ಬೈಂದೂರು: ಮುಗಿದ ಮತದಾನ, ಲೆಕ್ಕಾಚಾರ ಶುರು

ಜಿಲ್ಲೆಯಲ್ಲಿ ಬೈಂದೂರು ಕನಿಷ್ಠ, ಉಡುಪಿಯಲ್ಲಿ ಗರಿಷ್ಠ ಮತದಾನ

Team Udayavani, Apr 27, 2019, 2:31 PM IST

kundapur-tdy-2

ಕುಂದಾಪುರ, ಎ. 26: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಲ್ಲಿ ಮತದಾನ ಮುಗಿದಿದ್ದು, ಈಗ ಅಭ್ಯರ್ಥಿಗಳು, ಪಕ್ಷಗಳಲ್ಲಿ ಮಾತ್ರವಲ್ಲದೆ ಜನರಲ್ಲಿಯೂ ಲೆಕ್ಕಾಚಾರ ಶುರುವಾಗಿದೆ. ಎ. 23 ರಂದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 75.30 ಮತದಾನವಾಗಿದೆ. ಫಲಿತಾಂಶಕ್ಕಾಗಿ ಮಾತ್ರ ಮೇ 23 ರವರೆಗೆ ಕಾಯಲೇಬೇಕು.

ಬೈಂದೂರು ಕ್ಷೇತ್ರದಲ್ಲಿ 2,26,587 ಮತದಾರರಿದ್ದು, ಆ ಪೈಕಿ 1,70,531 ಮಂದಿ ಮತದಾನ ಮಾಡಿದ್ದಾರೆ. ಇದರಲ್ಲಿ 78,687 ಮಂದಿ ಪುರುಷರು, 91,436 ಮಂದಿ ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗರಿಷ್ಠ – 91.09, ಕನಿಷ್ಠ – 46.24:

ಕ್ಷೇತ್ರದಲ್ಲಿರುವ 246 ಮತಗಟ್ಟೆಗಳ ಪೈಕಿ ನಕ್ಸಲ್ ಪೀಡಿತ ಪ್ರದೇಶವಾದ ಹಳ್ಳಿಹೊಳೆಯ ಇರಿಗೆ ಹಿ.ಪ್ರಾ. ಶಾಲೆಯ ಮತಗಟ್ಟೆಯಲ್ಲಿ ಗರಿಷ್ಠ ಶೇ.91.09 ಮತದಾನವಾದರೆ, ಕಳಿನಜೆಡ್ಡುವಿನ ಕಿ.ಪ್ರಾ. ಶಾಲೆಯಲ್ಲಿ ಕನಿಷ್ಠ ಶೇ. 46.24 ಮತದಾನವಾಗಿದೆ. 39 ಮತಗಟ್ಟೆಗಳಲ್ಲಿ ಶೇ.80 ಕ್ಕಿಂತ ಅಧಿಕ ಪ್ರಮಾಣದ ಮತದಾನವಾಗಿದ್ದರೆ, 6 ಮತಗಟ್ಟೆಗಳಲ್ಲಿ ಮಾತ್ರ ಶೇ. 60 ಕ್ಕಿಂತ ಕಡಿಮೆ ಮತ ಚಲಾವಣೆಯಾಗಿದೆ.

ಅತ್ಯಧಿಕ ಮತದಾನ:

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಬೈಂದೂರಲ್ಲಿ ಶೇ. 59.05ರಷ್ಟು ಮತದಾನವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಶೇ.72.92, 2108 ರ ವಿಧಾನಸಭಾ ಚುನಾವಣೆಯಲ್ಲಿ ಶೇ.79.08 ಹಾಗೂ 2013 ರ ವಿಧಾನಸಭಾ ಚುನಾವಣೆಯಲ್ಲಿ ಶೇ.66 ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾನ ಕಳೆದ 3 ಅವಧಿಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ನಡೆದ ಗರಿಷ್ಠ ಮತದಾನವಾಗಿದೆ.

ಇಲ್ಲೂ ಮಹಿಳೆಯರೇ ಮುಂದು:

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರೇ ಮತದಾನದಲ್ಲಿ ಮುಂಚೂಣಿಯಲ್ಲಿದ್ದರೆ, ಈಗ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲೂ ಕೂಡ ತಾವೇ ಮುಂದು ಎಂದು ಮತ್ತೂಮ್ಮೆ ಮಹಿಳಾ ಮತದಾರರು ಸಾಬೀತುಪಡಿಸಿದ್ದಾರೆ.

1,16,349 ಮಹಿಳೆಯರ ಪೈಕಿ 91,436 (ಶೇ.78.58) ಮಂದಿ ಮತದಾನ ಮಾಡಿದ್ದರೆ, 1,10,237 ಪುರುಷರ ಪೈಕಿ 78,687 (ಶೇ. 71.37) ಮಂದಿ ಮತ ಚಲಾಯಿಸಿದ್ದಾರೆ.

ಬೈಂದೂರು: ಕಡಿಮೆ ಮತದಾನ!

ಉಡುಪಿ ಜಿಲ್ಲೆಯಲ್ಲಿರುವ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಬೈಂದೂರಲ್ಲಿ ಶೇ. 75.30 ಮತದಾನವಾಗಿದ್ದರೂ ಉಳಿದ 4 ಕ್ಷೇತ್ರಗಳಿಗೆ ಹೋಲಿಸಿದರೆ, ಇದುವೇ ಕನಿಷ್ಠ ಮತದಾನವಾಗಿದೆ. ಉಡುಪಿಯಲ್ಲಿ ಗರಿಷ್ಠ – ಶೇ. 78.77, ಕಾರ್ಕಳದಲ್ಲಿ – ಶೇ. 78.39, ಕಾಪು – ಶೇ. 77.89 ಹಾಗೂ ಕುಂದಾಪುರ – ಶೇ. 77.66 ಪ್ರತಿಶತ ಮತದಾನವಾಗಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.