ಅಪಾಯದಲ್ಲಿ ಉದ್ಯಾವರ ಬೊಳ್ಜೆ – ಮಣಿಪುರ ಸಂಪರ್ಕ ಸೇತುವೆ


Team Udayavani, Dec 26, 2018, 2:05 AM IST

bolje-bridge-25-12.jpg

ಕಟಪಾಡಿ: ಉದ್ಯಾವರ ಬೊಳ್ಜೆ-ಮಣಿಪುರವನ್ನು ಸಂಪರ್ಕಿಸುವ ಪಾಪನಾಶಿನಿ ಹೊಳೆಗೆ ಅಡ್ಡಲಾಗಿ ನಿರ್ಮಿಸಿರುವ ಕಾಲು ಸೇತುವೆಯೊಂದು ಬಳಕೆಗೆ ಅಪಾಯಕಾರಿಯಾಗಿ ಪರಿಣಮಿಸಿದ್ದು ಯಾವುದೇ ಕ್ಷಣದಲ್ಲೂ ಕುಸಿಯುವ ಸ್ಥಿತಿಯಲ್ಲಿದೆ. ಈ ಬಾರಿಯ ಮಳೆಗಾಲದಲ್ಲಿ ಇದಕ್ಕೆ ತೀವ್ರ ಹಾನಿ ಉಂಟಾಗಿತ್ತು. ನೆರೆ ನೀರಿನ ರಭಸಕ್ಕೆ ಸೇತುವೆಯ ಇಕ್ಕೆಲಗಳಲ್ಲಿ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಹಿಡಿಕೆಗಳು ಬುಡ ಸಮೇತ ಕಿತ್ತು ಬಂದು ಅಲ್ಲಲ್ಲಿ ನೇತಾಡುತ್ತಿವೆ.

ಮಳೆಗಾಲದಲ್ಲಿ ಮತ್ತಷ್ಟು ಸಂಕಷ್ಟ 
ಈ ಭಾಗದಲ್ಲಿ ಉಪ್ಪು ನೀರಿನ ತಡೆ ಮತ್ತು ಕೃಷಿ ಚಟುವಟಿಕೆಗೆ ಸಾಕಷ್ಟು ಪ್ರಯೋಜನಕಾರಿಯಾಗಿರುವ ಈ ಸೇತುವೆ ಉದ್ಯಾವರ ಮತ್ತು ಮಣಿಪುರ ಗ್ರಾಮವನ್ನು ಸಂಪರ್ಕಿಸುತ್ತದೆ. ಇದೀಗ ಶಿಥಿಲಗೊಂಡಿರುವ ಸೇತುವೆಯನ್ನು ಸರಿಪಡಿಸದಿದ್ದಲ್ಲಿ ಮುಂದಿನ ಮಳೆಗಾಲದಲ್ಲೂ ಸಂಕಷ್ಟವನ್ನು ಈ ಭಾಗದ ಜನತೆ ಎದುರಿಸಬೇಕಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇಲ್ಲಿ ಕೃಷಿಕರು ಹೆಚ್ಚಾಗಿದ್ದು ಅಂಗನವಾಡಿಯೊಂದು ಈ ಭಾಗದಲ್ಲಿ ಕಾರ್ಯಾಚರಿಸುತ್ತಿದೆ. ಈ ಸೇತುವೆಯನ್ನೇ ಸಂಪರ್ಕಕ್ಕಾಗಿ ಅನಿವಾರ್ಯವಾಗಿ ಬಳಸುತ್ತಿದ್ದಾರೆೆ.

ಶಿಥಿಲ ಸೇತುವೆ ವಿಸ್ತರಿಸಿ 
ಈಗ ಶಿಥಿಲಗೊಂಡಿರುವ ಹಳೆಯದಾದ ಸೇತುವೆಯ ವಿಸ್ತರಣೆ ಮಾಡಿ ಸೂಕ್ತ ಸುರಕ್ಷತೆ ಕಲ್ಪಿಸಬೇಕು ಎಂದು ಸ್ಥಳೀಯ ಮಣಿಪುರ ರತ್ನಾಕರ್‌ ಸಾಲ್ಯಾನ್‌ ಬೇಡಿಕೆಯನ್ನಿರಿಸಿದ್ದಾರೆ.

ದೇವೇಗೌಡರಿಂದ ಉದ್ಘಾಟನೆ
ಈ ಸೇತುವೆಯು ಉಪ್ಪು ನೀರಿನ ತಡೆ ಮತ್ತು ಕಾಲುಸಂಕವಾಗಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲ್ಪಟ್ಟಿದ್ದು 1986ರಲ್ಲಿ ಅಂದಿನ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ 
– ಎಚ್‌.ಡಿ. ದೇವೇಗೌಡ (ಮಾಜಿ ಪ್ರಧಾನಿ) ಉದ್ಘಾಟಿಸಿದ್ದರು.

ಶಿಥಿಲವಾಗಿಲ್ಲ
ಈ ಸೇತುವೆ ದುರಸ್ತಿ ಬಗ್ಗೆ ಎಸ್ಟಿಮೇಟ್‌ ಸಿದ್ಧಪಡಿಸಲಾಗಿದೆ. ಜನವರಿಯೊಳಗಾಗಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲಾಗುತ್ತದೆ. ಕಾಲು ಸಂಕ ಶಿಥಿಲವಾಗಿಲ್ಲ. ಪ್ರಕೃತಿ ವಿಕೋಪದಡಿ 4 ಲ.ರೂ. ಅನುದಾನ ಬಳಸಿಕೊಂಡು ಹ್ಯಾಂಡಲ್ಸ್‌ ಅಳವಡಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು.
– ದೇವಾನಂದ್‌, ಸಹಾಯಕ ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ

ಪರಿಶೀಲನೆ 
ಮಳೆಗಾಲದ ನೆರೆಯಿಂದ ಸೇತುವೆಗೆ ಭಾರೀ ಹಾನಿಗೀಡಾಗಿದ್ದು, ಸ್ಥಳೀಯ ವಾರ್ಡ್‌ ಸದಸ್ಯರ ಜತೆ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಸೂಕ್ತ ಕ್ರಮಕ್ಕಾಗಿ ಸಣ್ಣ ನೀರಾವರಿ ಇಲಾಖೆಯ ಗಮನಕ್ಕೆ ವರದಿ ಕಳುಹಿಸಿಕೊಡಲಾಗಿದೆ. ನೆರೆಯ ಮಣಿಪುರ ಗ್ರಾಮದ ಅಧಿಕಾರಿಯೂ ಈ ಬಗ್ಗೆ ವರದಿಯನ್ನು ಇಲಾಖೆಗೆ ಕಳುಹಿಸಿ ಜನರಿಗಾಗುವ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದಾರೆ.
– ರಮಾನಂದ ಪುರಾಣಿಕ್‌, ಉದ್ಯಾವರ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.