ಧರ್ಮಜಾಗೃತಿಗೆ ಉತ್ತರಾದಿ ಶ್ರೀಗಳ ಕರೆ
Team Udayavani, Feb 5, 2017, 3:45 AM IST
ಉಡುಪಿ: ಪೀಠಾಧಿಪತಿಗಳು, ಯುವ ವಿದ್ವಾಂಸರು ಸೇರಿ ತಣ್ತೀಜ್ಞಾನದ ಧರ್ಮಪ್ರಸರಣ ಕಾರ್ಯದಲ್ಲಿ ತೊಡಗಬೇಕಾಗಿದೆ ಎಂದು ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಹೇಳಿದರು.
ಶ್ರೀಮಧ್ವ ಸಪ್ತಮ ಶತಮಾನೋತ್ಸವದ ಪ್ರಯುಕ್ತ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಮಾಧ್ವ ತತ್ತÌಜ್ಞಾನ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಅನೇಕ ವಿದ್ಯಾಪೀಠಗಳಿಂದ ಯುವ ವಿದ್ವಾಂಸರು ಸಮಾಜಕ್ಕೆ ಬರುತ್ತಿದ್ದಾರೆ. ಅವರೆಲ್ಲರೂ ಖಾಸಗಿ ಜೀವನದ ಜತೆಗೆ ಧರ್ಮಜಾಗೃತಿ, ಧರ್ಮಪ್ರಸರಣ ಕಾರ್ಯದಲ್ಲಿ ತೊಡಗಬೇಕು. ಆ ಮೂಲಕ ಪ್ರತಿಯೊಬ್ಬನ ಮನೆಯಿಂದ ಧರ್ಮದ ರಕ್ಷಣೆಯ ಕಾರ್ಯ ಆಗಬೇಕು ಎಂದು ಹೇಳಿದರು.
ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥರ ಗುರುಗಳಾದ ಶ್ರೀ ಸತ್ಯಪ್ರಮೋದತೀರ್ಥರ ಮಹಾಸಮಾರಾಧನೆ ನ. 6, 7, 8ರಂದು ಶ್ರೀಕೃಷ್ಣ ಮಠದಲ್ಲಿ ನಡೆಯಲಿದೆ. ಇದೇ ಸಂದರ್ಭ ಶ್ರೀ ಸತ್ಯಾತ್ಮತೀರ್ಥರ ಸುಧಾಮಂಗಳ ಮಹೋತ್ಸವ ನಡೆಯಲಿದೆ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಪ್ರಕಟಿಸಿದರು.
ವಿದ್ವಾಂಸ ಧೀರೇಂದ್ರಾಚಾರ್ಯ ಅವರಿಗೆ 1 ಲ.ರೂ. ನಗದು ಹಾಗೂ ಪ್ರಮಾಣ ಪತ್ರ ನೀಡಿ ಪೇಜಾವರ ಶ್ರೀಗಳು ಗೌರವಿಸಿದರು. ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಬೆಂಗಳೂರಿನ ಶ್ರೀವಿಶ್ವಗುರುಪ್ರಿಯತೀರ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ