಯರ್ಥಿ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.