ಹುಡುಗರು ಹೊಣೆಗಾರಿಕೆ ಅರಿತು ಬಾಳಿ: ಶ್ರೀನಿವಾಸ ಪೂಜಾರಿ


Team Udayavani, Apr 12, 2018, 8:00 AM IST

1104kota2e.jpg

ಕೋಟ: ಜೀವನದ ಎಳವೆಯಲ್ಲಿ ಹುಡುಗಾಟ ಸ್ವಾಭಾವಿಕ.  ಈ  ಕಾಲದಲ್ಲೂ ಹೊಣೆಗಾರಿಕೆ ಅರಿತು ಬಾಳಿದರೆ ಸಂಸಾರ, ಸಮಾಜಕ್ಕೆ ಒಳಿತಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಅವರು ಎ.10ರಂದು ಕೋಟತಟ್ಟುವಿ ನಲ್ಲಿ ಜರಗಿದ ಕಲ್ಮಾಡಿ ಯುವಕ ಮಂಡಲದ ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ ಮಾತನಾಡಿ, ಬದುಕಿನಲ್ಲಿ ನಾವು ಸುಂದರ ನಾಳೆಗಳ ಕುರಿತು ಕನಸು ಕಂಡು  ಆ ಕನಸನ್ನು ನನಸುಗೈಯುವ ನಿಟ್ಟಿನಲ್ಲಿ  ಶ್ರಮಿಸಬೇಕು.  ಪದ್ಮ ಶ್ರೀ ಪ್ರಶಸ್ತಿ  ಪುರಸ್ಕೃತೆ ಸುಕ್ರಿ ಬೊಮ್ಮಗೌಡರಿಗೆ ಈ ಯುವಕ ಮಂಡಲದ ಪ್ರಶಸ್ತಿ ನೀಡುವ ಮೂಲಕ ತನ್ನ ಗೌರವ  ಹೆಚ್ಚಿಸಿಕೊಂಡಿದೆ ಎಂದರು. 

ಉದ್ಯಮಿ ಬೇಳೂರು ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.  ಈ ಸಂದರ್ಭ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡರಿಗೆ ಕಲ್ಮಾಡಿ ಯುವಕ ಮಂಡಲದ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಸಮಾಜ ಸೇವಕ ಜೀವನ್‌ ಮಿತ್ರ ನಾಗರಾಜ್‌ ಪುತ್ರನ್‌, ಕುಲುಮೆ ವೃತ್ತಿಯ ಸತ್ಯಮ್ಮ ಆಚಾರ್‌, ಕ್ರೀಡಾ ಕ್ಷೇತ್ರದಲ್ಲಿ  ಸಾಧನೆಗೆ„ದ ರಂಜಿತ್‌ ಜಿ., ಭರತ್‌ ಕೋಟ ಅವರನ್ನು  ಸಮ್ಮಾನಿಸಲಾಯಿತು. 

ಯುವಕ ಮಂಡಲದ ಅಧ್ಯಕ್ಷ ಭರತ್‌ ಶ್ರೀಯಾನ್‌  ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ವರದರಾಜ್‌ ಶೆಟ್ಟಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಎಸ್‌. ನಾಯಕ್‌ ಶುಭಾಶಂಸನೆಗೆ„ದರು. 

ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ  ಎಚ್‌. ಪ್ರಮೋದ್‌ ಹಂದೆ, ಜಯಕರ್ನಾಟಕ ಸಂಸ್ಥೆಯ ರಾಜ್ಯ ಸಂಘಟನ  ಕಾರ್ಯದರ್ಶಿ ಸತೀಶ್‌ ಪೂಜಾರಿ ಸಾಲಿಗ್ರಾಮ, ಉದ್ಯಮಿ ಮಹೇಶ್‌ ಪೂಜಾರಿ ಕೋಟೇಶ್ವರ, ರೋಟರಿ ಕ್ಲಬ್‌ ಕೋಟ ಸಿಟಿ ಅಧ್ಯಕ್ಷ ಸುಬ್ರಾಯ ಆಚಾರ್ಯ, ಭಗತ್‌ ಸಿಂಗ್‌ ಕ್ರಾಂತಿಕಾರಿ ಬಳಗದ ರಾಜೇಶ್‌ ಕೋಟೇಶ್ವರ, ರಾಜೇಂದ್ರ ಸಂಗಮ್‌, ಕೋಶಾಧಿ ಕಾರಿ ಉಮೇಶ್‌ ಪೂಜಾರಿ , ಸಲಹಾ ಸಮಿತಿಯ ಅಧ್ಯಕ್ಷ ಶೇವ ಧಿ ಸುರೇಶ್‌ ಗಾಣಿಗ, ಮನೋಹರ ಪೂಜಾರಿ ಉಪಸ್ಥಿತರಿದ್ದರು. 

ಯುವಕ ಮಂಡಲದ ಗೌರವಾಧ್ಯಕ್ಷ ಲಿಯಾಕಾತ್‌ ಅಲಿ ಪ್ರಾಸ್ತಾವನೆಗೈದು, ಕಾರ್ಯದರ್ಶಿ ಪ್ರಸಾದ್‌ ಬಿಲ್ಲವ ಸ್ವಾಗತಿಸಿ, ಚಿತ್ರಪಾಡಿ ಹಿ.ಪ್ರಾ.ಶಾಲೆ ದೆ„ಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿ, ಶಮಂತ್‌ ಕುಮಾರ್‌ ಕೆ.ಎಸ್‌. ವಂದಿಸಿದರು. ಕಲ್ಮಾಡಿ ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈವಿಧ್ಯ, ಮೂಲ್ಕಿ ಯುವವಾಹಿನಿ ಕಲಾವಿದರಿಂದ ತುಳುನಾಡ ವೈಭವ ಜರಗಿತು.

ಯುವಕರು ಕಣ್ಣುಗಳಿದ್ದಂತೆ
ಪ್ರತಿಯೊಂದು ಕುಟುಂಬಕ್ಕೂ ಯುವಕರು ಕಣ್ಣುಗಳಿದ್ದಂತೆ. ಅವರು ಸಂಸಾರದ ಜವಾಬ್ದಾರಿ ಅರಿತು ಬಾಳಿ ಉತ್ತಮ ಸ್ಥಾನಮಾನದಲ್ಲಿ ಗುರುತಿಸಿಕೊಳ್ಳಬೇಕು. ಉತ್ಸಾಹಿ ತರುಣರಿಂದ ಕೂಡಿರುವ ಕಲ್ಮಾಡಿ ಯುವಕ ಮಂಡಲ ಈ ಭಾಗದ ಸಮಸ್ಯೆಗಳಿಗೆ ಧ್ವನಿಯಾಗಲಿ ಎಂದು  ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದರು. 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.