ಅರ್ಧ ವರ್ಷ ಕಳೆದರೂ ಕನ್ನಡ ಪಠ್ಯ ಪುಸ್ತಕ ಸಿಕ್ಕಿಲ್ಲ !

ಸರಕಾರಿ ಆಂ.ಮಾ. ವಿದ್ಯಾರ್ಥಿಗಳ ಕೈ ಸೇರದ "ಸವಿಕನ್ನಡ' ಪಠ್ಯ

Team Udayavani, Oct 17, 2019, 5:45 AM IST

f-38

ಕುಂದಾಪುರ: ಶಿಕ್ಷಣದ ಗುಣಮಟ್ಟ ಸುಧಾರಣೆ, ಬಡ ಮಕ್ಕಳು ಕೂಡ ಆಂಗ್ಲ ಮಾಧ್ಯಮ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಆಶಯದೊಂದಿಗೆ ಆಯ್ದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸಲಾಗಿದೆ. ಆದರೆ ಅರ್ಧ ವಾರ್ಷಿಕ ರಜೆ ಮುಗಿದು ಶಾಲಾರಂಭವಾಗುತ್ತಿದ್ದರೂ ಇನ್ನೂ ಈ ಮಕ್ಕಳಿಗೆ ಕನ್ನಡ ಪಠ್ಯಪುಸ್ತಕವೇ ಸಿಕ್ಕಿಲ್ಲ.

ದ.ಕ. ಜಿಲ್ಲೆಯ 42, ಉಡುಪಿ ಜಿಲ್ಲೆಯ 22 ಸರಕಾರಿ
ಪ್ರಾಥಮಿಕ ಶಾಲೆಗಳ ಸಹಿತ ರಾಜ್ಯಾದ್ಯಂತ 1 ಸಾವಿರ ಶಾಲೆಗಳಲ್ಲಿ ಪ್ರಸಕ್ತ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸಲಾಗಿದ್ದು ಒಟ್ಟಾರೆ ಒಂದನೇ ತರಗತಿಯಲ್ಲಿ 25,156 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬೇರೆ ಎಲ್ಲ ಪಠ್ಯ ಪುಸ್ತಕಗಳನ್ನು ನೀಡಲಾಗಿದ್ದರೂ ಮಾತೃಭಾಷೆ ಕನ್ನಡ ಬೋಧನೆಯ “ಸವಿಕನ್ನಡ’ ಪಠ್ಯಪುಸ್ತಕ ಮಾತ್ರ ಪೂರೈಸಿಲ್ಲ.

ಬೇರೆ – ಬೇರೆ
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಬೋಧಿಸುವ “ನಲಿ- ಕಲಿ’ ಪಠ್ಯ ಪುಸ್ತಕ ಹಾಗೂ ಆಂಗ್ಲ ಮಾಧ್ಯಮದ 1ನೇ ತರಗತಿ ಮಕ್ಕಳಿಗೆ ಕಲಿಸುವ “ಸವಿಕನ್ನಡ’ ಪಠ್ಯ ಪುಸ್ತಕದಲ್ಲಿರುವ ಪಠ್ಯ ಕ್ರಮಗಳು ಬೇರೆ ಬೇರೆಯಾಗಿವೆ. ಆದ್ದರಿಂದ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು ತರಬೇತಿ ವೇಳೆ ನೀಡಿದ ಪ್ರತಿಗಳನ್ನು ತಂದು ಪಾಠ ಮಾಡುತ್ತಿರುವುದಾಗಿ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಕನ್ನಡದ ನಿರ್ಲಕ್ಷ್ಯವೇ?
ಸರಕಾರಿ ಶಾಲೆಗಳಲ್ಲೂ ಆಂಗ್ಲ ಕಲಿಕೆಗೆ ಒತ್ತು ನೀಡುವ ತರಾತುರಿಯಲ್ಲಿ ಮಾತೃಭಾಷೆ ಕನ್ನಡದ ಬಗ್ಗೆ ಶಿಕ್ಷಣ ಇಲಾಖೆ ನಿರ್ಲಕ್ಷ್ಯ ತೋರಿದೆಯೇ ಎನ್ನುವ ಮಾತುಗಳು ವ್ಯಕ್ತವಾಗಿವೆ. ಯಾಕೆಂದರೆ ಈ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಪ್ರಥಮ ಭಾಷೆಯಾದರೆ, ಕನ್ನಡ ದ್ವಿತೀಯ ಭಾಷೆ. ಆದರೆ ಈ ಕನ್ನಡ ಪುಸ್ತಕವನ್ನು ಅರ್ಧ ವರ್ಷ ಕಳೆದರೂ ಇನ್ನೂ ವಿದ್ಯಾರ್ಥಿಗಳಿಗೆ ನೀಡಿಲ್ಲ.

ಆಂಗ್ಲ ಮಾಧ್ಯಮ ಶಾಲೆಗಳಿಗೆ ಕನ್ನಡ ಭಾಷಾ ಪಠ್ಯಪುಸ್ತಕ ಇನ್ನೂ ಬಂದಿಲ್ಲ. ಉಡುಪಿ ಜಿಲ್ಲೆಯಿಂದ 500 ಪುಸ್ತಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಬಂದಿದ್ದರಿಂದ ಅಲ್ಲಿಗೆ ಎರಡೆರಡು ಬಾರಿ ಪುಸ್ತಕ ಮುದ್ರಣವಾಗಬೇಕಿದ್ದರಿಂದ ಈ ಪುಸ್ತಕ ಮುದ್ರಣದಲ್ಲಿ ವಿಳಂಬವಾಗಿರಬಹುದು. ಕೂಡಲೇ ತರಿಸಿ ಕೊಡಲಾಗುವುದು.
– ಶೇಷಶಯನ ಕಾರಿಂಜ, ಉಪ ನಿರ್ದೇಶಕರು, ಶಿಕ್ಷಣ ಇಲಾಖೆ ಉಡುಪಿ

13,510 ಸವಿಕನ್ನಡ ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಪೂರ್ಣಗೊಂಡಿದೆ. ದಸರಾ ರಜೆಯಿಂದಾಗಿ ಪೂರೈಕೆ ಸ್ವಲ್ಪ ವಿಳಂಬವಾಗಿದೆ. ಕೂಡಲೇ ಎಲ್ಲ ಶಾಲೆಗಳಿಗೂ ಪಠ್ಯಪುಸ್ತಕ ಪೂರೈಸಲಾಗುವುದು.
– ರಂಗಯ್ಯ ಕೆ.ಜಿ., ಉಪ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ, ಬೆಂಗಳೂರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.