ಬೋಳ: ಕುಸಿದ ಕಿರು ತೂಗು ಸೇತುವೆ ತಾತ್ಕಾಲಿಕ ದುರಸ್ತಿ
Team Udayavani, Jun 16, 2019, 5:21 AM IST
ಬೆಳ್ಮಣ್: ಬೋಳ ಗ್ರಾಮ ಪಂಚಾಯತ್ನ ವ್ಯಾಪ್ತಿಯಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇಗುಲದ ಪಕ್ಕದ ಕಿರು ತೂಗುಸೇತುವೆಯ ಕಬ್ಬಿಣದ ರಾಡ್ ಶುಕ್ರವಾರ ಏಕಾಏಕಿಯಾಗಿ ಮುರಿದು ಬಿದ್ದು ಆತಂಕ ಸೃಷ್ಟಿಸಿದ ಹಿನ್ನೆಲೆಯಲ್ಲಿ ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಪಂಚಾಯತ್ ವತಿಯಿಂದ ತಾತ್ಕಾಲಿಕ ದುರಸ್ತಿಗೆ ಸೂಚಿಸಿದ್ದಾರೆ.
ಬೋಳದಗುತ್ತು, ಬೋಳ ಮಾರಗುತ್ತು, ಅಂಬರಾಡಿ, ನಡಿಗುತ್ತು ಭಾಗದ ಜನರಿಗೆ ಬೋಳ ದೇಗುಲಕ್ಕೆ ಆಗಮಿಸಲು ಈ ಸೇತುವೆ ಅನುಕೂಲ ಕರವಾಗಿದೆ.
ಇದರ ಪಕ್ಕದಲ್ಲಿ 2 ಕೋ.ರೂ. ವೆಚ್ಚದಲ್ಲಿ ದೊಡ್ಡ ಸೇತುವೆ ನಿರ್ಮಾಣಗೊಳ್ಳಲಿದ್ದು ಈ ಸೇತುವೆ ಮುಗುಳಿ ಕಡೆಯ ಬೋಳ ಗ್ರಾಮಸ್ಥರಿಗೆ ಸಚ್ಚೇರಿಪೇಟೆಗೆ ಬರಲು ಬಲು ಹತ್ತಿರದ ವ್ಯವಸ್ಥೆಯಾಗಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.
ಇದೇ ಜಾಗದಲ್ಲಿ ನೂತನ ಸೇತುವೆ ನಿರ್ಮಾಣಗೊಳ್ಳಲಿರುವುದರಿಂದ ರಾಡ್ ಮುರಿದ ಸೇತುವೆಯನ್ನು ಪಂಚಾಯತ್ ವತಿಯಿಂದಲೇ ತಾತ್ಕಾಲಿಕವಾಗಿ ದುರಸ್ತಿ ಪಡಿಸಲಾಗುವುದೆಂದು ಸತೀಶ್ ಪೂಜಾರಿ ತಿಳಿಸಿದರು.
ಪಂಚಾಯತ್ ಪಿಡಿಒ ಹರೀಶ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಯರಾಮ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು