ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ 25 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ
ಪ್ರಧಾನಿ ಮೋದಿ, ಹರದೀಪ ಸಿಂಗ್ ಪುರಿಯವರಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ
Team Udayavani, Jan 12, 2023, 5:14 PM IST
ಉಡುಪಿ : ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472KL + 3000KL ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಜನವರಿ 12ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ 2500 ಕೆಎಲ್ ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದ ಕರಾವಳಿ ಮೀನುಗಾರರು ಕೇಂದ್ರದಿಂದ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ. ಮೀನುಗಾರಿಕೆಯನ್ನೆ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಮನವಿ ಮಾಡಿದ್ದು, ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಹರದೀಪ ಸಿಂಗ್ ಪುರಿಯವರು ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹರದೀಪ ಸಿಂಗ್ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ನಾಡಿನ ಸಮಸ್ತ ಮೀನುಗಾರರ ಪರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದಾ ತಮ್ಮೊಂದಿಗೆ ಇದೆ. ಕೇಂದ್ರ ಸರ್ಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿರೆಂದುಶೋಭಾ ಕರಂದ್ಲಾಜೆಯವರು ಮೀನುಗಾರರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್