Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು
Team Udayavani, Feb 24, 2024, 12:37 AM IST
ಬ್ರಹ್ಮಾವರ: ಪ್ರೀತಿಯ ನೆಪದಲ್ಲಿ ಹೆಗ್ಗುಂಜೆ ಪಡುಬಾರಾಳಿಯ ಮಾಧವ ವಂಚಿಸಿರುವುದಾಗಿ ಬ್ರಹ್ಮಾವರದ ಯುವತಿ ದೂರು ನೀಡಿದ್ದಾರೆ.
ಮಾಧವ ಮದುವೆಯಾಗು ವುದಾಗಿ ನಂಬಿಸಿ ನನಗೆ ಸಾಲ ಇದೆ, ವಾಹನ ಖರೀದಿಸಲು ಇದೆ ಎಂದು 2,06,903 ರೂ.ಗಳನ್ನು ಗೂಗಲ್ ಪೇ ಮೂಲಕ ಪಡೆದಿದ್ದನು. ಸುಮಾರು 80 ಸಾವಿರ ರೂ. ಮೌಲ್ಯದ ನಗದು, ಚಿನ್ನದ ಸರ ಮತ್ತು ಸಿಮ್ ಕಾರ್ಡ್ ಕೂಡ ಪಡೆದುಕೊಂಡಿದ್ದನು. ಇದುವರೆಗೆ ವಾಪಸ್ ನೀಡದೆ ವಂಚಿಸಿದ್ದಾನೆ.
2023ರ ಮೇಯಲ್ಲಿ ಆರೋಪಿಯು ಬೇರೆ ಯುವತಿಯೊಂದಿಗೆ ಮದುವೆ ಯಾಗಿದ್ದರೂ ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದೂ ಹೇಳುತ್ತಿದ್ದು, ಸಂದೇಶ ಕಳುಹಿಸಿ ಬೆದರಿಕೆ ಹಾಕುತ್ತಿದ್ದ. ನಂಬರ್ ಬ್ಲಾಕ್ ಮಾಡಿದ ಅನಂತರವೂ ಸಾಮಾಜಿಕ ಜಾಲತಾಣ ಮೂಲಕ ಸಂಪರ್ಕಿಸಿ ನನ್ನ ವಿರುದ್ಧ ದೂರು ನೀಡಿದರೆ ಫೋಟೊವನ್ನು ಕಟೌಟ್ ಮಾಡಿ ಊರು ತುಂಬಾ ಹಾಕುತ್ತೇನೆ, ಮನೆಗೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದು, ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್