ಎಳಜಿತ್: ಹಟ್ಟಿಯಿಂದ ಜಾನುವಾರು ಕಳವು
ಆರೋಪಿಗಳ ಪತ್ತೆಗೆ ಹಿಂದೂ ಸಂಘಟನೆಗಳಿಂದ ಗಡುವು
Team Udayavani, Jun 20, 2019, 9:46 AM IST
ಬೈಂದೂರು: ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಬೈಂದೂರು ಠಾಣಾ ವ್ಯಾಪ್ತಿಯ ಎಳಜಿತ್ನಲ್ಲಿ ನಡೆದಿದೆ.
ಇಲ್ಲಿನ ಸದೆಯಮ್ಮ ಗೌಡ್ತಿ ಅವರ ಮನೆಯಿಂದ 3 ದನ ಹಾಗೂ ಪಕ್ಕದ ಕೊಟ್ಟಿಗೆಯಲ್ಲಿದ್ದ 2 ದನಕರುಗಳನ್ನು ಕದ್ದೊಯ್ಯಲಾಗಿದೆ. ನಡೆಯಲಾಗದ ವಯಸ್ಸಾದ ದನವನ್ನು ಬಿಟ್ಟು ಉಳಿದೆಲ್ಲವನ್ನೂ ಕದ್ದೊಯ್ಯಲಾಗಿದೆ.
ಪತ್ತೆಗೆ 24 ಗಂಟೆ ಗಡುವು
ಬೈಂದೂರು ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅನಧಿಕೃತ ಮರಳು ಸಾಗಾಟದಂಥವುಗಳಿಗೆ ನೀಡುವ ಆದ್ಯತೆಯನ್ನು ಪೊಲೀಸರು ಇತರ ಅಪರಾಧ ಪ್ರಕರಣಗಳಿಗೆ ನೀಡುತ್ತಿಲ್ಲ. ಗೋಕಳವು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದರೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಹೇಳಿದ್ದಾರೆ.
ಎಳಜಿತ್ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಗೋ ಕಳ್ಳತನ ಪ್ರಕರಣದ ಕುರಿತು ದೂರು ನೀಡಿದರೆ ಪೊಲೀ ಸರು ಲಘುವಾಗಿ ಪರಿಗಣಿಸುತ್ತಾರೆ ಎಂದು ಹಿಂದೂ ಸಂಘಟನೆ ಮುಖಂಡ ಸುಧಾಕರ ಶೆಟ್ಟಿ ನೆಲ್ಯಾಡಿ ಹೇಳಿದ್ದಾರೆ.
ಪೊಲೀಸರಿಗೆ ಮನವಿ
ಜಾನುವಾರು ಕಳವು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸಂತ್ರಸ್ತರು ಬೈಂದೂರು ಠಾಣಾಧಿಕಾರಿಗೆ ಮನವಿ ಸಲ್ಲಿಸಿದರು. ಸುಧಾಕರ ಶೆಟ್ಟಿ ನೆಲ್ಯಾಡಿ, ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ, ಶರತ್ ಶೆಟ್ಟಿ ಉಪ್ಪುಂದ, ಆಕಾಶ್ ಪೂಜಾರಿ ಮುಂತಾದವರಿದ್ದರು.
ನಿರಂತರ ಕಳವು
ಠಾಣಾ ವ್ಯಾಪ್ತಿಯಲ್ಲಿ ಹಲCattle stolenವು ದಿನಗಳಿಂದ ನಿರಂತರ ಕಳವು ನಡೆಯುತ್ತಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!