ಬಸ್- ಬೈಕ್ ಢಿಕ್ಕಿ: ಉಪಪ್ರಾಂಶುಪಾಲ ಸಾವು
Team Udayavani, Jan 17, 2018, 11:26 AM IST
ಬೈಂದೂರು: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ, ಬೈಂದೂರಿನ ಸೈಂಟ್ ಧಾಮಸ್ ಕಾಲೇಜಿನ ಉಪಪ್ರಾಂಶುಪಾಲ ಫಾದರ್ ಅಬ್ರಹಾಂ ಕಲ್ಲಪಟ್ (38) ಧಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಬೈಂದೂರಿನ ಹೊಸ ಬಸ್ ನಿಲ್ದಾಣ ಬಳಿ ಸಂಭವಿಸಿದೆ.
ಆಸ್ಪತ್ರೆಗೆ ಹೊರಟಿದ್ದ ಅಬ್ರಹಾಂ: ಅಬ್ರಹಾಂ ಅವರು ಕೇರಳ ಮೂಲದವರಾಗಿದ್ದು, ನಾಲ್ಕು ವರ್ಷಗಳಿಂದ ಬೈಂದೂರಿನ ಸೈಂಟ್ ಥಾಮಸ್ ಕಾಲೇಜಿನಲ್ಲಿಉಪ ಪ್ರಾಂಶುಪಾಲರಾಗಿದ್ದರು. ವಸತಿ ಕಾಲೇಜು ಆಗಿದ್ದರಿಂದ ರಾತ್ರಿ ಹನ್ನೊಂದು ಗಂಟೆಯ ವೇಳೆಗೆ ಅವರು ಅನಾರೋಗ್ಯಗೊಂಡ ವಿದ್ಯಾರ್ಥಿಯನ್ನು ಬೈಕ್ನಲ್ಲಿ ಕುಳ್ಳಿರಿಸಿಕೊಂಡು ಬೈಂದೂರಿನ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಗೆ ಕುಂದಾಪುರದಿಂದ ಬೆಳಗಾಂ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಅಬ್ರಹಾಂ ಅವರ ತಲೆಗೆ ಬಲವಾದ ಏಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿದ್ದ ವಿದ್ಯಾರ್ಥಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿಗೆ ರಜೆ
ಅಬ್ರಹಾಂ ಸಾವಿಗೆ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ, ಸಿಬಂದಿ ವರ್ಗ, ವಿದ್ಯಾರ್ಥಿ ಗಳು ಕಂಬನಿ ಮಿಡಿದಿದ್ದು, ಮಂಗಳವಾರ ಕಾಲೇಜಿಗೆ ರಜೆ ಸಾರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು