ಬಂಟರು ಸಂಘಟಿತರಾಗಬೇಕಾದ ಅನಿವಾರ್ಯತೆ ಬಂದೊದಗಿದೆ
Team Udayavani, Jul 26, 2017, 7:45 AM IST
ಬೆಳ್ಮಣ್: ಬಂಟರು ಹುಟ್ಟಿನಿಂದ ನಾಯಕತ್ವದ ಗುಣವನ್ನು ಮೈಗೂಡಿಸಿಕೊಂಡವರಾಗಿದ್ದು ಪ್ರತಿಯೊಂದು ಕ್ಷೇತ್ರಗಳಲ್ಲಿ ಘನತೆ ಗೌರವ ಯುತ ಸ್ಥಾನಗಳನ್ನು ಹೊಂದಿದ್ದಾರೆ.ಇದೀಗ ನಾವು ಹಲವಾರು ಕಾರಣಗಳಿಗಾಗಿ ಸಂಘಟಿತರಾಗಬೇಕಾದ ಅನಿವಾರ್ಯತೆಯೊದಗಿದೆಯೆಂದು ಕಾರ್ಕಳ ತಾಲೂಕು ಬಂಟರ ಸಂಘಗಳ ಸಂಚಾಲಕ ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆ ಹೇಳಿದರು.
ಅವರು ರವಿವಾರ ಕಾರ್ಕಳ ಸ್ವಾಗತ್ ಹೋಟೆಲ್ನ ಸಭಾಗೃಹದಲ್ಲಿ ನಡೆದ ಕಾರ್ಕಳ ತಾಲೂಕಿನ ಬಂಟ ಮುಖಂಡರ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ನಾಯಕ ನೀರೆ ಕೃಷ್ಣ ಶೆಟ್ಟಿ ಮಾತನಾಡಿ,ಬಂಟ ಸಮಾಜದ ಹಿರಿಯರು ನಮ್ಮ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕಾದ ಅನಿವಾರ್ಯತೆಯ ಜತೆಗೆ ಅದನ್ನು ಮುಂದುವರಿಸುವ ಅಗತ್ಯವಿದೆಯೆಂದರಲ್ಲದೆ ಇತರರಿಗೆ ಆದರ್ಶ ಹಾಗೂ ಮಾದರಿಯಾಗಿರುವ ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಬೇಕಾದ ಕರ್ತವ್ಯವೂ ನಮ್ಮದಾಗಿದೆಯೆಂದರು.
ಕಾರ್ಕಳ ಬಂಟರ ಸಂಘದ ಮಹಿಳಾ ವಿಭಾಗದ ಆಧ್ಯಕ್ಷೆ ಜ್ಯೋತಿ ಸುನಿಲ್ ಕುಮಾರ್ ಶೆಟ್ಟಿ,ಕಾರ್ಕಳ ತಾಲೂಕಿನ ಇತರ ವಲಯಗಳ ನಾಯಕರುಗಳಾದ ಮಣಿರಾಜ ಶೆಟ್ಟಿ,ಸುನಿಲ್ ಕುಮಾರ್ ಶೆಟ್ಟಿ, ಮುನಿಯಾಲು ಉದಯ ಶೆಟ್ಟಿ, ಮಿಯ್ನಾರು ಶ್ಯಾಮ ಎಂ.ಶೆಟ್ಟಿ,ದಿವಾಕರ ಶೆಟ್ಟಿ, ಕೃಷ್ಣರಾಜ ಶೆಟ್ಟಿ,, ಭೂತಗುಂಡಿ ಕರುಣಾಕರ ಶೆಟ್ಟಿ,ಚೇತನ್ ಶೆಟ್ಟಿ, ಬೈಲೂರು ಮಂಜುನಾಥ ಶೆಟ್ಟಿ, ಪ್ರಶಾಂತ ಶೆಟ್ಟಿ ಮತ್ತಿತರರಿದ್ದರು. ಕಾರ್ಕಳ ತಾಲೂಕಿನ ವಿವಿಧೆಡೆಗಳಿಂದ ಆಹ್ವಾನಿತ ಬಂಟ ಪ್ರಮುಖರು ಅತ್ಯಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು.
ಮುಂಡ್ಕೂರು ವಿದ್ಯಾವರ್ಧಕ ಪ.ಪೂ.ಕಾಲೇಜಿನ ಉಪನ್ಯಾಸಕ ಕಾರ್ಕಳ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ