ಕಟಪಾಡಿ: ಮದುವೆ ಕಾರ್ಯಕ್ರಮಕ್ಕೆ ಪಡೆದುಕೊಂಡ ಕಾರನ್ನು ಮರಳಿಸದೇ ವಂಚನೆ ; ಪ್ರಕರಣ ದಾಖಲು
Team Udayavani, Jul 21, 2022, 6:32 PM IST
ಸಾಂದರ್ಭಿಕ ಚಿತ್ರ
ಕಾಪು: ಕಟಪಾಡಿ ಮೂಡಬೆಟ್ಟು ನಿವಾಸಿ ಫ್ರಾನ್ಸಿಸ್ ಕಿರಣ್ ಲಸ್ರಾದೊ ಅವರ ಬಳಿಯಿಂದ ಅಮೀರ್ ಸಾಹೇಬ್ ಎಂಬಾತ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲೆಂದು ಕೊಂಡೊಯ್ದಿದ್ದ ಕಾರನ್ನು ಮರಳಿಸದೇ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ತಿಂಗಳ ಅವಧಿಗೆ ಆರೋಪಿ ಕಾರನ್ನು ಪಡೆದುಕೊಂಡಿದ್ದು ಆತನ ಈ ಬಗ್ಗೆ ಬಳಿ ವಿಚಾರಿಸಿದಾಗ ಸ್ವಲ್ಪ ಹಣವನ್ನು ನೀಡಿ, ಮುಂಬೈಗೆ ಹೋಗಲು ಕಾರಿನ ಅಗತ್ಯವಿರುವುದಾಗಿ ತಿಳಿಸಿದ್ದನು. ಅದರಂತೆ ಆರೋಪಿಗೆ ಕಾರು ಬಿಟ್ಟು ಕೊಟ್ಟಿದ್ದು ಆರೋಪಿ ಅಮೀರ್ ಸಾಹೇಬ್ ಮುಂಬೈನಿಂದ ಬಂದ ನಂತರ ಫ್ರಾನ್ಸಿಸ್ ಅವರನ್ನು ಸಂಪರ್ಕಿಸದೇ ಹಾಗೂ ಕಾರು ಸಹ ಹಿಂತಿರುಗಿಸದೇ ವಂಚಿಸಿರುವುದಾಗಿ ಆರೋಪಿಸಲಾಗಿದೆ.
ಆರೋಪಿ ಮುಂಬೈಯಿಂದ ಮರಳಿದ ಬಳಿಕ ಬೆಂಗಳೂರಿಗೆ ಹೋಗಿದ್ದು ಅಲ್ಲಿಂದ ಬಂದ ನಂತರವೂ ಕಾರನ್ನು ನೀಡದೇ ಈ ಬಗ್ಗೆ ವಿಚಾರಿಸಿದಾಗ ಬೇರೆ ಬೇರೆ ಕಾರಣ ನೀಡಿ ಕಾರನ್ನು ಮರಳಿಸಿದೇ ಬಳಸಿದ ಹಣವನ್ನೂ ನೀಡದೇ ಸತಾಯಿಸಿದ್ದನು. ಮತ್ತೆ ಒತ್ತಡ ಹಾಕಿದಾಗ ಆರೋಪಿ ಕಾರನ್ನು ತನ್ನ ಗೆಳೆಯ ಡೇವಿಡ್ ಎಂಬಾತನಿಗೆ ನೀಡಿದ್ದು ಆತ ಬೆಂಗಳೂರಿನಲ್ಲಿರುವುದಾಗಿ ತಿಳಿಸಿದ್ದನು. ಎರಡು ತಿಂಗಳ ನಂತರವೂ ಮರಳಿ ಬಾರದೇ, ಯಾವುದೇ ಪ್ರತಿಕ್ರಿಯೆಯನ್ನೂ ನೀಡದೇ ವಂಚಿಸಿದ್ದಾನೆ. ಈ ಬಗ್ಗೆ ಆರೋಪಿಯ ಮನೆಗೆ ಹೋಗಿ ವಿಚಾರಿಸಿದಾಗ ಆರೋಪಿ ಅಮೀರ್ ಸಾಹೇಬ್ ಮತ್ತು ಆತನ ಪರಿಚಯದ ಮಂಗಳೂರಿನ ಕೋಟೆಕಾರ್ನ ಸಿದ್ದಿಕ್ ಎಂಬವರ ನಡುವೆ ಹಣಕಾಸಿನ ವ್ಯವಹಾರವಿದ್ದು, ಹಣ ಪಾವತಿ ಮಾಡದ ಕಾರಣ ಸಿದ್ದಿಕ್ ಕಾರನ್ನು ತೆಗೆದುಕೊಂಡು ಹೋಗಿದ್ದಾನೆ. ಕಾರು ಸಿದ್ದಿಕ್ ಬಳಿಯಿದ್ದು ಆತನ ಹಣ ಪಾವತಿ ಮಾಡಿದ ನಂತರ ಕಾರು ನೀಡುವುದಾಗಿ ತಿಳಿಸಿದ್ದನು. ಆ
ಆರೋಪಿ ಮತ್ತು ಸಿದ್ದಿಕ್ ನಡುವಿನ ವ್ಯವಹಾರ ಕಾರಣದಿಂದಾಗಿ ಕಾರನ್ನು ಇಟ್ಟುಕೊಂಡಿದ್ದು, ಅಮೀರ್ ಸಾಹೇಬ್ ನಂಬಿಕೆ ದ್ರೋಹ ಮಾಡಿ ಕಾರನ್ನು ಪಡೆದುಕೊಂಡಿದ್ದಾನೆ. ಆರೋಪಿ ಅಮೀರ್ ಸಾಹೇಬ್ ತನ್ನ ಕಾರನ್ನು ಯಾವುದೇ ಕಾನೂನು ಬಾಹಿರ ಕೃತ್ಯಗಳಿಗೆ ಬಳಸಿಕೊಳ್ಳುವ ಭಯವಿದೆ ಎಂದು ಫ್ರಾನ್ಸಿಸ್ ಕಿರಣ್ ಲಸ್ರಾದೊ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದಾರೆ.
ನ್ಯಾಯಾಲಯದ ಆದೇಶದಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ