ಉಡುಪಿ: ಕುಂಜಿಬೆಟ್ಟು ಬಳಿ ಕಾರು ಪಲ್ಟಿ
Team Udayavani, Aug 25, 2019, 2:37 PM IST
ಉಡುಪಿ: ಮಣಿಪಾಲ – ಉಡುಪಿ ಮುಖ್ಯ ರಸ್ತೆಯ ಕುಂಜಿಬೆಟ್ಟಿನಲ್ಲಿ ಶಾರದಾ ಕಲ್ಯಾಣ ಮಂಟಪದ ಸಮೀಪ ಕಾರೊಂದು ಚರಂಡಿಗೆ ಉರುಳಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹೆದ್ದಾರಿ ವಿಸ್ತರಣೆಯ ಕಾಮಗಾರಿಯ ಭಾಗವಾಗಿ ನಿರ್ಮಾಣ ಹಂತದಲ್ಲಿದ್ದ ರಸ್ತೆ ಬದಿಯ ಚರಂಡಿಗೆ ಈ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಈ ಕಾರು ಉಡುಪಿ ಕಡೆಯಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಇದೀಗ ಕಾರನ್ನು ಚರಂಡಿಯಿಂದ ಮೇಲಕ್ಕೆ ಎತ್ತಲಾಗುತ್ತಿದೆ. ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಉಂಟಾಗಿಲ್ಲ.