ಬೈಂದೂರು ತಾ|: ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧ

ನೆರೆ ಸಾಧ್ಯತೆ ಪ್ರದೇಶಗಳಲ್ಲಿ ಅಲರ್ಟ್‌, ತತ್‌ಕ್ಷಣ ನೆರವು ನೀಡಿ ಸ್ಪಂದಿಸಲು ಪ್ರತ್ಯೇಕ ವ್ಯವಸ್ಥೆ

Team Udayavani, Jun 22, 2019, 5:41 AM IST

2106BDRE1

ಕಳೆದ ವರ್ಷ ಮಳೆಗೆ ಮನೆಗಳನ್ನು ಆವರಿಸಿದ ನೆರೆನೀರು. (ಸಂಗ್ರಹ ಚಿತ್ರ)

ಬೈಂದೂರು: ನೂತನ ತಾಲೂಕು ಕೇಂದ್ರವಾದ ಬೈಂದೂರು ವ್ಯಾಪ್ತಿಯಲ್ಲಿ ಮುಂಗಾರಿನ ಪ್ರಾಕೃತಿಕ ವಿಕೋಪ ಎದುರಿಸಲು ಇಲಾಖೆ ಸರ್ವ ಸನ್ನದ್ಧವಾಗಿದೆ. ಈಗಾಗಲೇ ವಿವಿಧ ಹಂತದ ಸಭೆಗಳನ್ನು ಕರೆದು ಪ್ರತ್ಯೇಕ ತಂಡ ರಚಿಸಿ ತತ್‌ಕ್ಷಣ ಸ್ಪಂದಿಸಲು ವಹಿಸಬೇಕಾದ ಮುಂಜಾಗ್ರತೆ ಬಗ್ಗೆ ತಿಳಿಸಲಾಗಿದೆ. ಕಳೆದ ವರ್ಷ ನೆರೆಹಾವಳಿ ಮತ್ತು ಕಡಲ್ಕೊರೆತ ಬೈಂದೂರು ತಾಲೂಕಿನಲ್ಲಿ ಅಪಾರ ನಷ್ಟ ಉಂಟುಮಾಡಿತ್ತು. ಕರಾವಳಿ ಮತ್ತು ಮಲೆನಾಡು ಎರಡು ಭಾಗಗಳು ಈ ತಾಲೂಕು ವ್ಯಾಪ್ತಿಗೆ ಒಳಪಡುವುದರಿಂದ ಸೂಕ್ತ ಮುಂಜಾಗ್ರತೆ ಹಾಗೂ ತಯಾರಿ ನಡೆಸಬೇಕಾದ ಅನಿವಾರ್ಯತೆ ಬಹಳಷ್ಟಿದೆ.

ಕಂದಾಯ ಇಲಾಖೆ ಆಯಾಯ ಗ್ರಾಮ ಮಟ್ಟದಲ್ಲಿ ಪ್ರತ್ಯೇಕ ತಂಡ ರಚಿಸಿ ಈಜುಗಾರರು, ಪೋಲಿಸ್‌ ಇಲಾಖೆ, ಗಂಜಿ ಕೇಂದ್ರ, ಆ್ಯಂಬುಲೆನ್ಸ್‌, ದೋಣಿ ಸೌಲಭ್ಯ ಮುಂತಾದವುಗಳ ಬಗ್ಗೆ ಸಮಗ್ರ ಮಾಹಿತಿ ಸಿದ್ಧಪಡಿಸಿದೆ. ಅಗತ್ಯ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ನೆರವನ್ನು ಪಡೆಯುವ ಮೂಲಕ ಮಳೆಗಾಲ ಎದುರಿಸಲು ಬೈಂದೂರು ತಾಲೂಕಿನ ತಹಶೀಲ್ದಾರರ ತಂಡ ಸಂಪೂರ್ಣ ಸಿದ್ಧ‌ªವಾಗಿದೆ.

ಕಡಲ್ಕೊರೆತ ಸಂಭವಿಸಬಹುದಾದ ಸ್ಥಳಗಳು
ಕರ್ಕಿಕಳಿ ಉಪ್ಪುಂದ, ಕಿರಿಮಂಜೇಶ್ವರದ ಹೊಸಹಿತ್ಲು, ಕೊಡೇರಿ, ಮರವಂತೆ, ಪಡುವರಿ, ದೊಂಬೆ, ತಾರಾಪತಿ, ಅಮ್ಮನವರತೊಪು, ಶಿರೂರು ಕರಾವಳಿ, ಕಳಿಹಿತ್ಲು.

ನೆರೆಪೀಡಿತ ಪ್ರದೇಶಗಳು
ಮರವಂತೆ, ಕಂಡುಹಿತ್ಲು, ಹೊಳೆಬಾಗಿಲು, ಮಧ್ಯಸ್ಥರ ಬೆಟ್ಟು, ಕಳಿಹಿತ್ಲು, ನಂದಿಕಂಠ, ಕೋಣಿR, ಕೊಡ್ಗಿತ್ಲು, ಕೆಂಬೈಲು, ಚುಂಗಿಗುಡ್ಡೆ, ಪಡುಕೋಣೆ, ಚಿಕ್ಕೊಳ್ಳಿ, ಹಡವು, ಹೆಬ್ಟಾರ್‌ ಸಾಲು, ವಕ್ಕೇರಿ,ಬಡಾಕೆರೆ, ಸಾಲುºಡ, ಕಂಡಿಕೇರಿ, ಹೊಳೆಕೆರೆ, ನಾವುಂದ, ಕಳಿಹಿತ್ಲು, ಬಿಜೂರು.

ತುರ್ತು ಸ್ಪಂದನೆ
ಮಳೆಗಾಲ ಕುರಿತಂತೆ ಈಗಾಗಲೇ ವಿವಿಧ ಹಂತದಲ್ಲಿ ಸಭೆ ನಡೆಸಿ ಗ್ರಾಮ ಮಟ್ಟದ ಅಧಿಕಾರಿಗಳನ್ನು ಸೇರಿಸಿ ವಿಶೇಷ ತಂಡ ರಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲೂ ಕೂಡ ಇವರನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸಂದರ್ಭಗಳಲ್ಲಿ ಆಯಾಯ ಇಲಾಖೆಯ ಅಧಿಕಾರಿಗಳು ಸ್ಪಂದಿಸಲಿದ್ದಾರೆ.ದಿನದ 24 ಗಂಟೆಯೂ ಕರೆ ಸ್ವೀಕರಿಸಲಾಗುವುದು. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಗಾಲ ಕುರಿತಂತೆ ಸಂಪೂರ್ಣ ತಯಾರಿ ನಡೆಸಲಾಗಿದೆ.
– ಬಸಪ್ಪ ಪಿ.ಪೂಜಾರ್‌, ತಹಶೀಲ್ದಾರರು, ಬೈಂದೂರು

ಪುನರ್‌ ವಸತಿ ಮತ್ತು ಗಂಜಿ ಕೇಂದ್ರಗಳು
ಸ.ಹಿ.ಪ್ರಾ. ಶಾಲೆ ಬಡಾಕೆರೆ, ಮಹಾಗಣಪತಿ ಕಲ್ಯಾಣ ಮಂಟಪ ನಾವುಂದ, ಮಹಾವಿಷ್ಣು ದೇವಸ್ಥಾನ ಹಡವು, ಸೀತಾರಾಮಚಂದ್ರ ಕಲ್ಯಾಣ ಮಂಟಪ ನಾಡ, ಸ.ಹಿ.ಪ್ರಾ. ಶಾಲೆ ಉಪ್ಪುಂದ, ಸ.ಹಿ.ಪ್ರಾ. ಶಾಲೆ ಕಿರಿಮಂಜೇಶ್ವರ, ಸ.ಹಿ.ಪ್ರಾ.ಶಾಲೆ ಮರವಂತೆ, ಸ.ಹಿ.ಪ್ರಾ. ಶಾಲೆ ಮೂಡು ಮರವಂತೆ, ಸ.ಹಿ.ಪ್ರಾ. ಶಾಲೆ ಹಡವಿನಕೋಣೆ ಶಿರೂರು, ಸರಕಾರಿ ಹಿ.ಪ್ರಾ.ಶಾಲೆ ಬಿಜೂರು.

-ಅರುಣ ಕುಮಾರ್‌ ಶಿರೂರು


ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.