ಬಸ್ ಢಿಕ್ಕಿ: ಬೈಕ್ ಸವಾರ ಸಾವು
Team Udayavani, Apr 5, 2018, 6:00 AM IST
ಕುಂದಾಪುರ: ಗಂಗೊಳ್ಳಿ ಸಮೀಪದ ನಾಯಕವಾಡಿ ರಾಮ ಮಂದಿರ ಬಳಿ ಬುಧವಾರ ಬೈಕ್ಗೆ ಬಸ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.
ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ, ಮೆಸ್ಕಾಂ ಲೈನ್ಮನ್ ಗಣೇಶ್ ದೇವಾಡಿಗ (59) ಅವರು ಬೈಕಿನಲ್ಲಿ ಕರ್ತವ್ಯಕ್ಕೆ ಹೋಗುತ್ತಿದ್ದಾಗ ಗಂಗೊಳ್ಳಿ ಸಮೀಪದ ನಾಯಕವಾಡಿ ರಾಮಮಂದಿರ ಬಳಿ ಗಂಗೊಳ್ಳಿಯಿಂದ ತ್ರಾಸಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯ ಗೊಂಡ ಗಣೇಶ್ ಅವರನ್ನು ಆಸ್ಪತ್ರೆಗೆ ಕರೆ ದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆ ದರು. ಮೂರು ದಿನಗಳ ತಿರುಪತಿ ಪ್ರವಾಸ ಮುಗಿಸಿ ಮಂಗಳವಾರವಷ್ಟೇ ಊರಿಗೆ ಮರಳಿದ್ದ ಅವರು ಮುಂದಿನ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಬಸ್ ಚಾಲಕ ನಾಗರಾಜ ವಿರುದ್ಧ ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ