ನದಿಗೆ ಹಾರಿ ಉದ್ಯಾವರ ಬಿಜೆಪಿ ಮುಖಂಡ ಆತ್ಮಹತ್ಯೆ
Team Udayavani, Apr 25, 2019, 3:54 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಪಾಪನಾಶಿನಿ ನದಿಗೆ ವ್ಯಕ್ತಿಯೋರ್ವರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳಿಯ ಬಿಜೆಪಿ ಮುಖಂಡ, ಉದ್ಯಾವರ ನಿವಾಸಿ ಅಶೋಕ್ ಅಮೀನ್ (35) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಗ್ಗೆ ಅಶೋಕ್ ಉದ್ಯಾವರ ರಾಷ್ಟ್ರೀಯ ಸೇತುವೆ ಬಳಿ ಬೈಕ್ ನಿಲ್ಲಿಸಿ ಹೊಳೆಗೆ ಹಾರಿದ್ದರು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ್ದ ಕಾಪು ಪೊಲೀಸರು, ಅಗ್ನಿಶಾಮಕ ತಂಡ, ಮತ್ತು ಸ್ಥಳೀಯ ಯುವಕರು ಸೇರಿ ನದಿಯಲ್ಲಿ ಹುಡುಕಾಡಿ ಅಶೋಕ್ ಅವರ ಶವವನ್ನು ಮೇಲಕ್ಕೆತ್ತಿದ್ದಾರೆ.
ಮೃತ ಅಶೋಕ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್