ಸರಕಾರಿ ಪಿಯು ವಿದ್ಯಾರ್ಥಿಗಳಿಗೂ ಸಿಇಟಿ, ನೀಟ್ ತರಬೇತಿ
ನವೆಂಬರ್ ಮೊದಲ ವಾರದಿಂದ ಆರಂಭಕ್ಕೆ ಪಿಯು ಇಲಾಖೆ ಸಿದ್ಧತೆ
Team Udayavani, Oct 26, 2022, 6:50 AM IST
ಉಡುಪಿ: ರಾಜ್ಯದ ಸರಕಾರಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ ಹಾಗೂ ಸಿಇಟಿ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ನವೆಂಬರ್ ಮೊದಲ ವಾರದಿಂದ ಆಯಾ ಜಿಲ್ಲಾ ಪಂಚಾಯತ್ ಸಹಕಾರದೊಂದಿಗೆ ಈ ತರಬೇತಿ ನಡೆಯಲಿದೆ.
ದ್ವಿತೀಯ ಪಿಯುಸಿ ಅನಂತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಾಗೂ ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಎದುರಿಸಬೇಕು. ಈ ಪರೀಕ್ಷೆಗಳ ರ್ಯಾಂಕ್ ಆಧಾರದಲ್ಲಿಯೇ ಕೋರ್ಸುಗಳಿಗೆ ಸೀಟು ಹಂಚಿಕೆಯಾಗುತ್ತದೆ. ಹಾಗಾಗಿ ನಿತ್ಯದ ತರಗತಿಯ ಜತೆ ಒಂದು ತಾಸು ತರಬೇತಿ ನೀಡಲಾಗುತ್ತದೆ.
ತಾಲೂಕು ಮಟ್ಟದಲ್ಲಿ ತಯಾರಿ
ತಾಲೂಕು ಮಟ್ಟ ದಲ್ಲಿ ವಿಷಯ ತಜ್ಞರಿಗೆ ತರಬೇತಿ ನೀಡ ಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಹೇಗೆ ಎದುರಿಸಬೇಕು, ಸಿದ್ಧತೆ ಹೇಗಿರ ಬೇಕು ಎಂಬ ಜತೆಗೆ ಪ್ರತೀ ವಿಷಯದ ವಿಸ್ತೃತವಾದ ವಿವರಣೆ ನೀಡಲಾಗುತ್ತದೆ. ಹಲವು ಖಾಸಗಿ ಪ.ಪೂ. ಕಾಲೇಜುಗಳಲ್ಲಿ ಇಂಥ ತರಬೇತಿ ನೀಡಲಾಗುತ್ತದೆ.
ಕಾಲೇಜುಗಳ ಆಯ್ಕೆ
ತರಬೇತಿಗೆ ಸೂಕ್ತ ಮೂಲ ಸೌಕರ್ಯಗಳಿರುವ ಕಾಲೇಜುಗಳನ್ನು ಆಯ್ಕೆ ಮಾಡ ಲಾಗಿದೆ. ವಿದ್ಯಾರ್ಥಿಗಳು ತಮ್ಮ ಗೊಂದಲ ಬಗೆಹರಿಸಲು ಯಾವ ಕಾಲೇಜುಗಳಲ್ಲಿ ಯಾವ ಯಾವ ವಿಷಯ ತಜ್ಞರು ಲಭ್ಯರಿರುವರು ಎಂಬ ಮಾಹಿತಿಯನ್ನೂ ಆಯಾ ಕಾಲೇಜುಗಳ ಪ್ರಾಂಶುಪಾಲರ ಮೂಲಕ ನೀಡಲಾಗುತ್ತದೆ.
ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗಳಿಗೆ ಸಿಇಟಿ ಮತ್ತು ನೀಟ್ ಕೋಚಿಂಗ್ ನೀಡಲು ವ್ಯವಸ್ಥೆ ಮಾಡಿ ಕೊಳ್ಳುತ್ತಿದ್ದೇವೆ. ನಮ್ಮಲ್ಲಿ ಇರುವ ವಿಷಯ ತಜ್ಞರ ಮೂಲಕವೇ ಕೊಡಿಸ ಲಾಗುವುದು. – ಬಿ.ಸಿ. ನಾಗೇಶ್
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ
2021-22ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆೆ
ಹಾಜರಾದವರು-6,83,563
ಪಾಸಾದವರು-4,22,966
ವಿಜ್ಞಾನ
ವಿದ್ಯಾರ್ಥಿಗಳು-2,10,284
ಪಾಸಾದವರು-1,52,525
ದಕ್ಷಿಣ ಕನ್ನಡ
ಹಾಜರಾತಿ – 31,330
ತೇರ್ಗಡೆ – 26,432
ಉಡುಪಿ
ಹಾಜರಾತಿ-15,267
ತೇರ್ಗಡೆ- 12807
ಸಿಇಟಿ ಬರೆದವರು ಒಟ್ಟಾರೆ ರಾಜ್ಯಾ ದ್ಯಂತ 2.10ಲಕ್ಷ ವಿದ್ಯಾರ್ಥಿಗಳು
ನೀಟ್ ಬರೆದವರು- 1.22 ಲಕ್ಷ
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ