ಮರವಂತೆ ಬೀಚ್ ಗೆ ಕಾರು ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ


Team Udayavani, Jul 4, 2022, 3:52 PM IST

ಮರವಂತೆ ಬೀಚ್ ಗೆ ಕಾರು ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಿಂದ ಕಾರು ಮರವಂತೆ ಬೀಚ್‌ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದು, ಚಾಲಕ ವಿರಾಜ್‌ ಆಚಾರ್ಯ (28) ಸಾವನ್ನಪ್ಪಿದ್ದು, ಮತ್ತೋರ್ವ ಯುವಕ ರೋಶನ್‌ ಆಚಾರ್‌ (25) ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸೋಮವಾರ ಅವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಈ ಕಾರು ಅವಘಡದಲ್ಲಿ ಇಬ್ಬರು ಯುವಕರು ಪ್ರಾಣವನ್ನು ಕಳೆದುಕೊಂಡಂತಾಗಿದೆ.

ರೋಶನ್‌ ಮೃತದೇಹವು ಸೋಮವಾರ ಅಪರಾಹ್ನ 3 ಗಂಟೆಯ ಸುಮಾರಿಗೆ ಹೊಸಾಡು ಗ್ರಾಮದ ಕಂಚುಗೋಡು ಸಮೀಪದ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಹುಡುಕಾಟದ ವೇಳೆ ಕುಂದಾಪುರದ ಡಿವೈಎಸ್ಪಿ ಶ್ರೀಕಾಂತ್‌ ಕೆ., ವೃತ್ತ ನಿರೀಕ್ಷಕ ಸಂತೋಷ್‌ ಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ವಿನಯ್‌ ಕುಮಾರ್‌ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

3 ಕಿ.ಮೀ. ದೂರದಲ್ಲಿ ದೇಹ ಪತ್ತೆ
ರೋಶನ್‌ ಆಚಾರ್‌ಗಾಗಿ ರವಿವಾರ ದಿನವಿಡೀ ಹುಡುಕಾಟ ನಡೆಸಿದ್ದು, ಆದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಸೋಮವಾರವೂ ಬೆಳಗ್ಗೆಯಿಂದಲೇ ಸ್ಕೂಬಾ ಡ್ರೈವ್‌ ನಿಪುಣ, ಮುಳುಗು ತಜ್ಞ ಈಶ್ವರ್‌ ಮಲ್ಪೆ ಅವರನ್ನು ಕಾರ್ಯಾಚರಣೆಗೆ ಕರೆಸಲಾಗಿತ್ತು. ಅವರೊಂದಿಗೆ ಸ್ಥಳೀಯ ಮುಳುಗು ತಜ್ಞ ದಿನೇಶ್‌ ಖಾರ್ವಿಯವರು ಹುಡುಕಾಟ ಮುಂದುವರಿಸಿದ್ದರು. ಆದರೆ ಸೋಮವಾರ ಮಧ್ಯಾಹ್ನದವರೆಗೂ ಪತ್ತೆಯಾಗಿರಲಿಲ್ಲ. ಅಪರಾಹ್ನ 3 ಗಂಟೆಯ ವೇಳೆಗೆ ಕಂಚುಗೋಡಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸ್ಥಳವು ಮರವಂತೆಯ ಘಟನೆ ನಡೆದ ಸುಮಾರು 3 ಕಿ.ಮೀ. ಅಂತರದಲ್ಲಿದೆ.

ಇದನ್ನೂ ಓದಿ : ಬಿಜೆಪಿ ಲಾಭಕ್ಕಾಗಿ ಕ್ರಿಮಿನಲ್ ಗಳನ್ನು ಬಳಸಿಕೊಳ್ಳುತ್ತದೆ : ಮೆಹಬೂಬಾ ಮುಫ್ತಿ

ಕಣ್ಣೀರಿನಲ್ಲಿ ಕುಟುಂಬ
ಕಂದಾವರ ಗ್ರಾಮದ ಕಾಡಿನಕೊಂಡದ ನಿವಾಸಿ ನಾರಾಯಣ ಆಚಾರ್‌ ಅವರ ಪುತ್ರ ರೋಶನ್‌ ಆಚಾರ್‌ (25) ಕಾಲೇಜು ವ್ಯಾಸಂಗ ಮುಗಿಸಿ ತಂದೆಯ ಕೆಲಸಕ್ಕೆ ನೆರವಾಗುತ್ತಿದ್ದರು. ತಂದೆ ಖಾಸಗಿ ಗುತ್ತಿಗೆದಾರರಾಗಿದ್ದು, ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದುದಲ್ಲದೆ, ಬಂಧು-ಬಳಗ, ಸ್ನೇಹಿತರೆಲ್ಲರಿಗೂ ಆಪ್ತವಾಗಿದ್ದರು. ನಾರಾಯಣ ಆಚಾರ್‌ಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿಯಿದ್ದು, ಆ ಪೈಕಿ ಮನೆಗೆ ಆಧಾರವಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಿನಲ್ಲಿ ದಿನಕಳೆಯುವಂತಾಗಿದೆ.

ಬಂಡೆ ಕಲ್ಲುಗಳಿಗೆ ಅಪ್ಪಳಿಸಿ ಕಾರು ಅಪ್ಪಚ್ಚಿ !
ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಕುಂದಾಪುರದಿಂದ ಕೆಂಪು ಬಣ್ಣದ ಸ್ವಿಫ್ಟ್‌ ಕಾರಿನಲ್ಲಿ ವಿರಾಜ್‌ ಹಾಗೂ ಅವರ ಸಹೋದರ ಬಂಧುಗಳಾದ ಮೂವರು ಕುಂದಾಪುರ ಕಡೆಯಿಂದ ಕುಮಟಾಗೆ ಪ್ರಯಾಣ ಬೆಳೆಸಿದ್ದರು. ಮರವಂತೆಯ ಮಾರಸ್ವಾಮಿ ದೇಗುಲಕ್ಕಿಂತ ಸ್ವಲ್ಪ ಹಿಂದೆ ಬೀಚ್‌ ಬದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಆಳದ ಸಮುದ್ರಕ್ಕೆ ಕಲ್ಲಿನ ಮೇಲಿಂದ ಉರುಳಿಕೊಂಡು ಹೋಗಿ ಪಲ್ಟಿಯಾಗಿದೆ. ಕಾರು ಮೊದಲಿಗೆ ಕಡಲ್ಕೊರೆತ ತಡೆಗಾಗಿ ಹಾಕಲಾದ ಕಲ್ಲು ಬಂಡೆಗೆ ಅಪ್ಪಳಿಸಿ ಪಲ್ಟಿಯಾಗಿ, ಸಮುದ್ರಕ್ಕೆ ಬಿದ್ದು, ಸಂಪೂರ್ಣ ಜಖಂಗೊಂಡಿತ್ತು. ಕಾರು ಚಲಾಯಿಸುತ್ತಿದ್ದ ವಿರಾಜ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ರೋಶನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಕಾರಿನಲ್ಲಿದ್ದ ಸಂದೇಶ್‌ ಹಾಗೂ ಕಾರ್ತಿಕ್‌ ಕಾರಿನಿಂದ ಹೊರಕ್ಕೆ ಬಿದ್ದು, ಪಾರಾಗಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.