ಉಚ್ಚಿಲ ಹೊಸ ಬಸ್ ನಿಲ್ದಾಣಕ್ಕೆ ಹಾನಿ: ಕ್ರಮಕ್ಕೆ ಆಗ್ರಹ
Team Udayavani, Jan 28, 2019, 12:50 AM IST
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಬಳಿ ನಮ್ಮೂರ ನಮ್ಮ ಜನ ಸಂಘಟನೆಯ ವತಿಯಿಂದ ನಿರ್ಮಿಸಲ್ಪಟ್ಟು ಕಳೆದ ವಾರವಷ್ಟೇ ಉದ್ಘಾಟನೆಗೊಂಡಿದ್ದ ಮಹಾಲಕ್ಷ್ಮೀ ಬಸ್ ನಿಲ್ದಾಣವನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.
ಬಸ್ ನಿಲ್ದಾಣಕ್ಕೆ ಕಟ್ಟಲಾಗಿದ್ದ ಇಟ್ಟಿಗೆ ಕಲ್ಲುಗಳನ್ನು ಒಡೆದು ಹಾಕಿದ್ದು, ಇದರಿಂದ ಬಸ್ ನಿಲ್ದಾಣಕ್ಕೂ ಹಾನಿಯುಂಟಾಗಿದೆ. ಸಾರ್ವಜನಿಕ ಉಪಯೋಗಕ್ಕೆಂದು ಸಂಸ್ಥೆಯೊಂದು ನಿರ್ಮಿಸಿಕೊಟ್ಟಿರುವ ಬಸ್ ನಿಲ್ದಾಣಕ್ಕೆ ಹಾನಿಯುಂಟು ಮಾಡಿರುವುದು ಖಂಡನೀಯ. ಬಸ್ ನಿಲ್ದಾಣಕ್ಕೆ ಹಾನಿಯುಂಟು ಮಾಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಂತೆ ನಮ್ಮೂರ ನಮ್ಮ ಜನ ಸಂಘಟನೆ ಒತ್ತಾಯಿಸಿದೆ.
ಈ ಬಸ್ ತಂಗುದಾಣದಲ್ಲಿ ರಾತ್ರಿ ಸಮಯದಲ್ಲಿ ಗಾಂಜಾ ವ್ಯಸನಿಗಳು ತಂಗುತ್ತಿದ್ದು, ರಾತ್ರಿ ಗಸ್ತು ತಿರುಗುವ ಪೊಲೀಸರು ಈ ಬಗ್ಗೆ ಎಚ್ಚರಿಕೆ ವಹಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು