ಪೊಲೀಸರಿಗೆ ಸವಾಲಾಗುತ್ತಿದೆ ಆನ್‌ಲೈನ್‌ ದೋಖಾ!

ಮಿತಿಮೀರಿದ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳ ಬಳಕೆ

Team Udayavani, Oct 15, 2019, 5:44 AM IST

Untitled-1

ಉಡುಪಿ: ಪೇಪರ್‌ಲೆಸ್‌ ಹಾಗೂ ಆನ್‌ಲೈನ್‌ ವ್ಯವಹಾರಗಳು ಹೆಚ್ಚುತ್ತಿರುವ ಜತೆ ಜತೆಗೆ ಆನ್‌ಲೈನ್‌ ವಂಚನೆಗಳ ಪ್ರಮಾಣವೂ ಅಧಿಕವಾಗುತ್ತಿದೆ. ಇದನ್ನು ಭೇದಿಸುವುದು ಪೊಲೀಸರಿಗೂ ಸವಾಲಿನ ಕೆಲಸವಾಗುತ್ತಿದೆ.

ಜಿಲ್ಲೆಯ ಸೆನ್‌ ಠಾಣೆಯಲ್ಲಿ 2018ರಲ್ಲಿ 19 ಪ್ರಕರಣಗಳು ದಾಖಲಾಗಿವೆ. 2019ರ ಅಕ್ಟೋಬರ್‌ ವರೆಗೆ 20 ಪ್ರಕರಣಗಳು ದಾಖಲಾಗಿವೆ. ಸೈಬರ್‌ ವಿಭಾಗದಲ್ಲಿರುವ ಪೊಲೀಸರಿಗೂ ಸೈಬರ್‌ ಪ್ರಕರಣಗಳ ಬಗ್ಗೆ ತರಬೇತಿ ನೀಡಲಾಗಿದೆ. ಪೊಲೀಸ್‌ ಇಲಾಖೆಯ ಸೈಬರ್‌ ಸೆಲ್‌ಗ‌ೂ ತಂತ್ರಜ್ಞಾನ ಪರಿಣತರ ನೇಮಕಕ್ಕೆ ಗೃಹ ಇಲಾಖೆ ಮುಂದಾಗಿದೆ. ಹಣಕ್ಕಾಗಿ ಎಟಿಎಂ ಪಿನ್‌ ಪಡೆದು ವಂಚನೆ, ಸ್ಕಿಮ್ಮಿಂಗ್‌ ಅಪರಾಧಗಳು ಹೆಚ್ಚಾಗಿ ಕಂಡುಬರುತ್ತಿವೆ.

ವೈವಾಹಿಕ ಜಾಲತಾಣಗಳಲ್ಲಿ ವಂಚನೆ, ಉದ್ಯೋಗ ಆಮಿಷ ನೀಡಿ ವಂಚನೆ, ಎಟಿಎಂ ವಂಚನೆಗಳು ತಂತ್ರಜ್ಞಾನ ಬೆಳೆದಂತೆ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಆನ್‌ಲೈನ್‌ ದೋಖಾ
ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್‌ ಮೂಲಕ ವಿವಿಧ ಬ್ಯಾಂಕ್‌ ಖಾತೆಗಳಿಗೆ ಮುಂಗಡವಾಗಿ ಹಣ ಹಾಕಿಸಿಕೊಂಡು ವಿವಿಧ ಕಾರಣಗಳನ್ನು ನೀಡಿ (ಪ್ರೊಸೆಸ್‌ ಫೀಸ್‌, ಪ್ಲೇಸ್‌ಮೆಂಟ್‌ ಫೀಸ್‌ ಮತ್ತು ಜಾಬ್‌ ಪ್ಯಾಕೇಜ್‌ ಫೀಸ್‌) ಎಂದು ನಾನಾ ರೀತಿಯಲ್ಲಿ ಹಣ ಪಡೆದು ಉದ್ಯೋಗ ಕೊಡಿಸದೆ ಮೋಸ ಮಾಡುವ ಘಟನೆಗಳೂ ನಡೆಯುತ್ತಿವೆ.

ಸ್ಕಿಮ್ಮಿಂಗ್‌ ಡಿವೈಸ್‌
ಕೆಲವು ಎಟಿಎಂಗಳಲ್ಲಿ ಸ್ಕಿಮ್ಮಿಂಗ್‌ ಡಿವೈಸ್‌ ಅಳವಡಿಸಿ ಎಟಿಎಂ ಕಾರ್ಡ್‌ನ ಮಾಹಿತಿ ಪಡೆದು ಹಣ ಲಪಟಾಯಿಸುವ ಘಟನೆಗಳು ರಾಜ್ಯದ ಕೆಲವೆಡೆ ನಡೆಯುತ್ತಿವೆ. ಈ ಕಾರಣಕ್ಕಾಗಿಯೇ ಬಹುತೇಕ ಮಂದಿ ಸೆಕ್ಯೂರಿಟಿ ಗಾರ್ಡ್‌ಗಳಿರುವ ಎಟಿಎಂಗಳನ್ನು ಬಳಸುತ್ತಾರೆ.

ಉಡುಪಿಯ ಸೆನ್‌ ಅಪರಾಧ ಪತ್ತೆ ದಳದಲ್ಲಿ ಈ ವರ್ಷ 20 ಪ್ರಕರಣಗಳು ದಾಖಲಾಗಿವೆ. ಹಲವು ಮಂದಿ ಎಟಿಎಂ ವಂಚನೆಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದರು. ಕೆಲವು ವರ್ಷಗಳ ಹಿಂದೆ ಮಣಿಪಾಲದ ಬಟ್ಟೆ ಅಂಗಡಿಯೊಂದರಲ್ಲಿ ಎರಡು ಸ್ವೆ„ಪ್‌ ಮೆಷಿನ್‌ಗಳನ್ನಿಟ್ಟು ಮಾಹಿತಿ ಕದ್ದು ಎಟಿಎಂನಿಂದ ಹಣ ಪಡೆದು ವಂಚನೆ, ದತ್ತು ಮಗು ನೀಡುವುದಾಗಿ ಆನ್‌ಲೈನ್‌ನಲ್ಲಿ ಹಣ ಪಡೆದು ವಂಚನೆ, ಚಿಕಿತ್ಸಾಲಯ ನೋಂದಣಿಗೆ ಸಂಬಂಧಿಸಿ ಆನ್‌ಲೈನ್‌ನಲ್ಲಿ ವಂಚಿಸಿರುವ ಬಗ್ಗೆ ದೂರುಗಳು ದಾಖಲಾಗಿವೆ. ಇಷ್ಟೇ ಅಲ್ಲದೆ ಮತ್ತೂರ್ವರ ಖಾತೆಗಳಿಗೆ ಕನ್ನ ಹಾಕುವುದು, ಸಾಮಾಜಿಕ ಜಾಲತಾಣಗಳಲ್ಲಿ ನೀಲಿಚಿತ್ರಗಳ ವೀಕ್ಷಣೆ, ವೈರಸ್‌ ದಾಳಿ, ಸಾಫ್ಟ್ವೇರ್‌ ಪೈರಸಿ, ಆನ್‌ಲೈನ್‌ ಗ್ಯಾಂಬ್ಲಿಂಗ್‌, ಫೋರ್ಜರಿ ಪ್ರಕರಣಗಳು ಈ ಸೈಬರ್‌ ಕ್ರೈಂ ವ್ಯಾಪ್ತಿಯೊಳಗೆ ಸೇರುತ್ತವೆ.

ಬಳಕೆಯಲ್ಲಿ ಜಾಗರೂಕತೆ ಅಗತ್ಯ
ಆನ್‌ಲೈನ್‌ನಲ್ಲಿ ವ್ಯವಹರಿಸುವಾಗ ಹೆಚ್ಚಿನ ಜಾಗರೂಕತೆ ಇರಬೇಕು. ಆಮಿಷಗಳಿಗೆ ಒಳಗಾಗಿ ಅಥವಾ ದುರಾಸೆಯಿಂದ ಹಣ ಕಳೆದುಕೊಂಡವರು ಅನೇಕ ಮಂದಿ ಇದ್ದಾರೆ. ಇಂಥ ಪ್ರಕರಣಗಳನ್ನು ಭೇದಿಸಲಿಕ್ಕಾಗಿ ತಂತ್ರಜ್ಞಾನ, ಆ್ಯಪ್‌ಗ್ಳನ್ನು ಬಳಸಲಾಗುತ್ತದೆ. ಜನರು ಎಚ್ಚರಿಕೆಯಿಂದ ಇದ್ದರೆ ಇಂಥ ಅನೇಕ ವಂಚನೆಗಳಿಂದ ಪಾರಾಗಬಹುದು.
-ನಿಶಾ ಜೇಮ್ಸ್‌
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು

ಹೊಸ ತಂತ್ರಜ್ಞಾನಕ್ಕೆ ಪ್ರಸ್ತಾವ
ಸೈಬರ್‌ ಕ್ರೈಂ ಪ್ರಕರಣಗಳು ವರ್ಷಂಪ್ರತಿ ಹೆಚ್ಚಾಗುತ್ತಿವೆ. ಪೊಲೀಸ್‌ ಇಲಾಖೆ ಕೂಡ ಈ ಬಗ್ಗೆ ಜಾಗೃತವಾಗಿದೆ. ಈಗಾಗಲೇ ಇದರ ಪತ್ತೆಗೆ ತಂತ್ರಜ್ಞಾನಗಳನ್ನು ಬಳಸಲಾಗುತ್ತದೆ. ಹೊಸ ರೀತಿಯ ತಾಂತ್ರಿಕ ಉಪಕರಣಗಳಿಗೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಈ ವರ್ಷಾಂತಕ್ಕೆ ಸೇವೆ ಲಭ್ಯವಾಗುವ ನಿರೀಕ್ಷೆ ಇದೆ. ಈ ಮೂಲಕ ಸೈಬರ್‌ ಕ್ರೈಂ ಪ್ರಕರಣಗಳನ್ನು ಸುಲಭವಾಗಿ ಪತ್ತೆಹಚ್ಚಲು ಪೊಲೀಸ್‌ ಇಲಾಖೆ ಶ್ರಮಿಸುತ್ತಿದೆ.
-ಸೀತಾರಾಮ್‌, ಇನ್‌ಸ್ಪೆಕ್ಟರ್‌, ಸೆನ್‌ ಅಪರಾಧ ಪೊಲೀಸ್‌ ಠಾಣೆ, ಉಡುಪಿ

ಇತರ ಕಳ್ಳತನ ಪ್ರಕರಣಗಳೂ ಹೆಚ್ಚಳ
ಇತ್ತೀಚೆಗೆ ಉಡುಪಿ ಶ್ರೀ ಕೃಷ್ಣಮಠದ ಪರಿಸರದಲ್ಲಿ ಹೋಗುತ್ತಿದ್ದ ಹಿರಿಯ ವ್ಯಕ್ತಿಯೋರ್ವರಿಗೆ ಬೈಕ್‌ನಲ್ಲಿ ಬಂದ ಇಬ್ಬರು ತಾವು ಪೊಲೀಸರೆಂದು ಪರಿಚಯಿಸಿ ದೂರದಲ್ಲಿ ಗಲಾಟೆ ನಡೆಯುತ್ತಿದೆ; ನಿಮ್ಮ ಚಿನ್ನಾಭರಣವನ್ನು ಟವೆಲ್‌ನಲ್ಲಿ ಕಟ್ಟಿಕೊಡುತ್ತೇವೆ ಎಂದು ತಿಳಿಸುತ್ತಾರೆ. ಅದರಂತೆ ಅವರು ಚಿನ್ನ ನೀಡಿದಾಗ ಟವೆಲ್‌ ಅನ್ನು ಮಾತ್ರ ಅವರಿಗೆ ನೀಡಿ ಚಿನ್ನವನ್ನು ಎಗರಿಸುತ್ತಾರೆ. ಕೆಲ ದಿನಗಳ ಹಿಂದೆ ಉಡುಪಿಯ ಮೈತ್ರಿ ಕಾಂಪ್ಲೆಕ್ಸ್‌ಗೆ ನುಗ್ಗಿ 12 ಲ.ರೂ. ನಗದು ದೋಚಿದ ಘಟನೆಯೂ ನಡೆದಿದೆ. ಈ ಬಗ್ಗೆಯೂ ಪೊಲೀಸರು ನಿಗಾ ಇರಿಸಿದ್ದಾರೆ.

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.