ನಲ್ಲೂರು: ಮರಕ್ಕೆ ಕಾರು ಢಿಕ್ಕಿ ; ಆರು ಮಂದಿಗೆ ಗಾಯ
Team Udayavani, Sep 7, 2020, 8:44 PM IST
ಕಾರ್ಕಳ: ಇಲ್ಲಿನ ನಲ್ಲೂರು ಸಮೀಪದ ಪರಪ್ಪಾಡಿ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾಗಿರುವ ಘಟನೆ ವರದಿಯಾಗಿದೆ.
ಈ ಕಾರು ಕಾರ್ಕಳ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು ಮತ್ತು ಇದರಲ್ಲಿ ಆರು ಜನ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇಲ್ಲಿನ ಪರಪ್ಪಾಡಿ ತಿರುವಿನಲ್ಲಿ ಈ ಕಾರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಚಾಲಕನ ಸಹಿತ ಆರು ಮಂದಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ತಲೆಕೆಳಗಾಗಿ ಉರುಳಿಬಿದ್ದಿದೆ.
ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಸಿಲುಕಿದ್ದವರನ್ನು ಸ್ಥಳೀಯರು ಹೊರಗೆ ತೆಗೆದು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಕಾರಿನಲ್ಲಿದ್ದವರ ಕುರಿತಾಗಿ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಿಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ