ಬೋಳ: ಸಿಡಿಲು ಬಡಿದು ಮನೆಗೆ ಹಾನಿ
Team Udayavani, Sep 7, 2017, 8:21 AM IST
ಬೆಳ್ಮಣ್: ಕಾರ್ಕಳ ತಾಲೂಕಿನ ಬೋಳ ಕೋಡಿ ನಿವಾಸಿ ಕಿಶೋರ್ ಅವರ ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಬೋಳ ಗ್ರಾಮದ ಬಾನಂಗಡಿ ಪುಲ್ಲಂಜೆಯಲ್ಲಿ ಕ್ಯಾಟರಿಂಗ್ ನಡೆಸುತ್ತಿರುವ ಕಿಶೋರ್ ಕುಮಾರ್ ಅವರ ಮನೆಗೆ ಬುಧವಾರ ಮಧ್ಯಾಹ್ನದ ವೇಳೆಗೆ ಸಿಡಿಲು ಬಡಿಯಿತು. ವಿದ್ಯುತ್ ಮೀಟರ್, ವಯ ರಿಂಗ್ ಸಂಪೂರ್ಣ ಸುಟ್ಟು ಹೋಗಿವೆ. ಗೋಡೆ ಬಿರುಕು ಬಿಟ್ಟಿದೆ. ಟಿವಿ, ಫ್ರಿಜ್, ವಿದ್ಯುತ್ ಉಪಕರಣಗಳು ಹಾನಿ ಗೀಡಾಗಿದ್ದು ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ.
ಅಪಾಯದಿಂದ ಪಾರು
ಕಿಶೋರ್ ಹಾಗೂ ಅವರ ತಾಯಿ ರೇಖಾ ಭಂಡಾರಿ ಅವರು ಮನೆಯ ಜಗಲಿಯಲ್ಲಿ ಕುಳಿತಿದ್ದ ಸಮಯದಲ್ಲಿ ಏಕಾಏಕಿ ಬಡಿದ ಸಿಡಿಲು ಅವರ ಪಕ್ಕದಲ್ಲಿಯೇ ಹಾದುಹೋಗಿ ಗೋಡೆಗೆ ಬಡಿಯಿತು. ಮನೆ ಹಾನಿಗೀಡಾದರೂ ತಾಯಿ, ಮಗ ಇಬ್ಬರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ ಭಂಡಾರಿ, ತಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಡಿ’ಮೆಲ್ಲೊ, ತಾ.ಪಂ. ಸದಸ್ಯೆ ಪುಷ್ಪಾ ಸತೀಶ್, ಬೋಳ ಗ್ರಾ.ಪಂ. ಸದಸ್ಯ ಸತೀಶ್ ಪೂಜಾರಿ ಭೇಟಿ ನೀಡಿದರು. ಗ್ರಾ.ಪಂ.ನ ಕಂದಾಯ ಅ ಧಿಕಾರಿ ಸುದರ್ಶನ್, ಪಿಡಿಒ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ