ಬೈಂದೂರು- ಸೋಮೇಶ್ವರ: ಕರ್ಕಾಟಕ ಅಮಾವಾಸ್ಯೆ ಸಂಭ್ರಮ
Team Udayavani, Jul 24, 2017, 6:15 AM IST
ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಕಡಲ ತೀರದಲ್ಲಿ ಕರ್ಕಾಟಕ ಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಜನರು ಸಮುದ್ರ ಸ್ನಾನ ಮಾಡಿದರು.
ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ಸೋಮೇಶ್ವರ ದೇವಸ್ಥಾನದಲ್ಲಿ ನಡೆಯುವ ಜಾತ್ರೆಯಲ್ಲಿ ದೇವಸ್ಥಾನದ ನಾಗತೀರ್ಥಕ್ಕೆ ಕಾಶಿಯಿಂದ ತೀರ್ಥ ಹರಿಯುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಸಮುದ್ರ ಸ್ನಾನವನ್ನು ಮಾಡಿದರು.