ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು
Team Udayavani, Mar 25, 2020, 4:49 AM IST
ಮಾರ್ಕೆಟ್, ಅಂಗಡಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
ಉಡುಪಿ; ಸರಕಾರ ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮಾ. 31ವರೆಗೆ ಲಾಕ್ಡೌನ್ ಮಾಡಿದ್ದು, ಆದೇಶ ಪಾಲನೆಯ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದ ತಂಡ ಮಂಗಳವಾರ ನಗರದ ಮಾಲ್ಗಳಲ್ಲಿರುವ ಮಾರ್ಕೆಟ್, ತರಕಾರಿ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿದರು.
ನಗರದ ಸಿಟಿ ಸೆಂಟರ್ನಲ್ಲಿರುವ ರಿಲಯನ್ಸ್ ಮಾರ್ಟ್ಗೆ ತೆರಳಿದ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಎನ್.ವಿಷ್ಣುವರ್ಧನ್ ಅವರು ಪ್ರವೇಶದ್ವಾರದಲ್ಲಿ ನಡೆಸುತ್ತಿರುವ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಬಳಕೆ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ತರಕಾರಿ ದರಗಳನ್ನು ಪರಿಶೀಲನೆ ನಡೆಸಿದರು. ಈ ಬಗ್ಗೆ ವ್ಯವಸ್ಥಾಪಕರಿಂದ ಮಾಹಿತಿ ಪಡೆದು ಸರಕಾರದ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆ ನೀಡಿದರು.
ತರಕಾರಿ ಮಾರುಕಟ್ಟೆ ಪರಿಶೀಲನೆ
ಕೆಎಂ ಮಾರ್ಗದ ತರಕಾರಿ ಅಂಗಡಿಗೆ ಭೇಟಿ ನೀಡಿ ಗ್ರಾಹಕರ ಹಾಗೂ ಅಂಗಡಿ ಮಾಲಕರ ಸುರಕ್ಷೆ ಬಗ್ಗೆ ಸಲಹೆ ನೀಡಿದರು. ಒಬ್ಬ ಗ್ರಾಹಕನಿಂದ ಇನ್ನೊಬ್ಬ ಗ್ರಾಹಕನಿಗೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ಮತ್ತು ಮುಖಕ್ಕೆ ಮಾಸ್ಕ್ ಧರಿಸುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ತರಕಾರಿ ದರ ಏರಿಕೆ ಮಾಡದಂತೆ ಎಚ್ಚರಿಕೆ ನೀಡಿದರು. ಶೀತ, ಜ್ವರ ಲಕ್ಷಣವಿರುವವರು ಬಂದ ತತ್ಕ್ಷಣ ಆರೋಗ್ಯ ಇಲಾಖೆಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದರು.
ಲಾಡ್ಜ್ ಪರಿಶೀಲನೆ
ಎಸ್ಪಿ ವಿಷ್ಣುವರ್ಧನ್ ಅವರು ಸಮೀಪದ ಹಳೇ ಡಯಾನಾ ಸರ್ಕಲ್ ಸಮೀಪದ ಲಾಡ್ಜ್ಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ದರದಲ್ಲಿ ವ್ಯತ್ಯಾಸ ಪರಿಶೀಲನೆ
ಇದೇ ಸಂದರ್ಭ ಇತರ ಮಾರ್ಕೆಟ್ಗೂ ಇಲ್ಲಿನ ತರಕಾರಿ ದರಕ್ಕೂ ಸಾಕಷ್ಟು ವ್ಯಾತ್ಯಾಸಗಳಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರ್ಗೆ ನಿರ್ದೇಶನ ನೀಡಿದರು. ಈ ಬಗ್ಗೆಯೂ ವ್ಯವಸ್ಥಾಪಕರ ವಿರುದ್ಧ ಪ್ರತ್ಯೇಕ ದೂರು ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್