ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಅಕ್ರಮ : | ಡಿಸಿಗೆ ದೂರು
Team Udayavani, Oct 7, 2022, 7:07 AM IST
ಪಡುಬಿದ್ರಿ : ಇಲ್ಲಿನ ಎಂಡ್ ಪಾಯಿಂಟ್ನಲ್ಲಿರುವ ಅಂತಾ ರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್ ಬೀಚ್ನ ಬಹುತೇಕ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರುಹಾಜರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ.
ಕಳೆದ 15 ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದೆ. ಬೋಟಿಂಗ್ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂ ಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆಯೂ ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಿಗೂ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ ಎಂದು ಮನವಿಗೆ ಸಹಿ ಮಾಡಿರುವ ಅಲ್ಲಿನ 22 ಗುತ್ತಿಗೆ ಉದ್ಯೋಗಿಗಳು ದೂರಿದ್ದಾರೆ.
ನಾವು 31 ಮಂದಿ ಉದ್ಯೋಗಿಗಳಿದ್ದು ನ್ಯಾಯ ದೊರಕಬೇಕು. ಸೂಪರ್ವೈಸರ್ಗಳಿಬ್ಬರು ನಮ್ಮಲ್ಲಿ ಜೀವಭಯವನ್ನೂ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಕ್ಲಿಫರ್ಡ್ ಲೋಬೋ ಅವರಲ್ಲಿ “ಉದಯವಾಣಿ’ ಪ್ರಶ್ನಿಸಿದಾಗ, ಕಳೆದ ಮೂರು ತಿಂಗಳುಗಳಿಂದ ಬ್ಲೂ ಫ್ಲಾ ಗ್ ಬೀಚ್ನ ಕೆಲಸಗಾರರ ನಡುವೆ ಆಂತರಿಕ ಭಿನ್ನಾಭಿಪ್ರಾಯವು ಕಾಣಿಸಿಕೊಂಡಿರುವ ಪರಿಣಾಮ ಇದು. ಸ್ಥಳೀಯರಿಗೇ ಉದ್ಯೋಗ ನೀಡಿದ್ದು, ಮಾಸಿಕ ವೇತನವನ್ನೂ ಸಕಾಲದಲ್ಲಿ ಪಾವತಿಸಲಾಗುತ್ತಿದೆ. ಬೋಟಿಂಗ್, ಪ್ರವೇಶಾತಿಗಳಿಂದ ಬರುವ ಆದಾಯಗಳಿಗೆ ಕ್ರಮವತ್ತಾದ ರಶೀದಿಯನ್ನು ನೀಡಲಾಗುತ್ತಿದೆ. ಆಯಾಯ ದಿನ ಸಂಜೆಯ ವೇಳೆಗೆ ಲೆಕ್ಕಾಚಾರವಾಗಿ ಮರುದಿನವೇ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ. ಅಪಸ್ವರವೆತ್ತಿರುವ ಉದ್ಯೋಗಿಗಳು ಸೂಕ್ತ ದಾಖಲೆಗಳನ್ನು ನೀಡಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಲೋಬೋ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ