ಉಡುಪಿ ಜಿಲ್ಲೆಯ 21 ಸರಕಾರಿ ಆಸ್ಪತ್ರೆಗೆ ಇಸಿಜಿ ಯಂತ್ರ


Team Udayavani, Nov 3, 2018, 10:34 AM IST

cord.jpg

ಕುಂದಾಪುರ: ಕೆಎಂಸಿಯ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್‌ ಅವರು ರೂಪಿಸಿದ “ಕಾರ್ಡಿಯಾಲಜಿ ಎಟ್‌ ಡೋರ್‌ ಸ್ಟೆಪ್‌’ (ಮನೆ ಬಾಗಿಲಿಗೆ ಹೃದ್ರೋಗ ಚಿಕಿತ್ಸೆ) ವಾಟ್ಸಾಪ್‌ ವೈದ್ಯಕೀಯ ಬಳಗದ ಮೂಲಕ ಸರಕಾರಿ ಆಸ್ಪತ್ರೆಗಳಿಗೆ ಇಸಿಜಿ ಯಂತ್ರ ನೀಡುವ ಕಾರ್ಯ ಮುಂದುವರಿದಿದ್ದು, ಈ ದೀಪಾವಳಿಗೆ ಉಡುಪಿ ಜಿಲ್ಲೆಯ 21 ಸರಕಾರಿ ಆಸ್ಪತ್ರೆಗಳಿಗೆ ವಿತರಣೆ ನಡೆಯಲಿದೆ. 

ಡಾ| ಕಾಮತರು ಈ ವಾಟ್ಸಾಪ್‌ ಬಳಗ ರಚಿಸಿದ್ದು, ಕೊಡಗು, ದ.ಕ., ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡದ 250 ವೈದ್ಯರು, ಈ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು ಸದಸ್ಯರಾಗಿದ್ದರು. ಮಂದಾರ್ತಿ, ಶಂಕರನಾರಾಯಣ, ತ್ರಾಸಿ, ತೆಕ್ಕಟ್ಟೆ, ತಲ್ಲೂರು, ಬಾಕೂರು, ಉಪ್ಪುಂದ, ಸಿದ್ದಾಪುರದಂತಹ ಗ್ರಾಮಾಂತರ ಪ್ರದೇಶದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ಐದು ಜಿಲ್ಲೆಗಳ ಆ್ಯಂಬುಲೆನ್ಸ್‌ ಚಾಲಕರಿದ್ದಾರೆ. ಎಂಬಿಬಿಎಸ್‌, ಆಯುಷ್‌ನ ಆಯುರ್ವೇದ, ಯುನಾನಿ, ಅಲೋಪತಿಯವರಿಗೂ ಸದಸ್ಯತ್ವದ ಅವಕಾಶ ಇದೆ. ವೈದ್ಯಕೀಯ ಹಾಗೂ ಹೃದ್ರೋಗ ಸಂಬಂಧಿ ಮಾಹಿತಿ ವಿನಿಮಯಕ್ಕಷ್ಟೇ ಸೀಮಿತವಾಗಿ ಮನೆಬಾಗಿಲಿನಲ್ಲಿ ಹೃದ್ರೋಗ ಚಿಕಿತ್ಸೆ ನೀಡುತ್ತಿದೆ. ಈ ಬಳಗ ಅನಂತರದ ದಿನಗಳಲ್ಲಿ ಅಭೂತಪೂರ್ವ ಬೆಳವಣಿಗೆ ಕಂಡಿದೆ. 

ಬೆಳವಣಿಗೆ
ಬಳಗ ಆರಂಭವಾದ ಆರೇ ತಿಂಗಳಲ್ಲಿ 6 ಜಿಲ್ಲೆಗಳ ಸರಕಾರಿ ಆಸ್ಪತ್ರೆಗಳಿಗೆ ಇಸಿಜಿ ಯಂತ್ರಗಳನ್ನು ಕರ್ಣಾಟಕ ಬ್ಯಾಂಕ್‌ ಸಹಿತ ವಿವಿಧ ದಾನಿಗಳ ನೆರವಿನಿಂದ ನೀಡ ಲಾಗಿದೆ. ಈ ಯಾವುದೇ ಸಾಮಾನ್ಯ ಆಸ್ಪತ್ರೆಯಲ್ಲಿ, ಸರಕಾರಿ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿ ಕೊಳ್ಳ ಬಹುದು. ಇದನ್ನನುಸರಿಸಿ ಹೃದಯದ ಸ್ಥಿತಿಗತಿ ಗಮನಿಸಿ ಅಗತ್ಯ ಚಿಕಿತ್ಸೆ ಅಲ್ಲೇ ಲಭ್ಯವಿದ್ದರೆ ದೊಡ್ಡ ಆಸ್ಪತ್ರೆಗಳ ಸಹವಾಸ ತಪ್ಪುತ್ತದೆ. ಈ ವಾಟ್ಸಾಪ್‌ ಗ್ರೂಪ್‌ ಆರಂಭಿಸಿ ದಾಗ “ಉದಯವಾಣಿ’ ವರದಿ ಮಾಡಿತ್ತು.

ಎಲ್ಲೆಲ್ಲಿ ?
ದೀಪಾವಳಿಗೆ ಕಾರ್ಕಳ ತಾ|ನ ಹಿರ್ಗಾನ, ಮಾಳ, ಇರ್ವತ್ತೂರು, ಬೈಲೂರು, ಈದು, ಕುಕ್ಕುಂದೂರು, ಕುಂದಾಪುರ ತಾ|ನ ಬೈಂದೂರು, ಶಿರೂರು, ಕಿರಿಮಂಜೇಶ್ವರ, ಗಂಗೊಳ್ಳಿ, ಕುಂಭಾಶಿ, ಬಸ್ರುರೂ, ಕಂಡೂರು, ಸಿದ್ದಾಪುರ, ಹಳ್ಳಿಹೊಳೆ, ಹಾಲಾಡಿ, ಬೆಳ್ವೆ, ಬಿದ್ಕಲ್‌ಕಟ್ಟೆ, ನಾಡ, ಕೊರ್ಗಿ, ಉಡುಪಿ ತಾ|ನ ಕೆಮ್ಮಣ್ಣು ಆಸ್ಪತ್ರೆಗಳಿಗೆ ನ.6, 7, 8ರಂದು ವಿತರಿಸಲಾಗುವುದು.

ಶತಕದೆಡೆಗೆ
ಡಿಸೆಂಬರ್‌ ಅಂತ್ಯದೊಳಗೆ 100 ಇಸಿಜಿ ಯಂತ್ರಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಕಾಸರಗೋಡು, ದ.ಕ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದ 34 ಕಡೆ ಇಸಿಜಿ ಯಂತ್ರ ನೀಡಲಾಗಿದೆ. ಕಾಸರಗೋಡಿನಲ್ಲಿ 15, ಕುಂದಾಪುರ 15, ಕಾರ್ಕಳ 8, ಉತ್ತರಕನ್ನಡ 8, ಚಿಕ್ಕಮಗಳೂರು 7, ಶಿವಮೊಗ್ಗ 5, ತೀರ್ಥಹಳ್ಳಿ 7, ಮಂಗಳೂರಿನ ಬೀಡಿ ಕಾರ್ಮಿಕರ ಆಸ್ಪತ್ರೆಗೆ 2 ಇಸಿಜಿ ಯಂತ್ರಗಳನ್ನು ನೀಡಲಾಗುತ್ತಿದೆ. 

ದೇಶಾದ್ಯಂತ ಆಗಲಿ
ಜನೌಷಧಿ ಕೇಂದ್ರಗಳಿಗೂ ಇಸಿಜಿ ಯಂತ್ರ ವಿತರಿಸಲಾಗಿದೆ. ಅನೇಕ ದಾನಿಗಳು ಇಸಿಜಿ ಯಂತ್ರ ನೀಡುತ್ತಿದ್ದು, ಯಾರಿಗೂ ಹೊರೆಯಾಗುವುದಿಲ್ಲ. ಈ ಅಭಿಯಾನ ದೇಶಾದ್ಯಂತ ನಡೆಯಬೇಕು. ಸೌಲಭ್ಯ ಇಲ್ಲದೆಡೆ ಹೃದ್ರೋಗಿಗಳು ಜೀವ ಕಳೆದುಕೊಳ್ಳುವಂತಾಗಬಾರದು. ಅಂತಹವರಿಗೆ ನೆರವಾಗಬೇಕು.
ಡಾ| ಪದ್ಮನಾಭ ಕಾಮತ್‌, ಹೃದ್ರೋಗ ವಿಭಾಗ ಮುಖ್ಯಸ್ಥರು, ಕೆಎಂಸಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.