ಜಾತಿ, ಲಿಂಗ ಪ್ರಭಾವವಿಲ್ಲದ ಜಾತ್ಯತೀತ ಚುನಾವಣೆಯೆ?


Team Udayavani, May 25, 2019, 6:00 AM IST

230519ASTRO65

ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ. ಶೋಭಾ ಅವರು ರಾಜ್ಯದಲ್ಲಿ ಸ್ಪರ್ಧಿಸಿದ ಬಿಜೆಪಿಯಏಕೈಕ ಮಹಿಳಾ ಅಭ್ಯರ್ಥಿಯಾಗಿರುವುದನ್ನು ಉಲ್ಲೇಖೀಸುವುದಾದರೂ ಈ ಬಾರಿಯ ಚುನಾವಣೆಯಲ್ಲಿ ಜಾತಿ, ಲಿಂಗ ಪ್ರಭಾವ ಅಷ್ಟಾಗಿ ಗೋಚರಿಸದೆ ಹೋದುದು ವಿಶೇಷ.

ಶೋಭಾಗೆ ಮಹಿಳೆಯರು ಹೆಚ್ಚು ಮತ ನೀಡಿದರು, ಶೋಭಾ ಒಕ್ಕಲಿಗರಾದ ಕಾರಣ ಅವರಿಗೆ ಒಕ್ಕಲಿಗರು ಹೆಚ್ಚಿಗೆ ಮತ ನೀಡಿದರು ಎಂದು; ಪ್ರಮೋದ್‌ ಮಧ್ವರಾಜ್‌ ಮೊಗವೀರ ಸಮುದಾಯಕ್ಕೆ ಸೇರಿದವರಾದ ಕಾರಣ ಮೊಗವೀರರು ಅವರಿಗೆ ಹೆಚ್ಚಿಗೆ ಮತ ನೀಡಿದರು ಎಂದು ಯಾರೂ ಹೇಳುವಂತಿಲ್ಲ. ಈ ಅರ್ಥದಲ್ಲಿ ಇದು ಜಾತ್ಯತೀತ ಚುನಾವಣೆ ಎನ್ನಬಹುದು.

ಮೈತ್ರಿ ಇಲ್ಲವಾದರೆ ಲಾಭವಿತ್ತೆ?
ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡದ್ದರಿಂದಲೇ ಇಂತಹ ಪರಿಸ್ಥಿತಿ ಎದುರಿಸಬೇಕಾಯಿತು ಎಂದು ಕಾಂಗ್ರೆಸ್‌ನ ಕೆಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಮಾಡಿಕೊಳ್ಳದೆ ಇದ್ದರೆ ಗೆಲುವಿನ ಸಾಧ್ಯತೆ ಇತ್ತೆ? ಉಡುಪಿಯಾಗಲೀ, ಚಿಕ್ಕಮಗಳೂರಾಗಲೀ ಕಾಂಗ್ರೆಸ್‌ನ ಕೈ ಚಿಹ್ನೆ ಜನರಿಗೆ ಚಿರಪರಿಚಿತ ಎನ್ನುವುದರಲ್ಲಿ ಅನುಮಾನವಿಲ್ಲದಿದ್ದರೂ ಈಗಿನ
ಮೋದಿ ಅಲೆ ನೋಡಿದರೆ ಯಾರು ನಿಂತರೂ ಕಷ್ಟ ಎಂಬ ಸ್ಥಿತಿ ಇದೆ. ಕೈ ಚಿಹ್ನೆ ಇಲ್ಲವಾದುದು ಮತದಾರರಿಗೆ ಒಂದಷ್ಟು ಗೊಂದಲಕ್ಕೆ ಕಾರಣವಾದದ್ದು ಮತ್ತು ಕಾಂಗ್ರೆಸ್‌ ಕಾರ್ಯಕರ್ತರಿಗೆ ತೆನೆ ಹೊತ್ತ ರೈತ ಮಹಿಳೆ ಚಿಹ್ನೆಯನ್ನು ತೋರಿಸಿ ಮತ ನೀಡಿರೆಂದು ಹೇಳಲು ಮುಜುಗರವಾದದ್ದು ನಿಜ. ಕಾಂಗ್ರೆಸ್‌ ನಾಯಕರಾದ ಪ್ರಮೋದ್‌ ಮಧ್ವರಾಜ್‌ ಒಂದು ವೇಳೆ ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸುತ್ತಿದ್ದರೆ ಈಗಿನದ್ದಕ್ಕಿಂತ ಹೆಚ್ಚಿಗೆ ಮತ ಪಡೆಯುತ್ತಿದ್ದರು ಎಂದು ಹೇಳಬಹುದಷ್ಟೆ.

ಹಿನ್ನಡೆಗೆ ಕಾರಣಗಳೇನು?
ಪ್ರಧಾನಿ ನರೇಂದ್ರ ಮೋದಿ ಎದುರು ಮತಗಳನ್ನು ಸೆಳೆಯಬಲ್ಲ ರಾಹುಲ್‌ ಗಾಂಧಿ, ಪ್ರಿಯಾಂಕಾಗಾಂಧಿಯಂತಹ ನಾಯಕರು ಪ್ರಚಾರಕ್ಕೆ ಬಾರದೆ ಹೋದುದು ನೇತ್ಯಾತ್ಮಕ ಅಂಶವೇ. ಅ) “ಸಹಬಾಳ್ವೆ’ಚುನಾವಣೆ ಘೋಷಣೆಯಾಗುತ್ತದೆ ಎನ್ನುವಾಗ “ಸಹಬಾಳ್ವೆ’ ಹೆಸರಿನ ಸಮಾವೇಶದಲ್ಲಿ ಬಂದ ಕೆಲವರ ಭಾಷಣ “ಸಹಬಾಳ್ವೆ’ ಶಬ್ದಕ್ಕೆ ವಿರುದ್ಧವಾಗಿತ್ತು ಎನ್ನಲಾಗುತ್ತದೆ ಮತ್ತು ಇದನ್ನು ಸಾಬೀತುಪಡಿಸುವಂತೆ ಜಿಲ್ಲಾಡಳಿತ ಪ್ರಕರಣವನ್ನೂ ದಾಖಲಿಸಿತ್ತು. ವಿಚಿತ್ರವೆಂದರೆ ಈ ಸಮಾವೇಶವನ್ನು ಆಯೋಜಿಸಿದ ಅಮೃತ್‌ ಶೆಣೈಯವರೇ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ಗೆ ಸೀಟು ಬಿಟ್ಟುಕೊಟ್ಟದ್ದನ್ನು ವಿರೋಧಿಸಿ ಪಕ್ಷೇತರರಾಗಿ ಸ್ಪರ್ಧಿಸಿದರು. ಅದನ್ನು ಪಕ್ಷಾತೀತ ಸಭೆ ಎಂದು ಕರೆಯಲಾಗಿತ್ತು. ಕಾಂಗ್ರೆಸ್‌ಗೆ ಪೂರಕ ಪರಿಸ್ಥಿತಿ ನಿರ್ಮಿಸುವುದಕ್ಕಾಗಿ ಈ ಸಭೆಯನ್ನು ಆಯೋಜಿಸಿದ್ದು ಗುಟ್ಟಿನ ವಿಷಯವಲ್ಲ. ಆದರೆ ಕಾಂಗ್ರೆಸ್‌ ನಾಯಕರ ನಿರ್ಣಯ ವಿರುದ್ಧ ಆಯೋಜಕರೇ ಬಂಡೇಳಬೇಕಾಯಿತು ಮತ್ತು ಪಕ್ಷದಿಂದ ಅಮಾನತುಗೊಳ್ಳಬೇಕಾಯಿತು. ಚುನಾವಣೆ ಘೋಷಣೆಯಾಗುವ ಹಂತದಲ್ಲಿ ಆಯೋಜನೆಗೊಂಡ “ಸಹಬಾಳ್ವೆ’ ಮತ್ತು ಫ‌ಲಿತಾಂಶದಲ್ಲಿ ಕಂಡುಬಂದ ಜಾತಿ, ಲಿಂಗ ದೃಷ್ಟಿ ಇಲ್ಲದ ಚುನಾವಣೆ ಒಂದಕ್ಕೊಂದು ವಿರುದ್ಧವೂ, ಸಮಾನ ಅರ್ಥವೂ ಕೊಡುವಂತಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.