ಮಹಾರಾಷ್ಟ್ರ ಸಂಪರ್ಕ ಮುಚ್ಚಿಟ್ಟ ಲ್ಯಾಬ್ ಟೆಕ್ನಿಶಿಯನ್: ಮೊಕದ್ದಮೆ
Team Udayavani, Jun 25, 2020, 6:10 AM IST
ಉಡುಪಿ: ಕೋವಿಡ್ 19 ಪಾಸಿಟಿವ್ ಕಂಡುಬಂದ ಸ್ಥಳೀಯ ಲ್ಯಾಬ್ ಟೆಕ್ನಿಶಿಯನ್ಗೆ ಯಾವುದೇ ಸಂಪರ್ಕವಿಲ್ಲವೆಂದು ಭಾವಿಸಿದ್ದೆವು.
ಆದರೆ ಅವರು ಮಹಾರಾಷ್ಟ್ರದಿಂದ ಬಂದವರ ಜತೆಗೆ ಕಾರ್ಯಕ್ರಮ ನಡೆಸಿದ್ದ ಕಾರಣ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸೋಂಕಿತ ವ್ಯಕ್ತಿಯ ಪ್ರಾಥಮಿಕ, ದ್ವಿತೀಯ ಸಂಪರ್ಕಗಳ ಸಂಪೂರ್ಣ ಮಾಹಿತಿ ನೀಡಬೇಕು. ಆ ಮೂಲಕ ಕೋವಿಡ್ 19 ವೈರಸ್ ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಯಾರೂ ಸಹ ವಿಚಾರವನ್ನು ಮುಚ್ಚಿಡಬಾರದು. ಆ ರೀತಿ ಮಾಡುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರ ಸಹಿತ ವಿವಿಧ ಕಡೆಗಳಿಂದ ಪ್ರತಿದಿನ 200-250 ಮಂದಿ ಜಿಲ್ಲೆಗೆ ರೈಲು ಮತ್ತು ಕಾರುಗಳ ಮೂಲಕ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಅಸಾಧ್ಯವಾಗುವುದರಿಂದ ಹೋಂ ಕ್ವಾರಂಟೈನ್ ವಿಧಿಸಲಾಗುತ್ತಿದೆ.
ಗರ್ಭಿಣಿ, ಸಣ್ಣ ಮಕ್ಕಳು 65 ವರ್ಷಗಳಿಂದ ಮೇಲ್ಪಟ್ಟವರು ಹಾಗೂ ಇತರ ಕಾಯಿಲೆ ಇರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕ್ವಾರಂಟೈನ್ ಭೇಟಿ ಜಿಲ್ಲೆ ಪ್ರಥಮ
ಜಿಲ್ಲೆಯಲ್ಲಿ ಅಧಿಕಾರಿಗಳು ಶೇ. 91ರಷ್ಟು ಹೋಂ ಕ್ವಾರಂಟೈನ್ ವಿಧಿಸಿರುವ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ ರ್ಯಾಂಕಿಂಗ್ ಪಟ್ಟಿಯಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನವನ್ನು ಕಲಬುರಗಿ (ಶೇ. 81) ಪಡೆದಿದೆ. ಹೋಂ ಕ್ವಾರಂಟೈನ್ನಲ್ಲಿರುವವರು ಸೆಲ್ಫಿ ಫೋಟೋ ಕಳುಹಿಸುವುದರಲ್ಲಿ ಉಡುಪಿ ಜಿಲ್ಲೆ ಶೇ. 48ರಷ್ಟು ಸಾಧನೆ ಮಾಡಿದೆ.
– ಜಿ. ಜಗದೀಶ್, ಜಿಲ್ಲಾಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್