ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು: ಉಡುಪಿ ಜಿಲ್ಲಾಧಿಕಾರಿ
Team Udayavani, May 28, 2020, 2:39 PM IST
ಉಡುಪಿ: ಅನ್ಯ ರಾಜ್ಯ ಮತ್ತು ದೇಶಗಳಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಕ್ತಾಯಗೊಳಿಸಿದ ಜನರನ್ನು ಇಂದು ಕ್ವಾರಂಟೈನ್ ಕೇಂದ್ರಗಳಿಂದ ಮನೆಗೆ ಕಳುಹಿಸಲಾಯಿತು.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಏಳು ದಿನ ಕ್ವಾರಂಟೈನ್ ಮುಗಿಸಿದವರು ಮುಂದಿನ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ. ಒಟ್ಟು 14 ದಿನ ಕ್ವಾರಂಟೈನ್ ನಲ್ಲಿ ಇದ್ದವರು ಮುಂದಿನ 14 ದಿನಗಳ ಕಾಲ ರಿಪೋರ್ಟಿಂಗ್ ಅವಧಿಯಲ್ಲಿ ಇರುತ್ತಾರೆ. ಯಾವುದೇ ರೀತಿಯ ಸೋಂಕು ಲಕ್ಷಣಗಳು ಕಂಡು ಬಂದರೆ ಕೂಡಲೇ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದರು.
ಹೋಂ ಕ್ವಾರಂಟೈನ್ ನಿಯಮ ಪಾಲನೆ ಉಲ್ಲಂಘಸಿದರೆ ಕ್ರಮಕೈಗೊಳ್ಳಲಾಗುವುದು. ಹೋಂ ಕ್ವಾರಂಟೈನ್ ನಲ್ಲಿ ಇರುವವರು ಕ್ವಾರಂಟೈನ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು. ಈ ಸಮಯದಲ್ಲಿ ಮನೆಯಿಂದ ಹೊರ ಬಂದರೆ ಮೊದಲ ಬಾರಿಗೆ ಎಚ್ಚರಿಕೆ ನೀಡಲಾಗುವುದು, ಎರಡನೇ ಬಾರಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ