ಹೇರಿಕುದ್ರು: ನದಿಗೆ ಹಾರಿದ ಉದ್ಯಮಿ : ಪತ್ತೆಯಾಗದ ಸುಳಿವು
Team Udayavani, Jan 27, 2020, 1:17 AM IST
ಕುಂದಾಪುರ: ಜನರು ನೋಡುತ್ತಿದ್ದಂತೆಯೇ ಹೊಟೇಲ್ ಉದ್ಯಮಿಯೋರ್ವರು ನದಿಗೆ ಹಾರಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ – ಹೇರಿಕುದ್ರು ಸೇತುವೆಯಲ್ಲಿ ರವಿವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ. ಅವರಿಗಾಗಿ ರಾತ್ರಿಯವರೆಗೂ ಶೋಧ ನಡೆಸಲಾಯಿತಾದರೂ ಯಾವುದೇ ಸುಳಿವು ಸಿಕ್ಕಿಲ್ಲ.
ಕುಂದಾಪುರದ ಚಿಕ್ಕನ್ಸಾಲ್ ರಸ್ತೆ ನಿವಾಸಿ, ಮುಂಬಯಿಯಲ್ಲಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮಿಯಾಗಿದ್ದ ಕೆ.ಜಿ. ಗಣೇಶ್ (50) ನದಿಗೆ ಹಾರಿದವರಾಗಿದ್ದಾರೆ.
ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಕುಂದಾಪುರ ಕಡೆಯಿಂದ ರಿಕ್ಷಾದಲ್ಲಿ ಬಂದಿದ್ದ ಅವರು ಸೇತುವೆಯಿಂದ ಸ್ವಲ್ಪ ದೂರು ಇಳಿದಿದ್ದರು. ಬಳಿಕ ಸೇತುವೆವರೆಗೆ ನಡೆದುಕೊಂಡು ಬಂದು, ಪರ್ಸ್, ವಾಚ್, ಕನ್ನಡಕ, ಚಪ್ಪಲಿ ಮುಂತಾದ ವನ್ನು ತೆಗೆದಿರಿಸಿ ನದಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ನದಿಯಲ್ಲಿ ದೋಣಿ ಮೂಲಕ ಮೀನು ಹಿಡಿಯುತ್ತಿದ್ದವರು 2-3 ದೋಣಿಯಲ್ಲಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಪರ್ಸ್ನಲ್ಲಿದ್ದ ಆಧಾರ್ ಕಾರ್ಡ್ ಛಾಯಾಪ್ರತಿಯಿಂದಾಗಿ ಅವರ ಗುರುತು ಪತ್ತೆಹಚ್ಚಲಾಗಿದೆ.
ಕುಂದಾಪುರ ಅಗ್ನಿ ಶಾಮಕ ದಳದ ಠಾಣಾಧಿಕಾರಿ ಕೆ.ಎನ್. ಮೊಗೇರ ನೇತೃತ್ವದಲ್ಲಿ ರಾತ್ರಿಯವರೆಗೂ ಪತ್ತೆ ಕಾರ್ಯ ನಡೆಯಿತು. ಸ್ಥಳೀಯರು ಕೂಡ ಸಹಕರಿಸಿದ್ದರು.
25 ವರ್ಷದಿಂದ ಹೋಟೆಲ್ ಉದ್ಯಮ
ಮುಂಬಯಿಯಲ್ಲಿ ಸುಮಾರು 25 ವರ್ಷಗಳಿಂದ ಹೊಟೇಲ್ ಉದ್ಯಮಿಯಾಗಿದ್ದ ಗಣೇಶ್, 4-5 ವರ್ಷಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಅಲ್ಲಿದ್ದ ಹೊಟೇಲನ್ನು ಈಗ ಲೀಸ್ಗೆ ಕೊಟ್ಟಿದ್ದರು. ಊರಲ್ಲಿಯೂ ಬಾಡಿಗೆಗೆ ರೂಂಗಳನ್ನು ನೀಡಿದ್ದರು. ಆರ್ಥಿಕವಾಗಿ ಅನುಕೂಲಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಿನ ಕೆಲವು ದಿನಗಳಿಂದ ಖನ್ನತೆಗೆ ಒಳ ಗಾಗಿದ್ದ ಅವರು, “ನಾನು ಸಾಯೆ¤àನೆ, ಸಾಯೆ¤àನೆ’ ಎಂದು ಹೇಳುತ್ತಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ