Bus; 150ಕ್ಕೂ ಅಧಿಕ ಹಳ್ಳಿಗಳಿಗೆ ಇನ್ನೂ ಬಸ್‌ ಸೇವೆ ಇಲ್ಲ!

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವ್ಯಥೆ

Team Udayavani, Dec 24, 2023, 6:45 AM IST

Bus; 150ಕ್ಕೂ ಅಧಿಕ ಹಳ್ಳಿಗಳಿಗೆ ಇನ್ನೂ ಬಸ್‌ ಸೇವೆ ಇಲ್ಲ!

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರವೇ ಹೆಚ್ಚು. ಇತ್ತೀಚೆಗಿನ ವರ್ಷಗಳಲ್ಲಿ ಕೆಎಸ್ಸಾರ್ಟಿಸಿ/ ನರ್ಮ್ ಬಸ್‌ಗಳ ಸೇವೆಯೂ ಲಭ್ಯ ವಿದೆ. ಇಷ್ಟೆಲ್ಲ ಇದ್ದರೂ ಇಂದಿಗೂ 150ಕ್ಕೂ ಅಧಿಕ ಹಳ್ಳಿಗಳಿಗೆ ಬಸ್‌ ಸೇವೆ ಇಲ್ಲ!

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹೊರತುಪಡಿಸಿ ದ.ಕ.ದಲ್ಲಿ 223 ಹಾಗೂ ಉಡುಪಿಯಲ್ಲಿ 155 ಗ್ರಾ.ಪಂ.ಗಳಿದ್ದು, ಗ್ರಾಮ/ಹಳ್ಳಿಗಳ ಸಂಖ್ಯೆ ದುಪ್ಪಟ್ಟಿದೆ. ಉಡುಪಿ ನಗರ ವ್ಯಾಪ್ತಿಯಲ್ಲಿ ಖಾಸಗಿ ವ್ಯವಸ್ಥೆಯ ಸಿಟಿ ಬಸ್‌ ಹಾಗೂ ನರ್ಮ್ ಬಸ್‌ಗಳು ಸಂಚರಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಸಿಟಿ ಬಸ್‌, ನರ್ಮ್ ಬಸ್‌ ಸೌಲಭ್ಯವಿದೆ. ಇವೆಲ್ಲವೂ ನಗರ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳ ಮುಖ್ಯರಸ್ತೆಯನ್ನು ಸಂಪರ್ಕಿಸುತ್ತವೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿಗೆ ಕೊಂಡಿಯಾಗಿವೆ. ನಗರಕ್ಕೆ ಹೊಂದಿಕೊಂಡ ಗ್ರಾಮ ಗಳಿಗೂ ಇವುಗಳ ಸೇವೆ ಲಭ್ಯವಿದೆ. ಆದರೆ ನಗರ, ಪಟ್ಟಣ ಕೇಂದ್ರಿತವಾಗಿಯೇ ಹೆಚ್ಚಿವೆ.

ಉಳಿದಂತೆ ಉಭಯ ಜಿಲ್ಲೆಗಳ ಕೇಂದ್ರ ಸ್ಥಳದಿಂದ ತಾಲೂಕು, ಹೋಬಳಿ ಕೇಂದ್ರಗಳಿಗೆ ಖಾಸಗಿ ಬಸ್‌ ವ್ಯವಸ್ಥೆ ಪರವಾಗಿಲ್ಲ. ಆದರೆ ಹೋಬಳಿ ಕೇಂದ್ರದಿಂದ ಗ್ರಾಮಗಳಿಗೆ ಬಸ್‌ ವ್ಯವಸ್ಥೆ ಕಡಿಮೆ. ಈ ಹಳ್ಳಿಗಳಿಗೆ ಬಸ್‌ ಸೇವೆ ಕಲ್ಪಿಸುವಂತೆ ಮೇಲಿಂದ ಮೇಲೆ ಮನವಿಗಳು ಸಲ್ಲಿಕೆಯಾಗುತ್ತವೆ. ಆದರೆ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಸುಮಾರು 60 ಹಳ್ಳಿ ಹಾಗೂ ದ.ಕ. ಜಿಲ್ಲೆಯ ಸುಮಾರು 95 ಹಳ್ಳಿಗಳಿಗೆ ಬಸ್‌ ಸೇವೆಯಿಲ್ಲ. ಕೆಲವು ಹಳ್ಳಿಗಳ ಸಮೀಪದ ಹಳ್ಳಿಗಳಿಗೆ ಬಸ್‌ಗಳು ಲಭ್ಯವಿವೆ ಎನ್ನುತ್ತವೆ ಮೂಲಗಳು.
ಸರಕಾರಿ ಬಸ್‌ ಸೇವೆಗೆ ನರ್ಮ್ ಬಸ್‌ಗಳ ಕೊರತೆಯಿದೆ. ರಾಜ್ಯ ಕಚೇರಿಗೆ ಹೊಸ ಬಸ್‌ಗಾಗಿ ಪ್ರಸ್ತಾವನೆ ಹೋಗಿದೆ, ಬಸ್‌ ಬಂದಿಲ್ಲ. ಖಾಸಗಿಯವರು ಸೇವೆ ಒದಗಿಸಲು ಪ್ರತೀ ಟ್ರಿಪ್‌ನಲ್ಲಿ ಸಿಗುವ ಲಾಭಾಂಶವೇ ಆಧಾರ. ಹೀಗಾಗಿ ಹಲವು ಹಳ್ಳಿಗಳಲ್ಲಿ ಇನ್ನೂ ಸಾರ್ವಜನಿಕ ಸೇವೆ ಲಭ್ಯವಾಗಿಲ್ಲ.

ಬೆಳಗ್ಗೆ, ಸಂಜೆ ಬಸ್‌ ಸೇವೆ ಆವಶ್ಯಕ
ಉಭಯ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಹಾಗೂ ಉದ್ಯೋಗಕ್ಕೆ ಹೋಗುವವರ ಅನುಕೂಲಕ್ಕಾಗಿ ಬೆಳಗ್ಗೆ, ಸಂಜೆ ಎಲ್ಲ ಮಾರ್ಗಗಳಲ್ಲೂ ಹೆಚ್ಚುವರಿ ಬಸ್‌ ಓಡಿಸಬೇಕು ಎಂಬ ಬೇಡಿಕೆಯಿದೆ.

ಉಡುಪಿ ಜಿಲ್ಲೆಯ ಬೈಂದೂರು, ಶಿರೂರು ಭಾಗದಿಂದ ಕುಂದಾಪುರಕ್ಕೆ ಬೆಳಗಿನ ವೇಳೆಯಲ್ಲಿ ಬರುವ ಬಹುತೇಕ ಎಲ್ಲ ಬಸ್‌ಗಳಲ್ಲೂ ಜನದಟ್ಟಣೆ ಹೆಚ್ಚು. ಇದೇ ಪರಿಸ್ಥಿತಿ ಮಂಗಳೂರು ನಗರ, ಮೂಡುಬಿದಿರೆ, ಉಜಿರೆ ಸಹಿತ ಶೈಕ್ಷಣಿಕ ಕೇಂದ್ರಗಳು ಹಾಗೂ ಖಾಸಗಿ/ಸರಕಾರಿ ಸಂಸ್ಥೆಗಳು ಹೆಚ್ಚಿರುವ ಪ್ರದೇಶದ ಎಲ್ಲ ಮಾರ್ಗಗಳ ಬಸ್‌ಗಳಲ್ಲೂ ಇದೆ. ಹೀಗಾಗಿ ಗ್ರಾಮೀಣ ಎಲ್ಲ ರೂಟ್‌ಗಳಲೂ ಬಸ್‌ ಸೇವೆ ಹೆಚ್ಚಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.

ಬಸ್‌ಗಳ ಸಂಖ್ಯೆ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಮಾರು 2 ಸಾವಿರ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಇದರಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 400 ಸಿಟಿ ಬಸ್‌, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 80 ಸಿಟಿ ಬಸ್‌ ಸಂಚರಿಸುತ್ತಿವೆ. ಉಳಿದ ಎಲ್ಲವೂ ಸರ್ವಿಸ್‌ ಬಸ್‌ಗಳಾಗಿವೆ. ನರ್ಮ್ ಬಸ್‌ ಸೇರಿದಂತೆ ಸುಮಾರು 570ಕ್ಕೂ ಅಧಿಕ ಸರಕಾರಿ ಬಸ್‌ಗಳಿವೆ. ಇದರಲ್ಲಿ ದೂರ ಪ್ರಯಾಣಿಸುವ ಬಸ್‌ಗಳು ಸೇರಿವೆ. ದಕ್ಷಿಣ ಕನ್ನಡದಲ್ಲಿ ಮಂಗಳೂರು ಕೇಂದ್ರಿತವಾಗಿ ಪುತ್ತೂರು, ಸುಳ್ಯ, ಮೂಡುಬಿದಿರೆ, ಧರ್ಮಸ್ಥಳ, ಬಿ.ಸಿ. ರೋಡ್‌ಗೆ ಸಂಚರಿಸುವ ಬಸ್‌ಗಳು ಹೆಚ್ಚಿವೆ.

ಹೊಸ ಬಸ್‌ ಖರೀದಿ
ಸರಕಾರದ ಅನುಮತಿಯಂತೆ ಕೆಎಸ್ಸಾರ್ಟಿಸಿ 300 ಎಲೆಕ್ಟ್ರಿಕಲ್‌ ಬಸ್‌ ಹಾಗೂ ಸುಮಾರು 600 ಸಾಮಾನ್ಯ ಬಸ್‌ ಖರೀದಿ ಪ್ರಕ್ರಿಯೆ ನಡೆಸುತ್ತಿದೆ. ಇದರಲ್ಲಿ ಕೆಲವು ಟೆಂಡರ್‌ ಹಂತದಲ್ಲಿದ್ದರೆ ಇನ್ನು ಕೆಲವಕ್ಕೆ ಖರೀದಿ ಆದೇಶವಾಗಿದೆ. ಸುಮಾರು 90 ಬಸ್‌ ಪೂರೈಕೆಯಾಗಿದೆ. ಆದರೆ ಉಭಯ ಜಿಲ್ಲೆಗೆ ಇದರಲ್ಲಿ ಎಷ್ಟು ಬಸ್‌ ಸಿಗಲಿದೆ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ ಎನ್ನುತ್ತಾರೆ ಅಧಿಕಾರಿಯೊಬ್ಬರು.

ಬಸ್‌ಗಳ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ಅನಂತರ ಸಾರಿಗೆ ಸೌಲಭ್ಯವಿಲ್ಲದ ಗ್ರಾಮಗಳಿಗೆ ಬೇಡಿಕೆಗೆ ಅನುಸಾರವಾಗಿ ಸೌಲಭ್ಯ ಒದಗಿಸಲು ಕ್ರಮ ತೆಗೆದುಕೊಳ್ಳ ಲಾಗುವುದು.
– ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ

ನಿಮ್ಮ ಊರಿಗೆ ಬಸ್‌ ಉಂಟೇ?
ಲಭ್ಯ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 150ಕ್ಕೂ ಹೆಚ್ಚು ಹಳ್ಳಿಗಳಿಗೆ ಬಸ್‌ ಸೇವೆ ಇಲ್ಲ. ನಿಮ್ಮ ಊರಿಗೆ ಬಸ್‌ ಸೇವೆ ಇದೆಯೇ? ಇಲ್ಲದಿದ್ದರೆ ಪರ್ಯಾಯ ಸಾರಿಗೆ ವ್ಯವಸ್ಥೆಯಾಗಿ ಏನನ್ನು ಅವಲಂಬಿಸಿದ್ದೀರಿ?
ಬಸ್‌ ವ್ಯವಸ್ಥೆಯನ್ನು ಪಡೆಯಲು ನೀವು ಎಷ್ಟು ದೂರ ಕ್ರಮಿಸಬೇಕು? ನಗರಕ್ಕೆ, ಹತ್ತಿರದ ಪಟ್ಟಣಗಳಿಗೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಸ್ಥರು ಹೆಚ್ಚಿನ ಸಂಖ್ಯೆಯಲ್ಲಿದ್ದೀರಾ ಎಂಬ ಬಗ್ಗೆ ಮಾಹಿತಿ ಕಳುಹಿಸಿ. ಉದಯವಾಣಿಯು ಇದರ ಕುರಿತು ಅಧ್ಯಯನ ಮಾಡಿ ವರದಿ ಮಾಡಲಿದೆ.

ನಿಮ್ಮ ಮಾಹಿತಿಯನ್ನು 6366935315 ಈ ನಂಬರ್‌ಗೆ ಕಳುಹಿಸಿ. ಮಾಹಿತಿ ಕಳುಹಿಸುವವರ ಹೆಸರು, ಹಳ್ಳಿಯ ಹೆಸರು, ತಾಲೂಕಿನ ಹೆಸರು , ಸಂಪರ್ಕ ಸಂಖ್ಯೆ (ಮೊಬೈಲ್‌)ಯನ್ನು ಕಳುಹಿಸಲು ಮರೆಯಬೇಡಿ.

- ರಾಜು ಖಾರ್ವಿ, ಕೊಡೇರಿ

 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.