ಆಹಾರ ಸೇವನೆಯಲ್ಲಿ ಎಚ್ಚರಿಕೆ ಅಗತ್ಯ: ಚಂದ್ರಶೇಖರ ಶೆಟ್ಟಿ
Team Udayavani, Sep 24, 2019, 5:49 AM IST
ಕೋಟ: ಹಿಂದಿನ ಆಹಾರ ಪದ್ದತಿಯಲ್ಲಿ ನೈಸರ್ಗಿಕವಾದ ಪೌಷ್ಟಿಕಾಂಶಗಳು ಸಿಗುತಿತ್ತು. ಹೀಗಾಗಿ ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲರಿಗೂ ಹೆಚ್ಚುವರಿ ಪೌಷ್ಠಿಕಾಂಶ ಅಗತ್ಯವಿರಲಿಲ್ಲ. ಆದರೆ ಇಂದಿನ ಆಹಾರ ಪದ್ಧತಿ ವಿಷಕಾರಿ ಅಂಶಗಳಿಂದ ಕೂಡಿದೆ. ಹೀಗಾಗಿ ಆಹಾರ ಸೇವನೆಯಲ್ಲಿ ಎಚ್ಚರಿಕೆ ಮತ್ತು ಪೂರಕ ಪೌಷ್ಟಿಕಾಂಶ ಅಗತ್ಯವಿದೆ ಎಂದು ಜನಜಾಗೃತಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಚ್ಲಾಡಿ ತಿಳಿಸಿದರು.
ಅವರು ಸೆ.22ರಂದು ಮಧುವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಧುವನ ಒಕ್ಕೂಟ ವ್ಯಾಪ್ತಿಯ ನೇತ್ರಾವತಿ ಜ್ಞಾನವಿಕಾಸ ಕೇಂದ್ರ ನೇತೃತ್ವದಲ್ಲಿ ಜರಗಿದ ಪೌಷ್ಠಿಕ ಆಹಾರದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯೋಜನಾಧಿಕಾರಿ ದಿನೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ಅನುಸೂಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆಶಾ ಕಾರ್ಯಕರ್ತೆ ಭವಾನಿ ಪೌಷ್ಟಿಕಾಂಶದ ಆಹಾರಗಳ ಕುರಿತು ಮಾಹಿತಿ ನೀಡಿದರು.ಯೋಜನೆಯ ಸೇವಾಪ್ರತಿನಿಧಿ ಲಕ್ಷ್ಮೀ ಸ್ವಾಗತಿಸಿ, ನೇತ್ರಾವತಿ ಪ್ರಾಸ್ತಾವಿಕ ಮಾತನಾಡಿದರು ಹಾಗೂ ಸುಲೋಚನಾ ಕಾರ್ಯಕ್ರಮ ನಿರೂಪಿಸಿ, ಜ್ಯೋತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್