ಓಟಿಗೆ ಸ್ಪರ್ಧಿಸಲು ಮನೆ ಬಿಟ್ಟಿದ್ದೆ !


Team Udayavani, Apr 17, 2018, 6:00 AM IST

Bg-Mohandas.jpg

ಬೈಂದೂರು ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಪ್ರಥಮ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಘಟಾನುಘಟಿ ಮುತ್ಸದ್ದಿಗಳ ನಡುವೆ ರಾಜಕೀಯ ಅಖಾಡದಲ್ಲಿ ಹೋರಾಟ ನಡೆಸಿ ಪ್ರಥಮ ಬಾರಿಗೆ ಕಾಂಗ್ರೆಸ್‌ ಗೆಲುವಿಗೆ ಅಂಕುಶ ಹಾಕಿ ಕೇವಲ 23 ಮತಗಳಿಂದ ಜನತಾದಳ ವಿಜಯ ಸಾಧಿಸಲು ಕಾರಣರಾದವರು ಬಿ.ಜಿ. ಮೋಹನ್‌ದಾಸ್‌. ವೈದ್ಯಕೀಯ, ಔಷಧಾಲಯ ಶಾಸ್ತ್ರ ವಿಭಾಗದಲ್ಲಿ ಉನ್ನತ ಶಿಕ್ಷಣ ಪಡೆದಿರುವ ಇವರ ರಾಜಕೀಯ ಎಂಟ್ರಿ ಬಹಳ ರೋಚಕವಾಗಿದೆ.

ರಾಜಕೀಯ ಪ್ರವೇಶಿಸಲು ಕಾರಣ ?
     ನನ್ನ ತಂದೆ ವೃತ್ತಿಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದವರು.ಅವರ ವರ್ಗಾವಣೆಯಾದಂತೆ ಬೇರೆ ಬೇರೆ ಕಡೆ ಶಾಲೆಗೆ ಹೋಗಬೇಕಾದ ಅನಿವಾರ್ಯತೆ. ಕಾಲೇಜು ದಿನಗಳಲ್ಲೇ ನಾಯಕತ್ವ ಮೈಗೂಡಿಸಿಕೊಂಡಿದ್ದ ನನಗೆ ಊರಿನ ಪರಿಸ್ಥಿತಿ ಬಗ್ಗೆ ಬೇಸರವಿದ್ದಿತ್ತು. ಸೌದಿ ಆರೇಬಿಯಾದಲ್ಲಿ ಒಂದೂವರೆ ವರ್ಷ ಉದ್ಯೋಗ ಮಾಡಿ ಭಾರತಕ್ಕೆ ವಾಪಸಾದೆ. ಅದೇ ಸಮಯದಲ್ಲಿ ಊರಿನಲ್ಲಿ ಚುನಾವಣೆ ಪ್ರಾರಂಭವಾಗಿತ್ತು. ಕೈಯಲ್ಲಿ ದುಡಿದ ಹಣವಿತ್ತು. ಊರಿನ ಅಭಿವೃದ್ಧಿ ಮಾಡಲು ಅವಕಾಶ ಉಪಯೋಗಿಸಿಕೊಳ್ಳಬೇಕು ಎಂದು ಪಕ್ಷೇತರವಾಗಿ ರಾಜಕೀಯ ಪ್ರವೇಶಿಸಿದೆ.

ಕುಟುಂಬದವರ ರಾಜಕೀಯ ಹಿನ್ನೆಲೆ ಬಗ್ಗೆ
          ಕುಟುಂಬದಲ್ಲಿ ರಾಜಕೀಯ ಹಿನ್ನೆಲೆಯಿಲ್ಲ. ನನ್ನ ತಂದೆ ತುಂಬಾ ಕಟ್ಟುನಿಟ್ಟು. ಉತ್ತಮ ಕೃಷಿಕ. ರಾಜಕೀಯ ಅವರಿಗೆ ಇಷ್ಟ ಇರಲಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಾದರೆ ಮನೆ ಬಿಡಬೇಕು ಎಂದರು. ರಾಜಕೀಯಕ್ಕೋಸ್ಕರ ಮನೆಬಿಟ್ಟು ಅಜ್ಜಿ ಮನೆಯಲ್ಲಿ ವಾಸ ಮಾಡಿದೆ.

ನಿಮ್ಮ ರಾಜಕೀಯ ಪ್ರಚಾರ ಹೇಗಿತ್ತು?
      ಆ ಸಮಯದಲ್ಲಿ ಜನರಿಗೆ ಕಾಂಗ್ರೆಸ್‌ ಬಿಟ್ಟರೆ ಇನ್ನೊಂದು ಪಕ್ಷ ಗೊತ್ತಿರಲಿಲ್ಲ. ನಾನು ಪಕ್ಷೇತರನಾಗಿದ್ದೆ. ಆದರೂ ನನ್ನ ಉದಯ ಸೂರ್ಯ ಚಿಹ್ನೆ ಹೆಸರುವಾಸಿಯಾಯಿತು.

ಅಂದು ರಾಜಕೀಯ ಪೈಪೋಟಿ ಹೇಗಿತ್ತು?
      ಬೈಂದೂರಿನಲ್ಲಿ ಜಿ.ಎಸ್‌. ಆಚಾರ್‌, ಯಡ್ತರೆ ಮಂಜಯ್ಯ ಶೆಟ್ಟಿಯಂತಹ ನಾಯಕರ ಜತೆಗೆ ಅಪ್ಪಣ್ಣ ಹೆಗ್ಡೆ ಪ್ರತಿ ಸ್ಪರ್ಧಿ ಯಾಗಿದ್ದರು. ನಾನು ಬೈಂದೂರು ಜಂಕ್ಷನ್‌ ಬಳಿ ಪ್ರಚಾರದ ಚಪ್ಪರ ನಿರ್ಮಿಸುವಾಗ ವೀರಪ್ಪ ಮೊಲಿ ನನ್ನನ್ನು ನೋಡಿ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ನನ್ನ ಬಗ್ಗೆ ಹೇಳಿದ್ದರು. “ಯಾರೋ ಮಣಿಪಾಲದ ಹುಡುಗ. ಬೈಂದೂರಲ್ಲಿ ಪಕ್ಷೇ ತರನಾಗಿ ಸ್ಪರ್ಧಿಸಿದ್ದಾನೆ; ಅವನಿಗೆ ಸ್ವಲ್ಪ ಹೇಳಿ’ ಎಂದಿದ್ದರು.

ಫಲಿತಾಂಶದ  ಬಳಿಕ ಅನುಭವ ಹೇಗಿತ್ತು?
         ಆವತ್ತು ಬಿಸಿ ರಕ್ತದ ಯುವಕರ ಪಡೆ, ಸೌದಿ ಅರೇಬಿಯಾ ದಲ್ಲಿ ದುಡಿದ ಸ್ವಲ್ಪ ಹಣ ಇತ್ತು. ಚುನಾವಣೆಯಲ್ಲಿ ಜಯ ಗಳಿಸದಿದ್ದರೂ ಸಮರ್ಥ ಸ್ಪರ್ಧೆ ನೀಡಿರುವ ಸಮಾಧಾನ ಇದೆ. ನನ್ನ ಸ್ಪರ್ಧೆಯಿಂದಾಗಿ ಕಾಂಗ್ರೆಸ್‌ ಕೇವಲ 23 ಮತಗಳ ಅಂತರದಲ್ಲಿ ಸೋಲುವಂತಾಯಿತು. ಸ್ವಲ್ಪ ದಿನದಲ್ಲೇ ರಾಜಕೀಯಕ್ಕೆ ಗುಡ್‌ಬೈ ಹೇಳಿ ಮತ್ತೆ ವಿದೇಶಕ್ಕೆ ಹೋದೆ.ಈಗಿನ ರಾಜಕೀಯ ಅನ್ನೋದು ವ್ಯವಹಾರ ಆಗಿದೆ. ಅಂದು ನಾನು ಸ್ಪರ್ಧೆ ಮಾಡಿದ್ದು ಕ್ಷೇತ್ರದಲ್ಲಿ   ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ಕಾರಣಕ್ಕೆ.

– ಅರುಣ ಶಿರೂರು

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.