ಕಾಂಗ್ರೆಸ್‌ – ಜೆಡಿಎಸ್‌ ಹಿಂದೂ ವಿರೋಧಿ ನೀತಿ


Team Udayavani, Jun 7, 2018, 2:45 AM IST

protest-6-6.jpg

ಉಡುಪಿ: ರಾಜ್ಯದ ಹಿಂದಿನ ಸರಕಾರದಲ್ಲಿ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದ್ದರು. ಈಗ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಕೂಡ ಒಂದಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಉಡುಪಿ ಶಾಸಕ ಕೆ. ರಘಪತಿ ಭಟ್‌ ಹೇಳಿದ್ದಾರೆ. ಪೆರ್ಡೂರಿನ ಗೋಸಾಗಾಟ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಮತ್ತು ಸರಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜೂ.6ರಂದು ಬಿಜೆಪಿ, ವಿಎಚ್‌ಪಿ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಗೋಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಕೆಲವು ಪೊಲೀಸರು ಗೋಕಳ್ಳರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಅಂತಹ ಪೊಲೀಸರ ಆತ್ಮಸ್ಥೈರ್ಯವನ್ನು ಕುಗ್ಗಿಸಬಾರದು. ಪೆರ್ಡೂರು ಘಟನೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಮಾತಿನ ಮೇಲೆ ಭರವಸೆ ಇಟ್ಟು ಕೆಲವು ಮಂದಿ ಅಮಾಯಕರು ಶರಣಾದರು. ಆದರೆ ಪೊಲೀಸರು ನೀಡಿದ ಭರವಸೆ ಉಳಿಸಿಕೊಳ್ಳಲಿಲ್ಲ ಎಂದು ಹೇಳಿದರು.

ಹಿಂದೂ ಯುವಕರ ಮೇಲೆ ಕಣ್ಣು: ಲಾಲಾಜಿ
ಪೆರ್ಡೂರಿನ ಜನತೆ ಈ ಹಿಂದಿನಿಂದಲೂ ಹಿಂದೂ ಸಂಘಟನೆ, ಬಿಜೆಪಿ ಪರ ಇದ್ದವರು. ಹಾಗಾಗಿ ಸರಕಾರ ಅವರ ಮೇಲೆ ಕಣ್ಣಿಟ್ಟಿದೆ. ಮೊನ್ನೆ ಸಾವನ್ನಪ್ಪಿದ ಹಸನಬ್ಬ ಈ ಹಿಂದೆಯೂ ಪೆರ್ಡೂರು ಭಾಗದಲ್ಲಿ ಹಲವು ಬಾರಿ ಗೋಕಳ್ಳತನ ಸಂದರ್ಭ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದರು. ಅನಂತರ ದಮ್ಮಯ್ಯ ಹಾಕಿ ಹೋಗುತ್ತಿದ್ದರು. ಶೀರೂರು ಮಠದಿಂದಲೂ ದನಗಳನ್ನು ಕಳವು ಮಾಡಲಾಗಿತ್ತು. ಹಸನಬ್ಬ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ನಿರಪರಾಧಿ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಸಹಿಸಲಾಗದು ಎಂದು ಹೇಳಿದರು. ವಿಹಿಂಪ ಜಿಲ್ಲಾಧ್ಯಕ್ಷ ವಿಲಾಸ್‌ ನಾಯಕ್‌ ಮಾತನಾಡಿ, ಅಮಾಯಕರ ಬಿಡುಗಡೆಗೆ 7 ದಿನಗಳ  ಗಡುವು ನೀಡಲಾಗುವುದು. ಅನಂತರ ಎಲ್ಲ ಪ್ರಖಂಡಗಳಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದರು.

ಬಜರಂಗದಳ ಕರ್ನಾಟಕ ದಕ್ಷಿಣ ಸಂಚಾಲಕ ಸುನಿಲ್‌ ಕೆ.ಆರ್‌. ಮಾತನಾಡಿ ಈಗ ಗೋವುಗಳನ್ನು ಸಾಗಿಸಲು ಹೊಸ ವಾಹನಗಳನ್ನು ಬಳಸಲಾಗುತ್ತಿದೆ. ಪೆರ್ಡೂರಿನಲ್ಲಿ ಸ್ಕಾರ್ಪಿಯೋ ವಾಹನದಲ್ಲಿ 14 ಗೋವುಗಳನ್ನು ಸಾಗಿಸಲಾಗುತ್ತಿತ್ತು. ತಲವಾರು ಹಿಡಿದು ಹಟ್ಟಿಗಳಿಂದ ದನ ಕಳ್ಳತನ ಮಾಡಲಾಗುತ್ತಿದೆ. ಗೋವುಗಳ ಅಕ್ರಮ ಸಾಗಾಟವನ್ನು ತಡೆದರೆ ಇಂತಹ ಘಟನೆಗಳು ನಡೆಯಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪಕ್ಷದ ಮುಖಂಡರಾದ ತಿಂಗಳ ವಿಕ್ರಮಾರ್ಜುನ ಹೆಗ್ಡೆ, ಉದಯ ಕುಮಾರ ಶೆಟ್ಟಿ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಸುಪ್ರಸಾದ ಶೆಟ್ಟಿ  ಬೈಕಾಡಿ, ಪ್ರಭಾಕರ ಪೂಜಾರಿ, ಶ್ಯಾಮಲಾ ಕುಂದರ್‌, ಗುರ್ಮೆ ಸುರೇಶ್‌ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಕಾಡೂರು ಸುರೇಶ್‌ ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ವಿಹಿಂಪ, ಬಜರಂಗದಳದ ಮುಖಂಡರು, ಜಿ.ಪಂ., ನಗರಸಭಾ ಸದಸ್ಯರು ಪಾಲ್ಗೊಂಡಿದ್ದರು. ಕುಯಿಲಾಡಿ ಸುರೇಶ್‌ ನಾಯಕ್‌ ಮತ್ತು ಕುತ್ಯಾರು ನವೀನ್‌ ಶೆಟ್ಟಿ ನಿರ್ವಹಿಸಿದರು. ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪೊಲೀಸ್‌ ಕಸ್ಟಡಿಯಲ್ಲಿ ಸಾವು
ಇದು ಹಿಂದೂ ಕಾರ್ಯಕರ್ತರಿಂದ ನಡೆದಿರುವ ಕೊಲೆ ಅಲ್ಲ. ಪೊಲೀಸ್‌ ಕಸ್ಟಡಿಯ ಸಾವು. ಹೃದಯಸಂಬಂಧಿ ಕಾಯಿಲೆ  ಇದ್ದ ಹುಸೈನಬ್ಬ ಸಾವನ್ನಪ್ಪಲು ಪೊಲೀಸರ ಅಚಾತುರ್ಯ ಕಾರಣವಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಕಾಯದೆ ಕಾರ್ಯಕರ್ತರ ವಿರುದ್ಧ  ಕೊಲೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಚಿಕ್ಕಮಗಳೂರಿನಲ್ಲಿ  ಕಬೀರ್‌ ಎಂಬ ಗೋಸಾಗಾಟ ಗುಂಡಿಗೆ ಬಲಿಯಾದಾಗ ಸರಕಾರ ಪರಿಹಾರ ನೀಡಿತು. ಆದರೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮೃತಪಟ್ಟಾಗ ಯಾವುದೇ ಪರಿಹಾರ ನೀಡಿಲ್ಲ. ಪೆರ್ಡೂರು ಘಟನೆಯಲ್ಲಿ ದನಗಳು ಕೂಡ ಸಾವನ್ನಪ್ಪಿವೆ. ಅವುಗಳ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಅಮಾಯಕರ ಬಂಧನದ ಕುರಿತು ಈಗಾಗಲೇ ಎಸ್‌.ಪಿ.ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಸ್ತುಸ್ಥಿತಿ ಮನವರಿಕೆ ಮಾಡಲಾಗಿದೆ. ಆದರೆ ಪೊಲೀಸರ ಮೇಲೆ ಮುಖ್ಯಮಂತ್ರಿಯವರೇ ನೇರ ಒತ್ತಡ ಹಾಕುತ್ತಿದ್ದಾರೆ. ಕರಾವಳಿಯಲ್ಲಿ ಮಳೆ ಬಂದು ಅಪಾರ ಹಾನಿಯಾದರೂ ಅದರ ಬಗ್ಗೆ ವಿಚಾರಿಸದ ಮುಖ್ಯಮಂತ್ರಿ ಈ ಘಟನೆಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಭಟ್‌ ಆರೋಪಿಸಿದರು.

ಗೋಕಳ್ಳರಿಗೆ ರಕ್ಷಣೆ
ಸರಕಾರ ಗೋಕಳ್ಳರನ್ನು ರಕ್ಷಿಸುತ್ತಿದೆ. ಪೊಲೀಸರು ಅಮಾಯಕರನ್ನು ಬಿಡುಗಡೆಗೊಳಿಸದಿದ್ದರೆ ಸದನದಲ್ಲಿಯೂ ಪ್ರತಿಭಟಿಸಲಾಗುವುದು ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅಸಹಜ ಸಾವು ಕೊಲೆಯಾಯ್ತು
ಹೃದಯಾಘಾತದಿಂದ ಮೃತಪಟ್ಟ ಕಾರಣ ಪೊಲೀಸರು ಅಸಹಜ ಪ್ರಕರಣವೆಂದು ದಾಖಲಿಸಿಕೊಂಡಿದ್ದರು. ಆದರೆ ಅನಂತರ ಸರಕಾರದ ಒತ್ತಡದಿಂದಾಗಿ ಕೊಲೆ ಪ್ರಕರಣವೆಂದು ಬದಲಾಯಿಸಿದರು. ದನಗಳನ್ನು ನೋಡುವುದಕ್ಕಾಗಿ ಹೋಗಿದ್ದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಫೀಕ್‌ ಎಂಬ ಪೊಲೀಸ್‌ ಅಧಿಕಾರಿ ‘ಕೇಸರಿ ಶಾಲು ಹಾಕಿದರೆ ಒಳಗೆ ಹಾಕುತ್ತೇನೆ’ ಎಂದಿದ್ದಾರೆ. ಕೇಸರಿ ಶಾಂತಿ, ಅಭಿವೃದ್ಧಿಯ ಸಂಕೇತ. ಕೇಸರಿ ಹೆಸರಿನಲ್ಲಿ ತೊಂದರೆ ನೀಡಿದರೆ ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಮರಣೋತ್ತರ ವರದಿ ಬಂದ ಕೂಡಲೇ ಪೊಲೀಸರು ಬಿ ರಿಪೋರ್ಟ್‌ ಹಾಕಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.