ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ಬಿಜೆಪಿ ಗೆಲುವು ಖಚಿತ’


Team Udayavani, Oct 11, 2018, 6:50 AM IST

1010klre1.jpg

ಕೊಲ್ಲೂರು : ಅನಿರೀಕ್ಷಿತವಾಗಿ ಎದುರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಎದುರಿಸಲು ಬಿಜೆಪಿ ಸಶಕ್ತವಾಗಿದೆ. ಈ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಅವರ ಗೆಲುವು ಖಚಿತ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರದ ಸಾಧನೆ, ಜನಪರ ಕಾಳಜಿ ಮುಂಬರುವ ಚುನಾವಣೆಯಲ್ಲಿ ದಿಕ್ಸೂಚಿಯಾಗಲಿದೆ. ಎಂದು ಉಡುಪಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರ ವಂಡ್ಸೆ ನಿವಾಸದಲ್ಲಿ ಅ. 10ರಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಎದುರಾಗಿರುವ ಮರಳುಗಾರಿಕೆ ಸಮಸ್ಯೆಯನ್ನು ಬಗೆ ಹರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅದನ್ನೇ ನಂಬಿ ಬದುಕಿರುವ ಕಾರ್ಮಿಕರ ಜೀವನದೊಡನೆ ಚೆಲ್ಲಾಟವಾಡುತ್ತಿರುವ ಈ ಸರಕಾರವು ಅ. 15 ರೊಳಗೆ ಇದಕ್ಕೊಂದು ಪರಿಹಾರ ಒದಗಿಸದಿದ್ದಲ್ಲಿ ಅ. 16ರಂದು ಜಿಲ್ಲಾಧಿಕಾರಿಗಳ ಕಚೇರಿಯೆದುರು ಭಾರೀ ಪ್ರತಿಭಟನೆ ನಡೆಸಲಾಗುವುದು ಎಂದರು. ದೇಶದಲ್ಲಿ ಸ್ವಸ್ಥ, ನಿಷ್ಕಳಂಕ, ನಿಸ್ವಾರ್ಥ ಸೇವೆಯ ನರೇಂದ್ರ ಮೋದಿಯವರ ನೇತƒತ್ವದ ಕೇಂದ್ರ ಸರಕಾರ ಮತ್ತೆ ಚುಕ್ಕಾಣಿ ಹಿಡಿಯಬೇಕಾದರೆ ಕಾರ್ಯಕರ್ತರ ಪಾತ್ರ ಮಹತ್ವವಾದದ್ದು. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ರಾಘವೇಂದ್ರ ಅವರನ್ನು 50,000 ಕ್ಕೂ ಹೆಚ್ಚಿನ ಮತದಿಂದ ಗೆಲ್ಲಿಸುವಲ್ಲಿ ಪ್ರಯತ್ನಿಸಬೇಕು ಎಂದರು. 

ರಾಜ್ಯ ಸರಕಾರ ಯಾವುದೇ ಅಭಿವೃದ್ದಿ ಕಾರ್ಯಕ್ರಮ ಮಾಡಿಲ್ಲ. ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಭೇಟಿ ಹಾಗೂ ವರ್ಗಾವಣೆಯಲ್ಲಿ ಕಾಲ ಕಳೆಯುತ್ತಿದ್ದು ಕಾಂಗ್ರೆಸ್‌ ಹಾಗೂ ಜೆಡಿಸ್‌ ಮೈತ್ರಿ ಸರಕಾರವು ಪತನದ ಹಾದಿಯಲ್ಲಿದೆ. ಇಂತಹ ನಿಷ್ಕ್ರಿàಯ ಸರಕಾರ ದೌರ್ಬಲ್ಯ ಮರೆಮಾಚಲು ಕೇವಲ ಆಶ್ವಾಸನೆ ನೀಡುವುದರಲ್ಲೇ ಕಾಲ ಕಳೆಯುತ್ತಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ರಾಜ್ಯ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಶಿವಮೊಗ್ಗ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ರಾಘವೇಂದ್ರ ಅವರು ಬೆ„ಂದೂರು ಕ್ಷೇತ್ರದ ಅಭಿವೃದ್ದಿಗಾಗಿ ಈ ಹಿಂದೆ 600 ಕೋಟಿ ರೂ. ಒದಗಿಸಿದ್ದು ಅನೇಕ ಕಾಮಗಾರಿಗಳು ಅನುಷ್ಠಾನಗೊಂಡಿದೆ. ಜನಪರ ಕಾಳಜಿಯ ಹರಿಕಾರರಾದ ಅವರ ಗೆಲುವಿಗೆ ಪ್ರತಿಯೋರ್ವ ಬಿಜೆಪಿ ಕಾರ್ಯಕರ್ತರೂ ಕೈಜೋಡಿಸಿ ಶ್ರಮಿಸಬೇಕೆಂದರು.

ಬೈಂದೂರು ಕ್ಷೇತ್ರ ಶಾಸಕ ಬಿ.ಎಮ್‌. ಸುಕುಮಾರ ಶೆಟ್ಟಿ ಮಾತನಾಡಿ ಕರ್ನಾಟಕ ರಾಜ್ಯ ಸರಕಾರದ ಆಡಳಿತ ವ್ಯವಸ್ಥೆಯಲ್ಲಿನ ಲೋಪವನ್ನು ಬೊಟ್ಟುಮಾಡಿದರಲ್ಲದೇ ಯಾವುದೇ ಯೋಜನೆಗೆ ಅನುದಾನ ಬಿಡುಗಡೆ ಮಾಡದಿರುವುದು ಸರಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ. ಕೇವಲ ಜೆಡಿಎಸ್‌ ಶಾಸಕರಿಗೆ ಅನುದಾನ ಬಿಡುಗಡೆ ಗೊಳಿಸುತ್ತಿರುವ ಈ ಒಂದು ಸರಕಾರವು ದ‌Ìಂದ‌Ì ನೀತಿ ಅನುಸರಿಸುತ್ತಿರುವುದು ಖೇದರಕ ಎಂದರು.

ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾದಿಸಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಶ್ರಮಿಸಿ ಪೊÅàತ್ಸಾಹಿಸಬೇಕೆಂದರು.

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ಬಿಜೆಪಿ ವಿಭಾಗ ಪ್ರಭಾರ ಉದಯ ಕುಮಾರ್‌ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಕುಯಾÉಡಿ ಸುರೇಶ್‌ ನಾಯಕ್‌, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್‌, ಬೆ„ಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿಗಳಾದ ದೀಪಕ್‌ ಕುಮಾರ್‌ ಶೆಟ್ಟಿ, ಬಾಲಚಂದ್ರ ಭಟ್‌ ಮುಂತಾದವರು ಉಪಸ್ಥಿತರಿದ್ದರು.ಸದಾನಂದ ಉಪ್ಪಿನಕುದ್ರು ಸ್ವಾಗತಿಸಿ ದರು. ದೀಪಕ್‌ ಕುಮಾರ್‌ ಶೆಟ್ಟಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.