ಬ್ರಹ್ಮಾವರ ಹಾರಾಡಿ ಕಾಂಕ್ರೀಟ್‌ ರಸ್ತೆ: ಹೊಂಡಗುಂಡಿ  


Team Udayavani, Dec 9, 2019, 5:00 AM IST

0612BVRE6

ಬ್ರಹ್ಮಾವರ: ಇಲ್ಲಿನ ದೂಪದ ಕಟ್ಟೆಯಿಂದ ಸಾಲಿಕೇರಿ, ಹಾರಾಡಿ ಮೂಲಕ ಹೊನ್ನಾಳ ಸಂಪರ್ಕಿಸುವ ಕಾಂಕ್ರೀಟ್‌ ರಸ್ತೆ ಬಹುತೇಕ ಕಡೆ ಹೊಂಡ ಗುಂಡಿಗಳಿಂದ ಕೂಡಿದೆ.

ಡಾಮರು ರಸ್ತೆಗಿಂತ ಕಾಂಕ್ರಿಟ್‌ ರಸ್ತೆಯಲ್ಲಿ ಹೊಂಡಗಳಾದಾಗ ಸಂಚಾರ ಮತ್ತಷ್ಟು ದುಸ್ತರವೆನಿಸಲಿದೆ. ಅದೇ ರೀತಿ ಸಾಲಿಕೇರಿ ಹಾರಾಡಿ ಕಾಂಕ್ರೀಟ್‌ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾಲಿಕೇರಿ ಲೂವಿಸ್‌ ಫ್ಯಾಕ್ಟರಿ ಬಳಿ ಸುಮಾರು 50 ಮೀ. ಕಾಂಕ್ರೀಟ್‌ ರಸ್ತೆ ಸಂಪೂರ್ಣ ಜಖಂಗೊಂಡಿದೆ. ಪ್ರತಿ ವಾಹನ ದವರು ಇಲ್ಲಿ ನಿಲ್ಲಿಸಿ ಹೊಂಡಕ್ಕೆ ಇಳಿಸಿಯೇ ತೆರಳುವ ಪರಿಸ್ಥಿತಿ ಇದೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರ್ಶನಗರ, ಸಾಲಿಕೇರಿ, ಬೈಕಾಡಿ ಗಾಂಧಿನಗರ, ಹಾರಾಡಿ, ಕುಕ್ಕುಡೆ, ಹೊನ್ನಾಳ ಮೊದಲಾದ ಊರುಗಳನ್ನು ಇದು ಸಂಪರ್ಕಿಸುತ್ತದೆ.

ಮುಖ್ಯವಾಗಿ ಜಿ.ಎಂ. ವಿದ್ಯಾನಿಕೇತನ್‌, ಲಿಟ್ಲರಾಕ್‌, ಎಸ್‌.ಎಂ.ಎಸ್‌. ಸೇರಿದಂತೆ ಹಲವು ಶಾಲೆಗಳ ನೂರಾರು ಬಸ್‌ಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ಆದ್ದರಿಂದ ತುರ್ತು ದುರಸ್ತಿಗೊಳಿಸಬೇಕಿದೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮರಳು ಲಾರಿಗಳು ಸಂಚರಿಸುತ್ತವೆ. ಬೆಳಗ್ಗೆ 5 ಗಂಟೆಗೂ ಮೊದಲೇ ಖಾಲಿ ಟಿಪ್ಪರ್‌ಗಳ ಆರ್ಭಟವು ನೂರಾರು ಮಂದಿಯ ನಿದ್ದೆಗೆಡಿಸಿದೆ. ರಸ್ತೆ ಅವ್ಯವಸ್ಥೆಯಿಂದ ಜನತೆ ರೋಸಿ ಹೋಗಿದ್ದಾರೆ.

ನಿರ್ವಹಣೆ ಇಲ್ಲ
ಮುಖ್ಯ ರಸ್ತೆಯಾದರೂ ನಿರ್ವಹಣೆ ಮಾಡದೆ ನಿರ್ಲಕ್ಷಿಸಲಾಗಿದೆ. ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲ, ಎರಡೂ ಬದಿಯ ಕಳೆ ಸಮರ್ಪಕ ವಿಲೇವಾರಿ ಮಾಡದಿರುವುದು ಮತ್ತೂಂದು ಸಮಸ್ಯೆಯಾಗಿದೆ.

ಬ್ರಹ್ಮಾವರ ಹೊನ್ನಾಳ ಮೀನುಗಾರಿಕಾ ಕಾಂಕ್ರೀಟ್‌ ರಸ್ತೆ ಕೆಲವೇ ವರ್ಷಗಳಲ್ಲಿ ಹಾಳಾಗಿರುವುದು ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ.

ಮನವಿ ಮಾಡಿದ್ದೆವು
ದೂಪದಕಟ್ಟೆ ರಸ್ತೆ ದುರಸ್ತಿಗೊಳಿಸುವಂತೆ ಮನವಿ ಮಾಡಿದ್ದೆವು. ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು ತತ್‌ಕ್ಷಣ ಸ್ಪಂದಿಸಬೇಕು.
– ಎನ್‌. ಕೃಷ್ಣ ಗಾಣಿಗ, ಗೆಳೆಯರ ಬಳಗ,, ದೂಪದಕಟ್ಟೆ

ತತ್‌ಕ್ಷಣ ದುರಸ್ತಿಗೊಳಿಸಿ
ರಸ್ತೆ ಹಾಳಾಗಿರುವುದರಿಂದ ಈಗಾಗಲೇ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನಷ್ಟು ಹದಗೆಡುವ ಮೊದಲು ಇಲಾಖೆ ದುರಸ್ತಿಗೊಳಿಸಬೇಕು.
– ನಿತ್ಯಾನಂದ ರಾವ್‌,
ಆದರ್ಶನಗರ ನಿವಾಸಿ

ಮರು ಕಾಂಕ್ರಿಟೀಕರಣ
ಸಾಲಿಕೇರಿ ಹಾರಾಡಿ ರಸ್ತೆ ಮರು ಕಾಂಕ್ರಿಟೀಕರಣಕ್ಕೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಪ್ರಯತ್ನದಲ್ಲಿದ್ದೇವೆ.
– ಕೆ. ರಘುಪತಿ ಭಟ್‌,
ಶಾಸಕರು, ಉಡುಪಿ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.