ಸರಕಾರಿ ಶಾಲೆಗೆ ಶಾಸಕರ ಅನುದಾನದಲ್ಲಿ ಬಸ್‌: ನಿರ್ವಹಣೆಯೇ ದೊಡ್ಡ ಸವಾಲು


Team Udayavani, Jul 10, 2022, 7:20 AM IST

ಸರಕಾರಿ ಶಾಲೆಗೆ ಶಾಸಕರ ಅನುದಾನದಲ್ಲಿ ಬಸ್‌: ನಿರ್ವಹಣೆಯೇ ದೊಡ್ಡ ಸವಾಲು

ಉಡುಪಿ: ಶಾಸಕರ ಪ್ರದೇಶಾ ಭಿವೃದ್ಧಿ ನಿಧಿಯಲ್ಲಿ ಸರಕಾರಿ ಶಾಲೆಗಳಿಗೆ ವಾಹನದ ವ್ಯವಸ್ಥೆ ಕಲ್ಪಿಸಲು ಸರಕಾರ ಅನುಮೋದನೆ ನೀಡಿದೆ. ಆದರೆ ಯಾವ ಮಾನದಂಡದಡಿ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಸ್ಪಷ್ಟಪಡಿಸಿಲ್ಲ. ಯಾವುದೇ ಸರಕಾರ ಶಾಲೆಗಳಿಗೆ ಈವರೆಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರದಿಂದ ಶಾಲಾ ಬಸ್‌ ನೀಡಿಲ್ಲ. ಕೆಲವು ಶಾಲೆಗಳು ವಿವಿಧ ಸಂಸ್ಥೆಗಳ ಸಿಎಸ್‌ಆರ್‌ ನಿಧಿ ಪಡೆದುಕೊಂಡು, ಹಲವು ಶಾಲೆಗಳು ಸ್ಥಳೀಯ ದಾನಿಗಳ ಮೂಲಕ ಹಾಗೂ ಇನ್ನು ಕೆಲವು ಶಾಲೆಗಳು ಹಳೇ ವಿದ್ಯಾರ್ಥಿ ಗಳ ಸಂಘದ ಮೂಲಕ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆಯನ್ನು ತಾತ್ಕಾಲಿಕ ಹಾಗೂ ಶಾಶ್ವತ ನೆಲೆಯಲ್ಲಿ ಮಾಡಿಕೊಂಡಿವೆ. ಆದರೆ ಈ ಬಸ್‌ಗಳ ನಿರ್ವಹಣೆಯೇ ಶಾಲೆಗೆ ಕಗ್ಗಂಟಾಗಿದೆ.

ಆಯ್ಕೆಯೇ ಸವಾಲು
ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶಾಲೆಗೆ ಹೊಸ ಕಟ್ಟಡ, ಶೌಚಾಲಯ ಸಹಿತ ಮೂಲಸೌಕರ್ಯಕ್ಕಾಗಿ ಈವರೆಗೂ ಶಾಲೆ
ಗಳಿಂದ ಶಾಸಕರಿಗೆ ಅರ್ಜಿ ಸಲ್ಲಿಸಲಾಗುತ್ತಿತ್ತು. ಈಗ ಶಾಲಾ ವಾಹನದ ವ್ಯವಸ್ಥೆ ಮಾಡುವಂತೆಯೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಒಂದು ಶಾಲೆಗೆ ಒಂದು ಬಸ್‌ ಖರೀದಿಗೆ ಕನಿಷ್ಠ 15 ಲ.ರೂ.ಗಳಿಂದ 20 ಲ.ರೂ. ವರೆಗೂ ಬೇಕಾಗುತ್ತದೆ. ವರ್ಷಕ್ಕೆ ಎಷ್ಟು ಶಾಲೆಗೆ ಶಾಲಾ ಬಸ್‌ಗಾಗಿ ಅನುದಾನ ನೀಡಬೇಕು ಮತ್ತು ಅದಕ್ಕಾಗಿ ಯಾವ ಮಾನದಂಡ ಅನುಸರಿಸಬೇಕು ಎಂಬುದಕ್ಕೆ ನಿಯಮವಿಲ್ಲ. ಶಾಸಕರು ತಮ್ಮ ವಿವೇಚನೆ ಆಧಾರದಲ್ಲಿ ನಿರ್ಧಾರ ತೆಗೆದು ಕೊಳ್ಳಬಹುದಾಗಿದೆ. ಆದರೆ ಸ್ಥಳೀಯ ನಾಯಕರ ಒತ್ತಡ ಹೆಚ್ಚಿರುವುದರಿಂದ ಆಯ್ಕೆಯೂ ಸವಾಲಾಗಿದೆ.

ನಿರ್ವಹಣೆ ಅಸಾಧ್ಯ
ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯಿಂದ ಶಾಲಾ ವಾಹನ ಖರೀದಿ ಮಾಡಿ ಅದರ ನಿರ್ವಹಣೆಯನ್ನು ಸಂಪೂರ್ಣವಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ನೋಡಿಕೊಳ್ಳಬೇಕು ಎಂದು ಸರಕಾರ ಷರತ್ತು ವಿಧಿಸಿದೆ. ವಾಸ್ತವವಾಗಿ ಎಸ್‌ಡಿಎಂಸಿಗೆ ಇಲಾಖೆಯಿಂದ ಪ್ರತ್ಯೇಕ ಅನುದಾನ ಬರುವುದಿಲ್ಲ. ಹೀಗಾಗಿ ಸ್ಥಳೀಯ ದಾನಿಗಳು ಅಥವಾ ವಿದ್ಯಾರ್ಥಿಗಳಿಂದಲೇ ಹಣ ಸಂಗ್ರಹ ಮಾಡಬೇಕು. ಒಂದು ವಾಹನದ ನಿರ್ವಹಣೆ (ಪೆಟ್ರೋಲ್‌/ ಡೀಸೆಲ್‌) ಮತ್ತು ಚಾಲಕನ ವೇತನ ಸಹಿತ ತಿಂಗಳಿಗೆ ಕನಿಷ್ಠ 30 ಸಾವಿರದಿಂದ 40 ಸಾವಿರ ರೂ. ಬೇಕಾಗುತ್ತದೆ. ಗ್ರಾಮೀಣ ಭಾಗದ ಯಾವುದೇ ಸರಕಾರಿ ಶಾಲೆಯಲ್ಲಿ ತಿಂಗಳಿಗೆ ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸುವುದು ಸುಲಭವಿಲ್ಲ. ಈ ಪ್ರಕ್ರಿಯೆ ನಿರಂತರ ನಡೆಯಬೇಕಿರುವುದರಿಂದ ಸರಕಾರವೇ ಯಾವುದಾದರೂ ಮೂಲದಿಂದ ಇದಕ್ಕೆ ಅನುದಾನ ನೀಡಬೇಕು. ಇಲ್ಲವಾದರೆ ಶಾಲೆ ಯಿಂದ ನಿರ್ವಹಣೆ ಕಷ್ಟವಾಗಲಿದೆ ಎಂಬುದು ಎಸ್‌ಡಿಎಂಸಿ ಸದಸ್ಯರ ಅಭಿಪ್ರಾಯವಾಗಿದೆ.

ಸದ್ಯದ ವ್ಯವಸ್ಥೆ ಹೇಗಿದೆ?
ಉಡುಪಿಯಲ್ಲಿ 50ಕ್ಕೂ ಅಧಿಕ ಶಾಲೆ ಹಾಗೂ ದ.ಕ.ದಲ್ಲಿ 100ಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಕರೆತರಲು ಶಾಲಾ ವಾಹನದ ವ್ಯವಸ್ಥೆಯನ್ನು ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಂಘದ ಸಮನ್ವಯದಿಂದ ಮಾಡಿಕೊಂಡಿವೆ. ಈ ಶಾಲಾ ವಾಹನಗಳಲ್ಲಿ ಬಹುತೇಕ ಬಾಡಿಗೆಯದಾಗಿದ್ದು, ಅದರಲ್ಲಿ ರಿಕ್ಷಾ, ಟಿಟಿ, ಆಮ್ನಿ ಇತ್ಯಾದಿ ಹೆಚ್ಚಿವೆ. ಅಂದರೆ ನಿರ್ದಿಷ್ಟ ಶಾಲಾ ವಾಹನ (ಹಳದಿ ಬಣ್ಣದ) ಬಳಸುತ್ತಿಲ್ಲ. ಕಾರಣ, ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದ ಅನಂತರ ಬೇರೆ ಬಾಡಿಗೆಗೆ ಹೋಗುತ್ತಾರೆ. ಪುನಃ ಸಂಜೆ ಶಾಲೆ ಬಿಡುವಾಗ ಬರುತ್ತಾರೆ. ಇದರಿಂದ ಚಾಲಕರ ವೇತನ ಮತ್ತು ಬಾಡಿಗೆ ಕಡಿಮೆಯಾಗುತ್ತದೆ. ಶಾಶ್ವತ ವಾಹನ ವ್ಯವಸ್ಥೆ ಮಾಡಿಕೊಂಡಿರುವ ಶಾಲೆಗಳಲ್ಲಿ ಶಿಕ್ಷಕರು ಅಥವಾ ಎಸ್‌ಡಿಎಂಸಿ ಸದಸ್ಯರೇ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯಾವುದೇ ಸರಕಾರಿ ಶಾಲೆಗೆ ಈವರೆಗೂ ಸರಕಾರದಿಂದ ಶಾಲಾ ವಾಹನ ನೀಡಿಲ್ಲ. ಈಗ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಶಾಲಾ ವಾಹನ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ನಿರ್ವಹಣೆ ಶಾಲೆಯಿಂದಲೇ ಮಾಡಬೇಕಿರುವುದರಿಂದ ಅದು ಕೂಡ ಹೊರೆಯಾಗಲಿದೆ. ದಾನಿಗಳು ಅಥವಾ ಬೇರೆ ಯಾವುದಾದರೂ ಆದಾಯದ ಮೂಲ ಬೇಕಾಗುತ್ತದೆ. ಇಲ್ಲವಾದರೆ ನಿರ್ವಹಣೆ ಕಷ್ಟ.
– ಗೋವಿಂದ ಮಡಿವಾಳ / ಸುಧಾಕರ,
ಡಿಡಿಪಿಐ, ಉಡುಪಿ /ದಕ್ಷಿಣ ಕನ್ನಡ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.