ಸಾವಲ್ಲೂ ಒಂದಾದ ಅಣ್ಣ ತಮ್ಮ!
Team Udayavani, Jun 14, 2021, 6:33 PM IST
ಫೋಟೋದಲ್ಲಿ ನಿಮ್ಮ ಬಲದಲ್ಲಿ ಇರುವವರು ರಾಜರಾಮ್ ರಾವ್, ಎಡದಲ್ಲಿರುವವರು ಗಣೇಶ್ ರಾವ್
ಕಾರ್ಕಳ : ಒಂದೆ ದಿನದಲ್ಲಿ ಸಹೋದರರಿಬ್ಬರು ಮೃತ ಪಟ್ಟ ಘಟನೆ ಇಂದು(ಸೋಮವಾರ, ಜೂ.14) ಕಾರ್ಕಳದಲ್ಲಿ ನಡೆದಿದೆ.
ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಇಂದು ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟರೆ, ಸಹೋದರ ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾರೆ.
ಇದನ್ನೂ ಓದಿ : ಈ ಬಾರಿ ಗೋವಾ ಗೇರು ಬೀಜಕ್ಕೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ : ಸಿದ್ಧಾರ್ಥ ಜಾಂಟಯೆ
ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಮಣಿಪಾಲ ಇನ್ನಿತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೃತ ಪಟ್ಟಿದ್ದಾರೆ.
ಹಿರಿಯ ಸಹೋದರ ಗಣೇಶ್ ರಾವ್, ಚಾಂಡಿಸ್ ಕಾಯಿಲೆಯಿಂದ ಬಳಲುತಿದ್ದವರು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಸಂಜೆ 5 ಗಂಟೆಯ ಆಸುಪಾಸಿನ ಸಮಯದಲ್ಲಿ ಮೃತ ಪಟ್ಟಿದ್ದಾರೆ.
ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು. ಮೃತರು ಕುಟಂಬವನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ : ಜುಲೈ 1 ರಿಂದ ಸಿಂಡಿಕೇಟ್ ಬ್ಯಾಂಕ್ ನ ಈಗಿರುವ ಐ ಎಫ್ ಎಸ್ ಸಿ ಕೋಡ್ ನಿಷ್ಕ್ರಿಯ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ