ಕಾರಿಬೈಲು ಕಿ.ಪ್ರಾ. ಶಾಲೆ: ಮಕ್ಕಳಿದ್ದರೂ ರಸ್ತೆ ಸೌಕರ್ಯವಿಲ್ಲ


Team Udayavani, Oct 24, 2019, 5:54 AM IST

karibailu

ಹಳ್ಳಿಹೊಳೆ: ಇದು ಕೆರಾಡಿ ಗ್ರಾಮದಲ್ಲಿರುವ ಕಿರಿಯ ಪ್ರಾಥಮಿಕ ಶಾಲೆ. ಆದರೆ ಇಲ್ಲಿಗೆ ಬರುವ ಮಕ್ಕಳು ಕೆರಾಡಿ ಮಾತ್ರವಲ್ಲದೆ ಹಳ್ಳಿಹೊಳೆಯಿಂದಲೂ ಬರುತ್ತಾರೆ. ಕಿ.ಪ್ರಾ. ಶಾಲೆಯಾದರೂ ಇಲ್ಲಿ ಈಗ 31 ಮಕ್ಕಳಿದ್ದಾರೆ. ಆದರೆ ಇಲ್ಲಿನ ಮುಖ್ಯ ಸಮಸ್ಯೆಯೆಂದರೆ ಈ ಶಾಲೆಗೆ ಬರಲು ಸರಿಯಾದ ರಸ್ತೆ ಸೌಕರ್ಯವೇ ಇಲ್ಲ. ಇದರಿಂದ ಇಲ್ಲಿಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದು, ಬೇರೆಡೆ ಹೋಗುತ್ತಿದ್ದಾರೆ.

ಇದು ಕೆರಾಡಿ ಗ್ರಾಮದ ಕಾರಿಬೈಲು ಕಿ.ಪ್ರಾ. ಶಾಲೆಯ ದುಸ್ಥಿತಿ. ಎಲ್ಲ ಗ್ರಾಮೀಣ ಭಾಗದ ಶಾಲೆಗಳ ಸಮಸ್ಯೆಯೆಂದರೆ ಮಕ್ಕಳ ಸಂಖ್ಯೆ ಕಡಿಮೆಯಿರುವುದು. ಇಲ್ಲಿ ತರಗತಿಗೆ ಇಂತಿಷ್ಟಾದರೂ ಮಕ್ಕಳಿದ್ದಾರೆ. ಆದರೆ ಇಲ್ಲಿಗೆ ಬರಲು ರಸ್ತೆಯೇ ಇಲ್ಲ. ಈಗಿರುವುದು ಮಣ್ಣಿನ ರಸ್ತೆ. ಆದರೆ ಮಳೆ ನೀರು ಹರಿದು ಹೋಗುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಬಿಡಿ, ನಡೆದುಕೊಂಡು ಹೋಗುವುದು ಕಷ್ಟ.

ಶಾಲೆ ಬಗ್ಗೆ ಮಾಹಿತಿ
ಇದು ಕಿ.ಪ್ರಾ. ಶಾಲೆಯಾಗಿದ್ದು, 22 ವರ್ಷಗಳ ಹಿಂದೆ ಆರಂಭಗೊಂಡಿದೆ. ಈ ವರ್ಷ 1ನೇ ತರಗತಿಗೆ 8 ಮಂದಿ ದಾಖಲಾತಿ ಮಾಡಿಕೊಂಡಿದ್ದಾರೆ. ಇದಕ್ಕೂ ಹಿಂದಿನ ವರ್ಷಗಳಲ್ಲಿ ಹೆಚ್ಚಿನ ದಾಖಲಾತಿಗಳು ಆಗುತ್ತಿತ್ತು. ಆದರೆ ಇಲ್ಲಿಗ ರಸ್ತೆ ದುಸ್ಥಿತಿ ಕಂಡು, ಪೋಷಕರೇ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಈಗ 1 ರಿಂದ 5 ನೇ ತರಗತಿಯವರೆಗೆ ಒಟ್ಟು 31 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ವರ್ಷ 33 ಮಕ್ಕಳಿದ್ದರು.

ಈ ಶಾಲೆ ಕೆರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಈಗಿರುವ ಮಣ್ಣಿನ ರಸ್ತೆಯಿರುವ ಹೆಚ್ಚಿನ ಭಾಗ ಹಳ್ಳಿಹೊಳೆ ಗ್ರಾ.ಪಂ.ಗೆ ಸೇರಿದೆ. ಇದೇ ಈ ರಸ್ತೆ ಅಭಿವೃದ್ಧಿ ಕಾಣದಿರಲು ಕಾರಣವಾಗಿದೆ. ಕೆರಾಡಿಯಿಂದ ಕಾರಿಬೈಲು, ಕುಂದಲಬೈಲುವರೆಗಿನ ಸುಮಾರು 10 ಕಿ.ಮೀ. ರಸ್ತೆಗೆ ಡಾಮರೀಕರಣವಾದರೆ ಈ ಭಾಗದ ಶಾಲೆ ಮಾತ್ರವಲ್ಲದೆ ಜನರಿಗೂ ಸಾಕಷ್ಟು ಅನುಕೂಲವಾಗಲಿದೆ ಎನ್ನುವುದು ಇಲ್ಲಿನ ಜನರ ಅಭಿಪ್ರಾಯ.

ಶಿಕ್ಷಕರ ಬೇಡಿಕೆ
ಸದ್ಯಕ್ಕೆ ಈ ಶಾಲೆಯಲ್ಲಿ ಇಬ್ಬರು ಖಾಯಂ ಶಿಕ್ಷಕರಿದ್ದಾರೆ. ಒಬ್ಬರು ಬ್ರಹ್ಮಾವರ, ಮತ್ತೂಬ್ಬರು ಕೋಟೇಶ್ವರದಿಂದ ನಿತ್ಯ ಇಲ್ಲಿಗೆ ಹೋಗಿ ಬರುತ್ತಾರೆ. ಮತ್ತೂಬ್ಬರು ಗೌರವ ಶಿಕ್ಷಕರಿದ್ದು, ಅವರಿಗೆ ಪೋಷಕರೇ ಗೌರವ ಧನ ಸಂಗ್ರಹಿಸಿ ನೀಡುತ್ತಿದ್ದಾರೆ. ಇಷ್ಟೊಂದು ಮಕ್ಕಳಿದ್ದರೂ, ಕನಿಷ್ಠ ಇನ್ನೊಬ್ಬರು ಶಿಕ್ಷಕರನ್ನು ಕೊಟ್ಟರೆ ಪ್ರಯೋಜನವಾಗುತ್ತದೆ ಎನ್ನುವುದು ಹೆತ್ತವರ ಬೇಡಿಕೆಯಾಗಿದೆ.

ಎಲ್ಲರಿಗೂ ಮನವಿ ಕೊಟ್ಟಾಯಿತು..
ಕೆರಾಡಿಯಿಂದ ಕುಂದಲಬೈಲುವರೆಗಿನ ಸುಮಾರು 10 ಕಿ.ಮೀ. ರಸ್ತೆ ಡಾಮರೀಕರಣ ಮಾಡಿ ಅಂತ ಸಂಸದರು, ಶಾಸಕರು, ಜಿ.ಪಂ., ತಾ.ಪಂ., ಗ್ರಾ.ಪಂ. ಸಹಿತ ಎಲ್ಲರಿಗೂ ಅನೇಕ ಬಾರಿ ಮನವಿ ಕೊಟ್ಟಾಗಿದೆ. ಆದರೆ ಇಲ್ಲಿಯವರೆಗೆ ಯಾರೂ ಇತ್ತ ಗಮನವೇ ಹರಿಸಿಲ್ಲ. ಈ ಶಾಲೆಗೆ ಬರುವ ಮಕ್ಕಳು ಮಳೆಗೆ ಮಣ್ಣಿನ ರಸ್ತೆಯಲ್ಲಿ ಕಷ್ಟಪಟ್ಟು ನಡೆದುಕೊಂಡು ಬರುತ್ತಿದ್ದಾರೆ. ಇದಲ್ಲದೆ ಇಲ್ಲಿನ ಸುಮಾರು 40 ಮನೆಗಳ ಜನರಿಗೆ ಪಡಿತರ ತರಲು ಕೆರಾಡಿ ಪೇಟೆಗೆ ಹೋಗಬೇಕು. ಪಡಿತರಕ್ಕಿಂತ ಹೆಚ್ಚಿನ ಹಣವನ್ನು ಬಾಡಿಗೆಗೆ ನೀಡಬೇಕು.
-ಅರುಣ್‌ ಭಟ್‌, ಸ್ಥಳೀಯರು

ರಸ್ತೆಗೆ ಅನುದಾನ ಇಡಲಾಗುವುದು
ಬೈಂದೂರು ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ 250 ಕೋ.ರೂ. ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು, ಆ ಪೈಕಿ ಈ ಕೆರಾಡಿಯಿಂದ ಕುಂದಲಬೈಲುವರೆಗಿನ ರಸ್ತೆಯ ಅಭಿವೃದ್ಧಿಗೂ ಅನುದಾನ ಮೀಸಲಿರಿಸಿ, ಆದಷ್ಟು ಶೀಘ್ರ ಡಾಮರೀಕರಣ ಮಾಡಲಾಗುವುದು. ಈ ಶಾಲೆಗೂ ಅನುಕೂಲವಾಗುವುದರಿಂದ ಆದ್ಯತೆ ನೆಲೆಯಲ್ಲಿ ಈ ಬಗ್ಗೆ ಗಮನಹರಿಸಲಾಗುವುದು. ಇನ್ನೂ ಶಿಕ್ಷಕರ ಬೇಡಿಕೆ ಬಗ್ಗೆ ಶಿಕ್ಷಣಾಧಿಕಾರಿಗಳ ಜತೆಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.
-ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.