ಬಸ್‌ ಸಂಚಾರ ಸ್ಥಗಿತ : ನೆಂಪು ಕಾಲೇಜು ಮಕ್ಕಳಿಗೆ ಸಂಕಷ್ಟ

ಅಂಪಾರು - ನೇರಳಕಟ್ಟೆ - ವಂಡ್ಸೆ ಮಾರ್ಗ

Team Udayavani, Jul 30, 2019, 5:41 AM IST

bus

ಕುಂದಾಪುರ: ಉಡುಪಿಯಿಂದ ವಂಡ್ಸೆ, ಕೊಲ್ಲೂರಿಗೆ ಶಾಲಾ- ಕಾಲೇಜು ಮಕ್ಕಳಿಗೆ ಅನುಕೂಲವಾಗುವಂತೆ ಸಂಚರಿಸುತ್ತಿದ್ದ ಖಾಸಗಿ ಬಸ್‌ವೊಂದು ಕಳೆದ 1 ತಿಂಗಳಿನಿಂದ ಸಂಚಾರವನ್ನು ಸ್ಥಗಿತಗೊಳಿಸಿದ್ದು, ಇದರಿಂದ ನೆಂಪು ಪ.ಪೂ. ಕಾಲೇಜಿಗೆ ಅಂಪಾರು, ವಾಲೂ¤ರು, ನೇರಳಕಟ್ಟೆಯಿಂದ ಬರುವ ವಿದ್ಯಾರ್ಥಿಗಳು ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ಕಳೆದ ಒಂದೂವರೆ ತಿಂಗಳಿನಿಂದ ಉಡುಪಿಯಿಂದ ಕೊಲ್ಲೂರಿಗೆ ಅಂಪಾರು – ನೇರಳಕಟ್ಟೆ – ನೆಂಪು ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಿರುವುದರಿಂದ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ.

4 ಬಾರಿ ಸಂಚಾರ
ಉಡುಪಿಯಿಂದ ಈ ಖಾಸಗಿ ಬಸ್‌ ದಿನಕ್ಕೆ 4 ಬಾರಿ ಸಂಚರಿಸುತ್ತಿತ್ತು. ಬೆಳಗ್ಗೆ ಉಡುಪಿಯಿಂದ ಕೊಲ್ಲೂರಿಗೆ, ಮಧ್ಯಾಹ್ನ ಹಾಗೂ ಸಂಜೆ ಉಡುಪಿಯಿಂದ ವಂಡ್ಸೆಯವರೆಗೆ ಸಂಚರಿಸುತ್ತಿತ್ತು. ಆದರೆ ಏಕಾಏಕಿ ಈ ಬಸ್‌ ಸಂಚಾರ ಸ್ಥಗಿತಗೊಳಿಸಿರುವುದರಿಂದ ನಿತ್ಯ ಬೆಳಗ್ಗೆ ಹಾಗೂ ಸಂಜೆ ಹೊತ್ತು ಪ್ರಯಾಣಿಸುತ್ತಿದ್ದ ಮಕ್ಕಳು ಸಹಿತ ನೂರಾರು ಮಂದಿಗೆ ಸಂಚಾರ ಸಂಕಷ್ಟ ಎದುರಾಗಿದೆ.

ಈಗ ಹೆಬ್ರಿಯಿಂದ ಕೊಲ್ಲೂರಿಗೆ 8.20ಕ್ಕೆ ಒಂದು ಬಸ್‌ ಸಂಚರಿಸಿದರೆ, ಆ ಬಳಿಕ ಮತ್ತೆ ಬಸ್‌ ಬರುವುದು ಮಧ್ಯಾಹ್ನ 1ಕ್ಕೆ. ಅದು ಕೊಲ್ಲೂರಿನಿಂದ ವಂಡ್ಸೆ, ನೇರಳಕಟ್ಟೆ, ಅಂಪಾರು ಆಗಿ ಉಡುಪಿಗೆ, ಮತ್ತೆ 3.15ಕ್ಕೊಂದು ಬಸ್‌ ಹೆಬ್ರಿಯಂದ ಕೊಲ್ಲೂರಿಗೆ ಈ ಮಾರ್ಗವಾಗಿ ಸಂಚರಿಸುತ್ತದೆ. ಆ ಬಳಿಕ ಮತ್ತೆ ಈ ಮಾರ್ಗದಲ್ಲಿ ಯಾವುದೇ ಬಸ್‌ ಸಂಚಾರ ಇಲ್ಲ. ಈ ಮಾರ್ಗದಲ್ಲಿ ಸರಕಾರಿ ಬಸ್‌ ಆದರೂ ಸಂಚಾರ ಆರಂಭಿಸಲಿ ಎಂಬುದು ಸ್ಥಳೀಯರ ಆಗ್ರಹ.

ಬೇರೆ ವಾಹನಗಳ ಅವಲಂಬನೆ
ಕಾಲೇಜು ಹೆಚ್ಚಿನ ದಿನಗಳಲ್ಲಿ 4 ಗಂಟೆಯವರೆಗೆ ಇರುತ್ತದೆ. ಆದರೆ ಅಪರಾಹ್ನ 3.15 ರ ನಂತರ ಈ ಮಾರ್ಗದಲ್ಲಿ ಬಸ್‌ ಸಂಚಾರ ಇಲ್ಲದೇ ಇರುವುದರಿಂದ ಕಾಲೇಜು ವಿದ್ಯಾರ್ಥಿಗಳು ಇತರ ಖಾಸಗಿ ವಾಹನಗಳ ಮೊರೆ ಹೋಗುವಂತಾಗಿದ್ದು, ಈ ಸಮಸ್ಯೆಗೆ ಪರಿಹಾರ ಎದುರು ನೊಡುತ್ತಿದ್ದಾರೆ.

ಪರಿಶೀಲನೆ ನಡೆಸಿ, ಸೂಕ್ತ ಕ್ರಮ
ಅಂಪಾರು, ನೇರಳಕಟ್ಟೆ, ನೆಂಪು ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ ಸಂಚಾರ ಸ್ಥಗಿತದಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ವಾಲೂ¤ರು, ಕಂಡೂÉರು ಮಾರ್ಗದಲ್ಲಿ ಒಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚರಿಸುತ್ತಿದ್ದು, ಅದನ್ನು ಅಂಪಾರು ಮಾರ್ಗದಲ್ಲಿ ಸಂಚರಿಸುವಂತೆ ಮಾಡಿದರೆ ಆಗುವ ಸಾಧಕ-ಬಾಧಕ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ರಾಜೇಶ್‌ ಮೊಗವೀರ,
ಡಿಪೋ ಮ್ಯಾನೇಜರ್‌, ಕೆಎಸ್‌ಆರ್‌ಟಿಸಿ ಕುಂದಾಪುರ ವಿಭಾಗ

ಸರಕಾರಿ ಬಸ್‌ ಬರಲಿ
ಅಂಪಾರುವಿನಿಂದ ವಂಡ್ಸೆ, ನೆಂಪು, ನೇರಳಕಟ್ಟೆಗೆ ಈಗ ಬರಬೇಕಾದರೆ ಬಸ್‌ ಇಲ್ಲದೇ ತುಂಬಾ ಸಮಸ್ಯೆಯಾಗುತ್ತಿದೆ. ಹಿಂದೆ 4 ಟ್ರಿಪ್‌ ಮಾಡುತ್ತಿದ್ದ ಖಾಸಗಿ ಬಸ್‌ ಈಗ ಬರುತ್ತಿಲ್ಲ. ಈ ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ಹೊತ್ತು ಸರಕಾರಿ ಬಸ್‌ ಸಂಚಾರ ವ್ಯವಸ್ಥೆ ಮಾಡಲಿ.
-ಪ್ರಕಾಶ್‌ ಭಟ್‌ ನೆಂಪು,
ಸ್ಥಳೀಯರು

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.