ಕಾರು ಢಿಕ್ಕಿ: ಕುಂದಾಪುರ ಕಾಲೇಜು ವಿದ್ಯಾರ್ಥಿ ಸಾವು
Team Udayavani, Jan 17, 2018, 11:33 AM IST
ಕುಂದಾಪುರ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯ ಬಸ್ರೂರು ರಸ್ತೆಯ ಕಾರಂತರ ಮನೆಯ ಎದುರು ಅಪಘಾತಕ್ಕೀಡಾದ ಕಾರಿನಲ್ಲಿದ್ದವರ ನೆರವಿಗೆ ಬಂದ ಭಂಡಾರ್ಕಾರ್ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಆಮ್ನಿ ಕಾರು ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಬೆಟ್ಟಾಗರ ನಿವಾಸಿ ಸಂಜೀವ ಪೂಜಾರಿ ಹಾಗೂ ರೇವತಿ ದಂಪತಿಯ ಪುತ್ರ ನಿತಿನ್ ಪೂಜಾರಿ (19) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ. ಕುಂದಾಪುರದ ಭಂಡಾ ರ್ಕಾರ್ ಕಾಲೇಜಿನಲ್ಲಿ ಅಂತಿಮ ಬಿಸಿಎ ವ್ಯಾಸಂಗ ಮಾಡುತ್ತಿದ್ದರು.
ನೆರವಿಗೆ ಬಂದು ಅಪಘಾತಕ್ಕೀಡಾದ
ಬಸ್ರೂರು ರಸ್ತೆಯ ಕಾರಂತರ ಮನೆಯ ಸಮೀಪ ಖಾಸಗಿ ಬಸ್ ಹಾಗೂ ಸ್ಯಾಂಟ್ರೋ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ಶಬ್ದ ಕೇಳಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ನಿತಿನ್ ಹಾಗೂ ಪಕ್ಕದ ಮನೆಯ ಅನಿಲ್ ಅಲ್ಲಿಗೆ ಬಂದು, ನೆರವಿಗೆ ಮುಂದಾಗಿದ್ದರು. ಈ ವೇಳೆಯಲ್ಲಿ ಕುಂದಾಪುರದಿಂದ ಬಸ್ರೂರು ಕಡೆಗೆ ವೇಗವಾಗಿ ಬಂದ ಆಮ್ನಿ ನಿತಿನ್ ಹಾಗೂ ಅನಿಲ್ಗೆ ಢಿಕ್ಕಿಯಾಗಿದೆ.
ಢಿಕ್ಕಿಯ ತೀವ್ರತೆಗೆ ನಿತಿನ್ ರಸ್ತೆ ಬದಿಯ ಗದ್ದೆಗೆ ಬಿದ್ದ ಪರಿಣಾಮ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾ ಗಿ ದ್ದವು. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ನಿತಿನ್ ಕೊನೆಯುಸಿರೆಳೆದರು. ಗಾಯಗೊಂಡ ಅನಿಲ್ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಿಕೆಯಲ್ಲಿ ಮುಂದೆ
ಕ್ರಿಯಾಶೀಲ ವಿದ್ಯಾರ್ಥಿಯಾಗಿದ್ದ ನಿತಿನ್ ಕಲಿಕೆಯಲ್ಲೂ ಮುಂದಿದ್ದರು ಕುಂದಾಪುರದ ಜ್ಯೂನಿಯರ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ, ಭಂಡಾರ್ಕಾರ್ಸ್ ಕಾಲೇಜಿಗೆ ಪದವಿಗೆ ಸೇರಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆ, ಹೋರಾಟಗಳಲ್ಲಿ ಮುಂಚೂಣಿ ಯಲ್ಲಿ ಕಾಣಿಸಿಕೊಳ್ಳುತ್ತಿದ್ದರು.
ಗೌರವಾರ್ಥ ಕಾಲೇಜಿಗೆ ರಜೆ
ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ತರಿಗೆ ಹಸ್ತಾಂತರಿಸಲಾಯಿತು.
ಪ್ರಾಂಶುಪಾಲ ಡಾ| ಎನ್.ಪಿ. ನಾರಾಯಣ ಶೆಟ್ಟಿ, ಪ್ರಾಧ್ಯಾಪಕ ವೃಂದ, ಸಿಬಂದಿ ವರ್ಗ, ವಿದ್ಯಾರ್ಥಿ ಸಮೂಹ, ಅಪಾರ ಸಂಖ್ಯೆಯ ಸ್ನೇಹಿತರು ಅಂತಿಮ ದರ್ಶನ ಪಡೆದು, ಮನೆಯವರಿಗೆ ಸಾಂತ್ವನ ಹೇಳಿದರು. ನಿತಿನ್ ಗೌರವಾರ್ಥ ಮಂಗಳವಾರ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ರಜೆ ಸಾರಲಾಗಿತ್ತು. ಕಾರು ಚಾಲಕ ಪರಾರಿಯಾಗಿದ್ದು, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡ ಕುಟುಂಬಕ್ಕೆ ಸಾವಿನ ಆಘಾತ
ಸಂಜೀವ – ರೇವತಿ ದಂಪತಿಯ ಇಬ್ಬರು ಮಕ್ಕಳಲ್ಲಿ ಮಗಳು ಕಿರಿಯ ವಳಾ ಗಿದ್ದು ಅಂಗವೈಕಲ್ಯ ಹೊಂದಿದ್ದಾರೆ. ಮಗ ನಿತಿನ್ ಹಿರಿಯವನಾಗಿದ್ದರು.ತಂದೆಯೂ ಅಸೌಖ್ಯದಿಂದ ಬಳಲುತ್ತಿದ್ದು, ತಾಯಿ ಕುಂದಾಪುರದ ಹೆಂಚಿನ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ದುಡಿದು, ಈತನ ವಿದ್ಯಾಭ್ಯಾಸ ಹಾಗೂ ಮನೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದರು.ಮಗನನ್ನು ಚೆನ್ನಾಗಿ ಓದಿಸಿ, ಕುಟುಂಬದ ಹೊಣೆಗಾರಿಕೆ ವಹಿಸುವ ಕನಸು ಕಂಡಿದ್ದ ತಾಯಿಗೆ ಪುತ್ರನ ಅಕಾಲಿಕ ಸಾವು ಬರಸಿಡಿಲು ಬಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ