ಧರೆಗುರುಳಿದ ಪಕ್ಷಿಮರಿಗಳಿಗೆ ಪಳ್ಳದಲ್ಲಿ ಆರೈಕೆ

ಇನ್ನೂ ಎರಡು ಮರಕ್ಕೆ ಕೊಡಲಿ?

Team Udayavani, Nov 9, 2019, 5:07 AM IST

10420811UDPS8

ಉಡುಪಿ: ಮಣಿಪಾಲದ ಟೈಗರ್‌ ಸರ್ಕಲ್‌ನಿಂದ ಎಂಐಟಿವರೆಗೆ ನಡೆಯುತ್ತಿರುವ ರಾ.ಹೆ.169ಎ ಚತುಷ್ಪಥ ಕಾಂಕ್ರೀಟ್‌ ಕಾಮಗಾರಿ ಪಕ್ಷಿಗಳಿಗೆ ಕಂಟಕವಾಗಿದೆ. ರಸ್ತೆ ವಿಸ್ತರಣೆಗಾಗಿ ಹಕ್ಕಿಗಳ ಗೂಡುಗಳಿದ್ದ ಮರಗಳನ್ನು ಕಡಿಯಲಾಗಿದ್ದು ಅದೆಷ್ಟೋ ಮೊಟ್ಟೆ, ಮರಿಗಳು ಮಣ್ಣು ಪಾಲಾಗಿವೆ.

ಮಾಹಿತಿ ತಿಳಿದು ಧಾವಿಸಿದ ಅರಣ್ಯ ಇಲಾಖೆ ಹಾಗೂ ಮಣಿಪಾಲದ ಪಕ್ಷಿ ಪ್ರೇಮಿಗಳ ಸಹಕಾರದಲ್ಲಿ ಒಂದಷ್ಟು ಹಕ್ಕಿ ಮರಿಗಳನ್ನು ರಕ್ಷಿಸಿ ಮಣ್ಣಪಳ್ಳದಲ್ಲಿ ಆರೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ.

ಮಣಿಪಾಲದ ಕ್ಯಾನ್ಸರ್‌ ಆಸ್ಪತ್ರೆಯ ಮುಂಭಾಗದ ವಿಶಾಲ ಗೋಳಿಮರದ ರೆಂಬೆಕೊಂಬೆಗಳನ್ನು ಕಡಿದು ಉರುಳಿಸಲಾಗಿದ್ದು, ಈ ಮರದಲ್ಲಿ ಗೂಡುಕಟ್ಟಿ ಸಂಸಾರ ನಡೆಸಿದ್ದ ಅದೆಷ್ಟೋ ನೀರು ಕಾಗೆಗಳ ಮೊಟ್ಟೆಗಳು ನಾಶವಾದರೆ, ಆಗಷ್ಟೇ ಹಾರಲು ತವಕಿಸುತ್ತಿದ್ದ ಪಕ್ಷಿ ಮರಿಗಳ ಬದುಕು ಮಣ್ಣುಪಾಲಾಗಿದೆ.

ಈ ಮರದಲ್ಲಿ ಹಕ್ಕಿಗಳ ಗೂಡುಗಳಿರುವುದು ತಿಳಿದಿದ್ದರೂ, ದಯೆತೋರದ ಹೆದ್ದಾರಿ ಪ್ರಾಧಿಕಾರ ಹಾಗೂ ರಸ್ತೆ ಗುತ್ತಿಗೆದಾರರಿಗೆ ಪರಿಸರ ಪ್ರೇಮಿಗಳು, ಪಕ್ಷಿ ಪ್ರೇಮಿಗಳು ಹಿಡಿಶಾಪ ಹಾಕುತ್ತಿದ್ದಾರೆ. ಮರಗಳನ್ನು ಕಡಿಯಲು ಅನುಮತಿ ನೀಡುವಾಗ ಹಕ್ಕಿಗಳ ಸಂತಾನೋತ್ಪತ್ತಿ ಆದ ಅನಂತರವೇ ಕಡಿಯುವಂತೆ ಷರತ್ತು ಹಾಕಲಾಗಿತ್ತು. ಆದರೆ ಗುತ್ತಿಗೆದಾರರು ಇಲಾಖೆಯ ಗಮನಕ್ಕೆ ತಾರದೆ ಕಡಿದಿದ್ದಾರೆ.

ಇನ್ನೂ 6 ಮರಗಳಲ್ಲಿ ಹಕ್ಕಿಗಳು
ಮಣಿಪಾಲ ಬಸ್‌ ನಿಲ್ದಾಣದಿಂದ ಎಂಐಟಿವರೆಗೆ ರಸ್ತೆ ಪಕ್ಕದಲ್ಲಿರುವ 7 ಮರಗಳಲ್ಲಿ ಹಕ್ಕಿಗಳು ಸಂತಾನೋತ್ಪತ್ತಿ ಮಾಡಿಕೊಂಡಿವೆ. ಕನಿಷ್ಠ 200ಕ್ಕೂ ಅಧಿಕ ನೀರು ಕಾಗೆಗಳು, ಕೊಳಬಕ, ಬೆಳ್ಳಕ್ಕಿಗಳು ಇಲ್ಲಿ ಆಶ್ರಯ ಪಡೆದಿವೆ. ಹಲವಾರು ವರ್ಷಗಳಿಂದ ರಸ್ತೆ ಪಕ್ಕದ ಈ ಮರಗಳಲ್ಲಿ ನಗರದ ಅಷ್ಟೊಂದು ಮಾಲಿನ್ಯ, ಜಂಜಾಟದ ನಡುವೆಯೂ ಈ ಹಕ್ಕಿಗಳು ಸದ್ದಿಲ್ಲದೆ ತಮ್ಮ ಪಾಡಿಗೆ ಸಂಸಾರ ಮಾಡಿಕೊಂಡಿರುವುದು ವಿಶೇಷ.

ಕೆಎಂಸಿಯ ತುರ್ತು ಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಬೃಹತ್‌ ದೇವದಾರು ಮರದಲ್ಲಿ ನೂರಾರು ಬಾವಲಿಗಳು ವಾಸವಾಗಿದ್ದು, ಮರದ ದೊಡ್ಡ ಕೊಂಬೆಯೊಂದನ್ನು ಈಗಾಗಲೇ ಕಡಿದುರುಳಿಸಲಾಗಿದೆ. ಹೀಗಾಗಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಪಕ್ಷಿಗಳ ಆತಂಕ ತಪ್ಪಿದ್ದಲ್ಲ ಎಂದು ವಿಷಾಧ ವ್ಯಕ್ತಪಡಿಸುತ್ತಾರೆ ವೃಕ್ಷಪ್ರೇಮಿಗಳು.

ಮಣ್ಣಪಳ್ಳದಲ್ಲಿ ಆರೈಕೆ
ಧರೆಗುಳಿದ ಸುಮಾರು 50ರಷ್ಟು ನೀರು ಕಾಗೆಗಳ ಮರಿಗಳನ್ನು ಅರಣ್ಯ ಇಲಾಖೆ ವಾಹನದಲ್ಲಿ ಮಣಿಪಾಲ ಬರ್ಡ್ಸ್‌ ಗ್ರೂಪ್‌ನ ಸಹಕಾರದಲ್ಲಿ ಮಣಿಪಾಲ ಪಳ್ಳಕ್ಕೆ ಕೊಂಡೊಯ್ದು ಆರೈಕೆ ಮಾಡಲಾಗುತ್ತಿದೆ.

ಮಣಿಪಾಲ ಬಸ್‌ ನಿಲ್ದಣದಲ್ಲಿ ಇನ್ನೆರಡು ಮರಗಳಲ್ಲಿ ನೀರು ಕಾಗೆ ಹಾಗೂ ಕೊಳ ಬಕಗಳ ಹಲವಾರು ಗೂಡುಗಳಿವೆ. ನೂರಕ್ಕೂ ಅಧಿಕ ಪಕ್ಷಿಗಳು ತಮ್ಮ ಮರಿಗಳ, ಮೊಟ್ಟೆಗಳ ಪೋಷಣೆಯಲ್ಲಿ ತೊಡಗಿಕೊಂಡಿವೆ. ಆದರೆ ಇದಕ್ಕೂ ಕುತ್ತುಬರುವ ಸಾಧ್ಯತೆಗಳು ಹೆಚ್ಚಾಗಿವೆ.

ನೋವು ತರಿಸಿದೆ
ಹಾರಲಾಗದೆ ಧರೆಗುರುಳಿದ ಪಕ್ಷಿಗಳನ್ನು ಮಣ್ಣಪಳ್ಳದಲ್ಲಿ ಆರೈಕೆ ಮಾಡಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳು ಹಾಗೂ ಪಕ್ಷಿಮರಿಗಳು ನಾಶವಾಗುವಂತೆ ಮಾಡಿರುವುದು ನೋವು ತರಿಸಿದೆ.
-ತೇಜಸ್ವಿ ಆಚಾರ್ಯ
ಬರ್ಡರ್ಸ್‌ ಗ್ರೂಪ್‌, ಮಣಿಪಾಲ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.