ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ರದ್ದು ?


Team Udayavani, Jan 8, 2022, 8:00 AM IST

ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ರದ್ದು ?

ಉಡುಪಿ: ಪಡಿತರ ವ್ಯವಸ್ಥೆಯಲ್ಲಿ ನೀಡುವ ಆಹಾರ ಸಾಮಗ್ರಿಗಳ ನಿರ್ದಿಷ್ಟ ಮಾಹಿತಿ ಹಾಗೂ ಕುಟುಂಬ ಸದಸ್ಯರ ಸಂಖ್ಯೆಯನ್ನು ಖಚಿತ ಪಡಿಸಿಕೊಳ್ಳಲು ರಾಜ್ಯ ಸರಕಾರ ಒಂದೂವರೆ ವರ್ಷಕ್ಕೂ ಹಿಂದೆಯೇ ಇ-ಕೆವೈಸಿ ಮಾಡಿಸುವ ಪ್ರಕ್ರಿಯೆ ಆರಂಭಿಸಿದ್ದರೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.03 ಲಕ್ಷಕ್ಕೂ ಅಧಿಕ ಪಡಿತರ ಚೀಟಿದಾರರು ಮಾಡಿಕೊಂಡಿಲ್ಲ.

ಬಿಪಿಎಲ್‌, ಅಂತ್ಯೋದಯ ಪಡಿತರಚೀಟಿಯ ಕುಟುಂಬದ ಸದಸ್ಯರು ಆದ್ಯತೆ ಮೇಲೆ ನ್ಯಾಯಬೆಲೆ ಅಂಗಡಿಯಲ್ಲಿ
ಬೆರಳಚ್ಚು ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು 2021ರ ಡಿಸೆಂಬರ್‌ ಅಂತ್ಯದ ವರೆಗೂ ಅವಕಾಶ ನೀಡಲಾಗಿತ್ತು. ಈಗ ಅಂತಿಮವಾಗಿ ಜ. 10ರ ವರೆಗೆ ಅವಕಾಶ ನೀಡಿದ್ದು ಆಗಲೂ ಮಾಡಿಸಿಕೊಳ್ಳದೇ ಇದ್ದರೆ ಪಡಿತರ ಚೀಟಿ ರದ್ದಾಗಲಿದೆ.

ದ.ಕ. ಜಿಲ್ಲೆಯಲ್ಲಿ 2,71,134 ಪಡಿತರ ಚೀಟಿಗಳಿದ್ದು, 11,00,722 ಸದಸ್ಯರಿದ್ದಾರೆ. ಇದರಲ್ಲಿ ಕ್ರಮವಾಗಿ 2.19 ಲಕ್ಷ ಕಾರ್ಡ್‌ಗಳು, 10,07,892 ಸದಸ್ಯರು ಇ-ಕೆವೈಸಿ ಪೂರ್ಣಗೊಳಿಸಿಕೊಂಡಿದ್ದಾರೆ. 92,832 ಸದಸ್ಯರು ಹಾಗೂ 51,162 ಕಾರ್ಡ್‌ಗಳು ಇ-ಕೆವೈಸಿಗೆ ಬಾಕಿಯಿವೆ. ಉಡುಪಿ ಜಿಲ್ಲೆಯಲ್ಲಿ 1,89,993 ಪಡಿತರ ಚೀಟಿಗಳಿದ್ದು, 7,94,856 ಸದಸ್ಯ ರಿದ್ದಾರೆ. ಇದರಲ್ಲಿ ಕ್ರಮವಾಗಿ 1.37 ಲಕ್ಷ ಕಾರ್ಡ್‌ಗಳು, 6.94 ಲಕ್ಷ ಸದಸ್ಯರ ಇ-ಕೆವೈಸಿ ಪೂರ್ಣಗೊಂಡಿದೆ. ಒಂದು ಲಕ್ಷ ಸದಸ್ಯರು ಹಾಗೂ 52,240 ಕಾರ್ಡ್‌ಗಳು ಇ-ಕೆವೈಸಿ ಇನ್ನೂ ಮಾಡಿಸಿಕೊಂಡಿಲ್ಲ.

ಈ ತಿಂಗಳಿಂದಲೇ ರದ್ದು?
ಕಾರ್ಡ್‌ನಲ್ಲಿರುವ ಸದಸ್ಯರು ಕುಟುಂಬದ ಜತೆ ಇಲ್ಲದೇ ಇದ್ದರೂ ಅವರ ಹೆಸರಿನಲ್ಲಿ ಪಡಿತರ ಪಡೆಯಲಾಗುತ್ತಿತ್ತು. ಇದರಿಂದ ಸರಕಾರಕ್ಕೂ ಹೆಚ್ಚುವರಿ ಹೊರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ ಮತ್ತು ಸಾಕಷ್ಟು ಕಾಲಾವಕಾಶವನ್ನು ನೀಡಲಾಗಿದೆ. ಇನ್ನೂ ಮಾಡಿಸದಿರುವವರಿಗೆ ಪಡಿತರ ರದ್ದಾಗುವ ಸಾಧ್ಯತೆಯಿದೆ.

ಸರ್ವರ್‌ ಸಮಸ್ಯೆಯಾಗಿತ್ತು
ಇ-ಕೆವೈಸಿ ಮಾಡಿಸಲು ಆರಂಭಿಸಿದ ದಿನಗಳಲ್ಲಿ ಸ್ವಲ್ಪಮಟ್ಟಿನ ಸರ್ವರ್‌ ಸಮಸ್ಯೆ ಎದುರಾಗಿತ್ತು. ಈಗ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಯಿಲ್ಲ. ಸರ್ವರ್‌ ಸಮಸ್ಯೆಯ ದೂರು ಬಂದ ಕೂಡಲೇ ಸರಿಪಡಿಸುತ್ತಿದ್ದೇವೆ. ಸದ್ಯ ಇ-ಕೆವೈಸಿ ಮಾಡಿಸದೆ ಇರುವುದು ಸರ್ವರ್‌ ಸಮಸ್ಯೆಯಿಂದಲ್ಲ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ಇ-ಕೆವೈಸಿಗೆ ಜ. 10ರ ತನಕ ಅವಕಾಶ ನೀಡಲಾಗಿದೆ. ಸರಕಾರ ಸೂಚನೆ ನೀಡಿದರೆ ಬಾಕಿ ಇರುವವರ ಕಾರ್ಡ್‌ ರದ್ದಾಗುವ ಸಾಧ್ಯತೆ ಇರುತ್ತದೆ. ದ.ಕ. ಜಿಲ್ಲೆಯಲ್ಲಿ ಶೇ. 81.13ರಷ್ಟು ಕಾರ್ಡ್‌ ಹಾಗೂ ಶೇ.91.57ರಷ್ಟು ಸದಸ್ಯರು ಇ-ಕೆವೈಸಿ ಮಾಡಿಸಿಕೊಂಡಿ ದ್ದಾರೆ.
– ಮೊಹಮ್ಮದ್‌ ಇಸಾಕ್‌ ಮತ್ತು
ಕೆ.ಪಿ. ಮಧುಸೂದನ್‌
ಉಪನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವ ಹಾರ ಇಲಾಖೆ, ಉಡುಪಿ, ದ.ಕ. ಜಿಲ್ಲೆ

- ರಾಜು ಖಾರ್ವಿ ಕೊಡೇರಿ

 

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.