Karkala ಸ್ಕೂಟರಿಗೆ ಬಡಿದ ಕಾರಿನ ಬಾಗಿಲು: ಸವಾರ ಸಾವು
Team Udayavani, Dec 17, 2023, 12:37 AM IST
ಕಾರ್ಕಳ: ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಗಮನಿಸದೆ ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ತೆರಳುತ್ತಿದ್ದ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದ ಅಂಗಡಿಯೊಂದರ ಮುಂದೆ ಡಿ. 15ರಂದು ನಡೆದಿದೆ.
ರಸ್ತೆ ಬದಿ ಕಾರ್ ಅನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿದ್ದ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಗಮನಿಸದೇ ನಿರ್ಲಕ್ಷ್ಯತನದಿಂದ ತನ್ನ ಕಾರಿನ ಬಲಬದಿಯ ಬಾಗಿಲನ್ನು ತೆರೆದ ಪರಿಣಾಮ ಸಾಲ್ಮರ ಕಡೆಯಿಂದ ತಾಲೂಕು ಕಚೇರಿಯ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರನಿಗೆ ಕಾರಿನ ಬಾಗಿಲು ಬಡಿದು ಅವರು ಸ್ಕೂಟರ್ನಿಂದ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡ ಸವಾರ ಯಶವಂತ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ