ಸಿಇಟಿ ಫ‌ಲಿತಾಂಶ ಪ್ರಕಟವಾದ ಅನಂತರವೂ ರ್‍ಯಾಂಕ್‌ ತಗಾದೆ… ಗೊಂದಲ ಏನು?


Team Udayavani, Aug 4, 2022, 9:19 AM IST

ಸಿಇಟಿ ಫ‌ಲಿತಾಂಶ ಪ್ರಕಟವಾದ ಅನಂತರವೂ ರ್‍ಯಾಂಕ್‌ ತಗಾದೆ

ಉಡುಪಿ : ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್‌ ಪ್ರವೇಶಕ್ಕೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫ‌ಲಿತಾಂಶ ಪ್ರಕಟನೆಯ ಅನಂತರವೂ ರ್‍ಯಾಂಕ್‌ ವಿಚಾರವಾಗಿ ಸಾವಿರಾರು ವಿದ್ಯಾರ್ಥಿಗಳು ತಗಾದೆ ಎತ್ತಿದ್ದರು.

ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರು ಈ ಸಂಬಂಧ ಮಂಗಳವಾರ ಇಲಾಖೆ ಮತ್ತು ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಸಿಇಟಿ ರ್‍ಯಾಂಕ್‌ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂಬ ನಿಲುವನ್ನು ಸ್ಪಷ್ಟಪಡಿಸಿದ್ದರು.

ಗೊಂದಲ ಏನು?
ಹೊಸ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಜತೆಗೆ ಸಿಇಟಿಯನ್ನು ಬರೆದಿದ್ದಾರೆ. ಆದರೆ ಪುನರಾವರ್ತಿತ ಅಭ್ಯರ್ಥಿಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಇರಲಿಲ್ಲ. ಆ ವರ್ಷ ಎಲ್ಲರನ್ನೂ ತೇರ್ಗಡೆ ಮಾಡಲಾಗಿತ್ತು. ಅಲ್ಲದೆ ಆ ವರ್ಷಕ್ಕೆ ಸೀಮಿತವಾಗಿ ವೃತ್ತಿಪರ ಕೋರ್ಸ್‌ ಗಳ ಸೀಟು ಹಂಚಿಕೆಗೆ ಸಿಇಟಿ ರ್‍ಯಾಂಕ್‌ ಮಾತ್ರ ಪರಿಗಣಿಸಲಾಗುತ್ತದೆ. ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿ ಕಾರ ಸ್ಪಷ್ಟಪಡಿಸಿತ್ತು. ಕಳೆದ ವರ್ಷ ಪರೀಕ್ಷೆ ಎದುರಿಸಿದ ಹಲವು ವಿದ್ಯಾರ್ಥಿಗಳು ರ್‍ಯಾಂಕ್‌ ಆಧಾರದಲ್ಲಿ ಕಾಲೇಜಿಗೆ ದಾಖಲಾಗಿರಲಿಲ್ಲ. ಈ ವರ್ಷ ಪುನರ್‌ ಪರೀಕ್ಷೆ ಬರೆದಿದ್ದು, ಪ್ರಸಕ್ತ ಸಾಲಿನ ನಿಯಮದಂತೆ ನಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಫ‌ಲಿತಾಂಶ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಸರಕಾರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ಹೊಂದಿದ್ದು, 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಕಠಿನ ಮಾರ್ಗಸೂಚಿಯಂತೆ ನಡೆದಿದೆ. ಆದರೆ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿಲ್ಲ. ಹೀಗಾಗಿ ಈ ಎರಡು ಸಾಲಿನ ವಿದ್ಯಾರ್ಥಿಗಳನ್ನು ಸಮಾನವಾಗಿ ಪರಿಗಣಿಸಲು ಸಾಧ್ಯವಿಲ್ಲ.

ಅಲ್ಲದೆ 2021ರ ಸಿಇಟಿ ಫ‌ಲಿತಾಂಶದಲ್ಲಿ ಯಾವುದೇ ಕಟ್‌ ಆಫ್ ಇಲ್ಲದೆ ಎಲ್ಲರಿಗೂ ರ್‍ಯಾಂಕ್‌ ನೀಡಲಾಗಿತ್ತು. ರ್‍ಯಾಂಕ್‌ ಆಧಾರದಲ್ಲೇ ಸೀಟು ಹಂಚಿಕೆ ಮಾಡಲಾಗಿತ್ತು. ಈ ವರ್ಷ ಕೊರೊನಾ ಬರುವ ಮೊದಲಿದ್ದ ನಿಯಮ ಮುಂದುವರಿಸಲಾಗಿದೆ. ಹೀಗಾಗಿ 2020-21ನೇ ಸಾಲಿನ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಅಂಕ ಪರಿಗಣಿಸಿದಲ್ಲಿ ಹೊಸ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪುನರಾವರ್ತಿತ ಅಭ್ಯರ್ಥಿಗಳಿಗೆ ಸಿಇಟಿ ರ್‍ಯಾಂಕ್‌ ಆಧಾರದಲ್ಲಿ ಕಳೆದ ವರ್ಷದಂತೆ ಸೀಟು ಹಂಚಿಕೆ ಇರಲಿದೆ. ಹೊಸ ಅಭ್ಯರ್ಥಿಗಳಿಗೆ ಸಿಇಟಿ ರ್‍ಯಾಂಕ್‌ ಜತೆಗೆ ದ್ವಿತೀಯ ಪಿಯುಸಿ ಅಂಕವನ್ನೂ ಪರಿಗಣಿಸಲಾಗುತ್ತದೆ. ಸುಮಾರು 24 ಸಾವಿರ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ. ಅವರ ದ್ವಿತೀಯ ಪಿಯುಸಿ ಅಂಕವನ್ನು ಪರಿಗಣಿಸಿದಲ್ಲಿ 1.50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಹೊಸ ಅಭ್ಯರ್ಥಿ ಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಎಲ್ಲ ಆಯಾಮ ಗಳಲ್ಲೂ ಚರ್ಚೆ ನಡೆಸಿ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.

ಕಳೆದ 4 ವರ್ಷಗಳ ಮಾಹಿತಿ
2019ರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆ ಬರೆದ 1.80 ಲಕ್ಷ ಮಂದಿಯಲ್ಲಿ 1.40 ಲಕ್ಷ ಮಂದಿಗೆ ರ್‍ಯಾಂಕ್‌ ನೀಡಲಾಗಿತ್ತು. 2020ರಲ್ಲಿ 1.94 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 1.75 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು, 1.55 ಲಕ್ಷ ಮಂದಿಗೆ ರ್‍ಯಾಂಕ್‌ ನೀಡಲಾಗಿತ್ತು. 2021ರಲ್ಲಿ 2.01 ಲಕ್ಷ ಮಂದಿ ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದು, 1.93 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಎಲ್ಲರಿಗೂ ರ್‍ಯಾಂಕ್‌ (ಕೊ ರೊನಾ ಹಿನ್ನೆ ಲೆ ಯ ಲ್ಲಿ) ನೀಡಲಾಗಿತ್ತು. 2022ರಲ್ಲಿ 2.16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದು, 2.10 ಲಕ್ಷ ಮಂದಿಗೆ ರ್‍ಯಾಂಕ್‌ ನೀಡಲಾಗಿದೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.